Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೆಬ್ಬಾಗಿಲು ಮಾತ್ರ ಕನ್ನಡವೇ ಇರಲಿ: ಡಾ. ಕುಮಾರ ತಳವಾರ

ಸಂಕೇಶ್ವರ : ಅನ್ಯ ಧರ್ಮಗಳನ್ನು ಗೌರವಿಸುವ, ಇತರ ಭಾಷೆಗಳನ್ನು ಪ್ರೀತಿಸುವ ಔದಾರ್ಯವಿರುವ ಕನ್ನಡಿಗರ ಮನೆಯಲ್ಲಿ ಕಿಟಕಿಗಳು ಯಾವುದೆ ಭಾಷೆಯಾದರೂ ಇರಬಹುದು, ಆದರೆ ಹೆಬ್ಬಾಗಿಲು ಮಾತ್ರ ಕನ್ನಡವೇ ಇರಲಿ ಎಂದು ಪ್ರಾಧ್ಯಾಪಕ ಡಾ. ಕುಮಾರ ತಳವಾರ ಹೇಳಿದರು.

ಇಲ್ಲಿನ ಬ್ರಿಲಿಯಂಟ್ ಸಿಬಿಎಸ್‌ಇ ಶಾಲೆಯಲ್ಲಿ ಜರುಗಿದ 70 ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು. ಬಾದಾಮಿಯ ಕಪ್ಪೆ ಅರಭಟ್ಟನ ಶಾಸನವನ್ನು ಉಲ್ಲೇಖಿಸಿ, ಕನ್ನಡಿಗರು ಒಳ್ಳೆಯವರೊಂದಿಗೆ ಒಳ್ಳೆಯವರಾಗಿ, ಮಧುರವಾಗಿ ವ್ಯವಹರಿಸುವವರೊಂದಿಗೆ ಮಧುರವಾಗಿ ವರ್ತಿಸುವ ಗುಣವನ್ನು ಹೊಂದಿದ್ದಾರೆ ಎಂದು ವಿವರಿಸಿದರು.

ಕನ್ನಡದ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಕಡ್ಡಾಯಗೊಳಿಸಲು ಪ್ರೀತಿ ಮತ್ತು ವಿಶ್ವಾಸದಿಂದ ಒತ್ತಾಯಿಸಬೇಕು. ಗಡಿ ಭಾಗದಲ್ಲಿ ಕನ್ನಡದ ಬಗ್ಗೆ ಹೆಚ್ಚು ಗಮನ ಹರಿಸಲು ಹಾಗೂ ಭಾಷಾ ಪ್ರೇಮವನ್ನು ಕ್ರಿಯಾತ್ಮಕವಾಗಿ ತೋರಿಸಲು ಎಲ್ಲರೂ ಮುಂದಾಗಬೇಕೆಂದು ಎಂದರು.

ಮನೆಯ ಭಾಷೆ ಯಾವುದೇ ಇರಲಿ, ಕರ್ನಾಟಕ ರಾಜ್ಯದ ಭೌಗೋಳಿಕ ಪ್ರದೇಶದಲ್ಲಿ ವಾಸಿಸುವ ಎಲ್ಲಾ ಜನರೂ ಕನ್ನಡಿಗರು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಶಿಕ್ಷಕಿಯರಾದ ಧನಶ್ರೀ ಕೇಸ್ತಿ, ಶ್ವೇತಾ ನಾಯಿಕ ಮತ್ತು ವಿದ್ಯಾರ್ಥಿನಿಯರಾದ ಸಾಕ್ಷತಾ ಮಠದ, ಸಾದಿಯಾ ಮಗದುಮ್ ಮಾತನಾಡಿದರು.

ಆಡಳಿತಾಧಿಕಾರಿ ವಿನಯ ಹಾಲದೇವರಮಠ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ಸಂದೀಪ ಮಹಾಳಂಕ, ರಾಜು ಗಡಕರಿ, ಪ್ರಾಚಾರ್ಯೆ ನಸೀಮಾ ಢಾಂಗೆ ಹಾಗೂ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಧ್ವಜಾರೋಹಣ ನೆರವೇರಿಸಲಾಯಿತು. ವಿದ್ಯಾರ್ಥಿಗಳು ಸ್ವಾಗತ ಗೀತೆ ಹಾಡಿದರು.
ಪೃಥ್ವಿರಾಜ ಬಸ್ತವಾಡಿ ಸ್ವಾಗತಿಸಿದರು. ರಷಿಕಾ ಹುದ್ದಾರ ನಿರೂಪಿಸಿದರು. ಶಿಕ್ಷಕಿ ಉಮಾ ಆಲೂರಿ ಪರಿಚಯಿಸಿದರು. ಶಿಕ್ಷಕಿ ದೀಪಾ ಕೇದಾರಶೆಟ್ಟಿ ವಂದಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು