Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಹೆಡ್ ಕಾನ್ ಸ್ಟೇಬಲ್ ನಿಧನಕ್ಕೆ ಕಂಬನಿ ಮಿಡಿದ ಪೊಲೀಸರು

 

ಬೆಳಗಾವಿ: ಬೆಳಗಾವಿ ಕಮಿಷನರ್ ವ್ಯಾಪ್ತಿಯ ಕ್ಯಾಂಪ್ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್, ಮೂಲತಃ ಸಂತಿಬಸ್ತವಾಡ ಗ್ರಾಮದವರಾದ ಮಲ್ಲಸರ್ಜ ಅಂಕಲಗಿ (45) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಲ್ಲಸರ್ಜ ಅಂಕಲಗಿ ಅವರು ಎಂದಿನಂತೆ ಕರ್ತವ್ಯ ಮುಗಿಸಿಕೊಂಡು ಶನಿವಾರ ರಾತ್ರಿ ಊಟ ಮಾಡಿ ಮಲಗಿದ್ದಾರೆ. ರವಿವಾರ ಬೆಳಕು ಹರಿದರೂ ಮಲಗಿಯೇ ಇದ್ದು ಏಳದ ಅವರನ್ನು ಮನೆಯವರು ಎಬ್ಬಿಸಲು ಹೋದಾಗ ವಿಷಯ ಬೆಳಕಿಗೆ ಬಂದಿದೆ.

ಅವರ ಅಕಾಲಿಕ ‌ನಿಧನಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ‌ನಿರ್ವಹಿಸುತ್ತಿದ್ದ ಇವರು ಎಲ್ಲ ಸಿಬ್ಬಂದಿಗಳಿಗೆ ಅಚ್ಚು ಮೆಚ್ಚಿನವರಾಗಿದ್ದರು. ಮಲ್ಲಸರ್ಜ ಅವರ ನಿಧನದಿಂದ ಅವರನ್ನು ಅವಲಂಬಿಸಿದ್ದ ಕುಟುಂಬಕ್ಕೆ ದೊಡ್ಡ ಆಘಾತವಾಗಿದೆ.

ಸಂತಿಬಸ್ತವಾಡದ ಬಡ ಕುಟುಂಬದಲ್ಲಿ ಜನಿಸಿದ ಅವರು, ಕಷ್ಟ ಪಟ್ಟು ಓದಿ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡು ಕುಟುಂಬಕ್ಕೆ ಆಧಾರವಾಗಿದ್ದರು.
ಅವರ ಪುಟ್ಟ ಮಕ್ಕಳು ಸದ್ಯ ಓದುತ್ತಿದ್ದಾರೆ. ಮಕ್ಕಳ ಓದಿನ ಬಗ್ಗೆ ಅಪಾರ ಕನಸು ಕಂಡಿದ್ದ ಮಲ್ಲಸರ್ಜ ಅಂಕಲಗಿ ಅವರು ಭವಿಷ್ಯದಲ್ಲಿ ಅವರಿಗೆ ಉನ್ನತ ವಿದ್ಯಾಭ್ಯಾಸ ನೀಡಿ ದೊಡ್ಡ ವ್ಯಕ್ತಿಗಳನ್ನಾಗಿ ಮಾಡುವ ಕನಸು ಕಂಡಿದ್ದರು. ಜೊತೆಗೆ ತಾವು ಸಹಾ ಮುಂದಿನ ದಿನಗಳಲ್ಲಿ ಬಡ್ತಿ ಹೊಂದುತ್ತಿರುವ ವಿಷಯವನ್ನು ಸ್ನೇಹಿತರಲ್ಲಿ ಹಂಚಿಕೊಂಡು ಸಂತಸ ಪಡುತ್ತಿದ್ದರು. ಬೆಳಗಾವಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ ಅವರು ಅಪಾರ ಸ್ನೇಹ ವಲಯವನ್ನು ಸೃಷ್ಟಿಸಿಕೊಂಡಿದ್ದರು. ಹೀಗಾಗಿ ಅವರು ಜನಪ್ರಿಯ ಪೊಲೀಸ್ ಎಂದು ಗುರುತಿಸಿಕೊಂಡಿದ್ದರು ಅವರ ನಿಧನಕ್ಕೆ ಪೊಲೀಸರು ಹಾಗೂ ನಾಗರಿಕರು ಕಂಬನಿ ಮಿಡಿದಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು