Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಳಗಾವಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಜಗದೀಶ ಶೆಟ್ಟರ್

ಬೆಳಗಾವಿ :ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಂಸದ ಜಗದೀಶ ಶೆಟ್ಟರ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಅಹ್ವಾನಿಸಿದ್ದಾರೆ.

ಬೆಳಗಾವಿ ಬಾರ್ ಅಸೋಸಿಯೇಷನ್ , ಬೆಳಗಾವಿ ತನ್ನ ಅಸ್ತಿತ್ವದ 150 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ 150 ( ನೂರ ಐವತ್ತು ವರ್ಷ) ನೇ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಮಾರಂಭಕ್ಕೆ ಅಧ್ಯಕ್ಷರು ಬೆಳಗಾವಿ ಬಾರ್ ಅಸೋಸಿಯೇಷನ್ ಇವರ ಮನವಿಯಂತೆ "ಮುಖ್ಯ ಅತಿಥಿ" ಗಳಾಗಿ ಆಗಮಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿಯವರನ್ನು ಜಗದೀಶ ಶೆಟ್ಟರ ಅವರು ನವ ದೆಹಲಿಯ ಸಂಸದ ಭವನದ ಕಚೇರಿಯಲ್ಲಿ ಇಂದು ಭೇಟಿ ಮಾಡಿ, ವಿನಂತಿಸಿದರು.

150 ( ನೂರ ಐವತ್ತು ವರ್ಷ) ನೇ ವಾರ್ಷಿಕೋತ್ಸವ ಸಮಾರಂಭವು ತಾತ್ಕಾಲಿಕವಾಗಿ ದಿನಾಂಕ: 4ನೇ ಅಕ್ಟೋಬರ 2025 ರಂದು ಆಯೋಜಿತಗೊಂಡಿರುತ್ತದೆ. ರಾಜ್ಯಾದ್ಯಂತ ಸುಮಾರು 20 ಸಾವಿರಕ್ಕೂ ಅಧೀಕ ಸಂಖ್ಯೆಯಲ್ಲಿ ವಕೀಲರ ಸಮೂಹ ಭಾಗವಹಿಸಲಿದ್ದು, ಅದರಂತೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಸಹ ಇದರಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಬಗ್ಗೆ ಒಪ್ಪಿಗೆ ಸೂಚಿಸುವಂತೆ ವಿನಂತಿಸಿದರು.

ಮನವಿಯನ್ನು ಅವಲೋಕಿಸಿದ ಪ್ರಧಾನ ಮಂತ್ರಿಗಳು, ಈ ಪ್ರಸ್ತಾಪಿತ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಇದರಲ್ಲಿ ಭಾಗವಹಿಸುವ ಬಗ್ಗೆ ತಮ್ಮ ಭರವಸೆಯನ್ನು ನೀಡಿದರು ಜಗದೀಶ ಶೆಟ್ಟರ ತಿಳಿಸಿದ್ದಾರೆ.

ಬೆಳಗಾವಿ - ಬೆಂಗಳೂರು - ಬೆಳಗಾವಿ ನಡುವೆ "ವಂದೇ ಭಾರತ" ಎಕ್ಸಪ್ರೆಸ್ ರೈಲು ಸಂಚಾರಕ್ಕೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಅದರಂತೆ ರೈಲು ಶೀಘ್ರ ಪ್ರಸ್ತಾಪಿತ ಮಾರ್ಗದಲ್ಲಿ ಸಂಚರಿಸುವ ಬಗ್ಗೆ ಹಸಿರು ನಿಶಾನೆ ತೋರಿಸಲು ಪ್ರಧಾನ ಮಂತ್ರಿಗಳಲ್ಲಿ ಇದೇ ಸಂದರ್ಭದಲ್ಲಿ ವಿನಂತಿಸಲಾಯಿತು. ಈ ಬಗ್ಗೆ ಅಗತ್ಯ ಸೂಚನೆಯನ್ನು ಕೇಂದ್ರ ರೇಲ್ವೆ ಸಚಿವರಿಗೆ ನೀಡುವುದಾಗಿ ಸಹ ಅವರು ತಿಳಿಸಿರುವುದಾಗಿ ಜಗದೀಶ ಶೆಟ್ಟರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ