Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಶೇಷಚೇತನ ಮಗು ದತ್ತು ಪಡೆದ ಇಟಲಿ ದಂಪತಿ

 

ಬೆಳಗಾವಿ: ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ ಬಾಲಕಲ್ಯಾಣ ಕೇಂದ್ರದಲ್ಲಿನ ವಿಶೇಷಚೇತನ ಮಗುವನ್ನು ಇಟಲಿ ದೇಶದ ದಂಪತಿ ಸೋಮವಾರ ದತ್ತು ಪಡೆದರು.

ಇಟಲಿಯ ಪ್ಲಾರೆನ್ಸ್ ನಗರದ ನಿವಾಸಿಗಳಾದ ಕೋಸ್ತಾಂಜಾ ಹಾಗೂ ಬುಜಾರ್ ಡೆಡೆ ದಂಪತಿ ದತ್ತು ಪಡೆದವರು. ಈ ದಂಪತಿಗೆ ಮಕ್ಕಳಿಲ್ಲ. ಕೋಸ್ತಾಂಜಾ ಅವರು ಇಟಲಿ ಸರ್ಕಾರಿ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ವೈದ್ಯರಾಗಿದ್ದರೆ, ಬುಜಾರ್ ಡೆಡೆ ಅಪಘಾತದಲ್ಲಿ ಅಂಗವಿಕಲರಾಗಿದ್ದಾರೆ. ಅವರಂತೆ ಅಪಘಾತದಲ್ಲಿ ಕಾಲು ಕಳೆದುಕೊಂಡವರಿಗೆ ತರಬೇತಿ ನೀಡುತ್ತಾರೆ.

ದತ್ತು ಪಡೆದ ಎರಡೂವರೆ ವರ್ಷದ ಮಗುವಿಗೆ ಆನಂದ ಎಂದು ಹೆಸರಿಡಲಾಗಿದೆ. ಈ ಮಗು ಅವಧಿಪೂರ್ವ ಜನಿಸಿತ್ತು. ಆಗ 1.3 ಕೆಜಿ ತೂಕ ಮಾತ್ರ ಇತ್ತು. ದೃಷ್ಟಿದೋಷವೂ ಸೇರಿ ಆರೋಗ್ಯದ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದೆ. ಹೆತ್ತವರು ಬಿಟ್ಟುಹೋದ ಹಸುಳೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ರಕ್ಷಣೆ ಮಾಡಿದ್ದರು. ಎರಡೂವರೆ ವರ್ಷಗಳಿಂದ ಗಂಗಮ್ಮ ಚಿಕ್ಕುಂಬಿಮಠ ಬಾಲಕಲ್ಯಾಣ ಕೇಂದ್ರದಲ್ಲಿ ಪೋಷಣೆ ಮಾಡಲಾಗಿದೆ.

ಪೋಷಕರು ಕೂಲಂಕಶ ವಿಚಾರ ಮಾಡಿ, ಆರೋಗ್ಯವಂತ ಮಗುವನ್ನು ಮಾತ್ರ ಪಡೆಯುತ್ತಾರೆ. ತಮ್ಮ ಭವಿಷ್ಯಕ್ಕೆ ಮಗು ಆಸರೆಯಾಗುತ್ತದೆ ಎಂದು ಯೋಚಿಸುತ್ತಾರೆ. ಆದರೆ, ಕೋಸ್ತಾಂಜಾ ಹಾಗೂ ಬುಜಾರ್ ಡೆಡೆ ದಂಪತಿ ವಿಶೇಷಚೇತನ ಮಗುವಿಗೆ ಹೊಸಬಾಳು ನೀಡಲು ಬಂದಿದ್ದಾರೆ. ತಮಗೆ ಮಕ್ಕಳಾಗಲಿಲ್ಲ ಎಂದು ಕೊರಗದೇ, ವಿಶೇಷ ಚೇತನ ಮಗುವೊಂದನ್ನು ಪೋಷಣೆ ಮಾಡಲು ಮುಂದಾಗಿದ್ದು ಪ್ರಶಂಸನೀಯ ಎಂದು ಬಾಲಕಲ್ಯಾಣ ಕೇಂದ್ರದ ಅಧ್ಯಕ್ಷೆ ಡಾ.ಮನಿಷಾ ಭಾಂಡನಕರ್ ತಿಳಿಸಿದರು.

ಈ ದಂಪತಿ ಆರು ವರ್ಷಗಳ ಹಿಂದೆ ದತ್ತು ಪಡೆಯಲು ಅರ್ಜಿ ಸಲ್ಲಿಸಿದ್ದರು. 'ಕಾರಾ' ನಿಯಮ (ಸೆಂಟ್ರಲ್ ಅಡಾಪ್ಟನ್ ರಿಸೋರ್ಸ್ ಅಥಾರಿಟಿ)ದಂತೆ ಎಲ್ಲವನ್ನೂ ಪರಿಶೀಲಿಸಿ, ಸಂದರ್ಶನ ಮಾಡಿ ಮಗು ದತ್ತು ನೀಡಲಾಗಿದೆ. ಮಂಗಳವಾರ (ಫೆ.18) ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಮಗುವನ್ನು ಹಸ್ತಾಂತರಿಸಲಾಗುವುದು ಎಂದು ಅವರು ಹೇಳಿದರು.

ಈ ಕೇಂದ್ರದಿಂದ ಈವರೆಗೆ 120 ಮಕ್ಕಳನ್ನು ದತ್ತು ನೀಡಲಾಗಿದೆ. ಅದರಲ್ಲಿ 13 ಮಕ್ಕಳನ್ನು ವಿದೇಶಿ ಪೋಷಕರು ಪಡೆದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ