Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

'ಶುಭವಾಗಲಿ' ಬರೆಯಲು ಬಾರದ ಕನ್ನಡ ಸಂಸ್ಕೃತಿ ಸಚಿವ ತಂಗಡಗಿ ; ವಿಡಿಯೋ ಟ್ರೋಲ್ ಬೆನ್ನಲ್ಲೇ ಬಿಜೆಪಿ ವ್ಯಂಗ್ಯ ಕಾಂಗ್ರೆಸ್‌ ಸರ್ಕಾರ ಅನಕ್ಷರಸ್ಥರ ದೊಡ್ಡಿ ಎಂದು ಟೀಕೆ

 

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ 'ಶುಭವಾಗಲಿ' ಎಂದು ಬರೆಯಲು ಪರದಾಡಿದ್ದನ್ನು ಬಿಜೆಪಿ ವ್ಯಂಗ್ಯವಾಡಿದೆ. ಅನಕ್ಷರಸ್ಥರ ದೊಡ್ಡಿಯಾಗಿರುವ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತೆಗೆ ಕೊಳ್ಳಿ ಇಟ್ಟಿದೆ. ಇಂತಹ ಮಹಾನ್ ಮೇಧಾವಿಗಳಾದ ಕನ್ನಡ ಮತ್ತು ಸಂಸ್ಕೃತಿ ಸಚಿವರನ್ನು ಪಡೆದ ಕರುನಾಡು ಪಾವನ ಎಂದು ಬಿಜೆಪಿ ಟೀಕಿಸಿದೆ.

ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಭೇಟಿ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ 'ಶುಭವಾಗಲಿ' ಎಂದು ಬರೆಯಲು ಪರದಾಡಿದ್ದರು. 'ಶಬ' ಎಂದು ಬರೆದ ಬಳಿಕ ಬೆಂಬಲಿಗರು ಶುಭ ಮಾಡಲು ಸೂಚಿಸಿದ್ದರಿಂದ ಆನಂತರ ಸರಿಯಾಗಿ ಬರೆದಿದ್ದರು. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಶಿಕ್ಷಣ ಸಚಿವರ ರೀತಿಯಲ್ಲೇ ಕನ್ನಡ ಸಂಸ್ಕೃತಿ ಸಚಿವರಿಗೂ ಕನ್ನಡ ಓದಲು, ಬರೆಯಲು ಬರಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಕುರಿತು ವ್ಯಂಗ್ಯವಾಡಿದೆ. ಕನ್ನರಾಮಯ್ಯ ಸರ್ಕಾರದಿಂದ ಕನ್ನಡದ ಕಗ್ಗೋಲೆ ಎಂದಿರುವ ಬಿಜೆಪಿ, ಕನ್ನಡ ಓದಲು ಬರೆಯಲು ಬಾರದ ಅನಕ್ಷರಸ್ಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಒಂದು ಕಡೆಯಾದರೆ, ಕನ್ನಡದ ಸುಲಭವಾದ ಪದವನ್ನು ಬರೆಯಲು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವಿಲ ವಿಲ ಒದ್ದಾಡಿದ್ದಾರೆ. ಅನಕ್ಷರಸ್ಥರ ದೊಡ್ಡಿಯಾಗಿರುವ ಕಾಂಗ್ರೆಸ್‌ ಸರ್ಕಾರ ಕನ್ನಡದ ಅಸ್ಮಿತೆಗೆ ಕೊಳ್ಳಿ ಇಟ್ಟಿದೆ ಎಂದು ವ್ಯಂಗ್ಯವಾಡಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?