Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹತ್ವದ ಕಾರ್ಯಾಚರಣೆಯಲ್ಲಿ ಅಂತಾರಾಜ್ಯ ಖತರ್ನಾಕ್ ಕಳ್ಳನನ್ನು ಬಂಧಿಸಿದ ಪೊಲೀಸರು..!

ಬೆಳಗಾವಿ: ಮಹತ್ವದ ಕಾರ್ಯಾಚರಣೆಯಲ್ಲಿ ಕರ್ನಾಟಕ ಪೊಲೀಸರು 10 ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡು ಖತರ್ನಾಕ್ ಅಂತಾರಾಜ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗಡಹಿಂಗ್ಲಜ್ ತಾಲೂಕಿನ ಕರಂಬಳಿ ಗ್ರಾಮದ ವಿಶಾಲ್ ಸಂಜಯ್ ಮೋರೆ ಬಂಧಿತ. ಕೊನೆಗೂ ನಿಪ್ಪಾಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ನಿಪ್ಪಾಣಿ ಹಾಲಸಿದ್ದನಾಥ ಮಂದಿರ ಬಳಿ ನಿಪ್ಪಾಣಿ ಬಸವೇಶ್ವರ ಪೊಲೀಸ್ ಠಾಣೆಯ ಪಿಎಸ್ಐ ರಮೇಶ ಪವಾರ್ ಕಾರ್ಯನಿರತರಾಗಿದ್ದಾಗ ಕಳ್ಳ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಮೂರು ತಿಂಗಳಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರಗಳಿಂದ ದ್ವಿಚಕ್ರ ವಾಹನ ಕಳ್ಳತನ ಮಾಡಿ ಪಡಲಿಹಾಳ ಗ್ರಾಮದ ಜನ ವಸತಿ ಇಲ್ಲದ ಪ್ರದೇಶದಲ್ಲಿ ಮೂರು ದ್ವಿಚಕ್ರ ವಾಹನ ಹಾಗೂ ಸ್ಥಳೀಯ ದನಗಳಪೇಟೆ ಬಳಿಯ ಜನ ವಸತಿ ಇಲ್ಲದ ಪ್ರದೇಶದ ಗಿಡಗಂಟಿಗಳಲ್ಲಿ ಆರು ದ್ವಿಚಕ್ರ ವಾಹನ ಮಾರಾಟ ಮಾಡಲು ಮುಚ್ಚಿಟ್ಟಿದ್ದ ಸಂಗತಿ ಈಗ ಬೆಳಕಿಗೆ ಬಂದಿದೆ. ಈತನಿಂದ ಒಟ್ಟು ರೂ.4.14 ಲಕ್ಷ ಮೌಲ್ಯದ 10 ಬೈಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿಪಿಐ ಬಿ.ಎಸ್. ತಳವಾರ ನೇತೃತ್ವದಲ್ಲಿ ಈ ಕಾರ್ಯಾಚರಣೆಯನ್ನು ಪೊಲೀಸರು ನಡೆಸಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?