Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿ ಚುನಾವಣೆ ಕಚೇರಿ ಆರಂಭಿಸಿದ ಜಗದೀಶ ಶೆಟ್ಟರ್

 

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಷ್ಟ್ರಮಟ್ಟದ ಅನೇಕ ನಾಯಕರನ್ನು ಬೆಳಗಾವಿಗೆ ಆಹ್ವಾನಿಸಲಾಗಿದೆ ಎಂದು ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹೇಳಿದರು.

ಬೆಳಗಾವಿಯಲ್ಲಿ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿ, ಏಪ್ರಿಲ್ 17 ರಂದು ಮೆರವಣಿಗೆ ಮೂಲಕ ನಾನು ಅಪಾರ ಅಭಿಮಾನಿಗಳ ಜೊತೆ ತೆರಳಿ ನಾಮಪತ್ರ ಸಲ್ಲಿಸಲಿದ್ದೇವೆ. ಅಪಾರ ಸಂಖ್ಯೆಯಲ್ಲಿ ಜನ ಸೇರಲಿದ್ದು ಅನೇಕ ರಾಷ್ಟ್ರೀಯ ನಾಯಕರನ್ನು ಬೆಳಗಾವಿಗೆ ಬರುವಂತೆ ಮನವಿ ಮಾಡಿಕೊಳ್ಳಲಾಗಿದೆ. ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಸಂಪರ್ಕಿಸಲಾಗಿದ್ದು ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಬೆಳಗಾವಿ ಅಭಿವೃದ್ಧಿಗೆ ನಾನು ಅಪಾರ ಕೆಲಸ ಮಾಡಿದ್ದೇನೆ. ಮುವತ್ತು ವರ್ಷದ ಕಾಲ ಬೆಳಗಾವಿ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಆದರೆ, ಕಾಂಗ್ರೆಸ್ ನಾಯಕರು ಮಾಡುವ ಆರೋಪದಲ್ಲಿ ಯಾವ ಹುರುಳು ಇಲ್ಲ. ಅವರ ಮಾತುಗಳಲ್ಲಿ ಯಾವುದೇ ಸತ್ಯಾಂಶ ಇಲ್ಲ. ನಾನು ಆಯ್ಕೆಯಾದರೆ ಬೆಳಗಾವಿಯ ಜನಪ್ರತಿನಿಧಿಯಾಗಿ ಕೆಲಸ ಮಾಡುವೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ, ದೇಶದ ಸುಭದ್ರತೆ ವಿಚಾರವೇ ಈ ಸಲದ ಪ್ರಧಾನ ವಿಷಯವಾಗಿದೆ. ಮುಂದಿನ ಪ್ರಧಾನಿ ಯಾರಾಗಬೇಕು ಎಂಬ ವಿಚಾರದ ಮೇಲೆಯೂ ಚುನಾವಣೆ ಅವಲಂಬಿತವಾಗಿದೆ. ಹೀಗಾಗಿ ಈ ಚುನಾವಣೆಯಲ್ಲಿ ಜಾತಿ ಪ್ರಭಾವ ನಡೆಯದು. ಜಾತಿ ಹೊರತಾದ ದೇಶದ ಭದ್ರತೆ ವಿಚಾರದ ಮೇಲೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು