Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಶಿವಾಜಿ ಕಾಗಣೀಕರ ಅವರು ಪ್ರಸ್ತುತ ಸಮಾಜಕ್ಕೆ ಮಾದರಿ ವ್ಯಕ್ತಿ

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಮಾಜಶಾಸ್ತ್ರ ಸಂಘದಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಪ್ರಸಕ್ತ ವರ್ಷದ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಲಾಯಿತು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿವಾಜಿ ಕಾಗಣೀಕರ ಮಾತನಾಡಿ, ಸಮಾಜವನ್ನು ಕಟ್ಟುವುದರಲ್ಲಿ ಸಮಾಜಶಾಸ್ತ್ರದ ಕೊಡುಗೆ ಅಪಾರವಾಗಿದೆ. ಪರಿಸರದಲ್ಲಿ ದಯೆಯು ಅತ್ಯವಶ್ಯಕವಾಗಿದೆ. ದೇಶ ಸ್ವರಾಜ್ಯವಾಗಬೇಕಾದರೆ ಎಲ್ಲರು ಶಿಕ್ಷಣವನ್ನು ಕಲಿಯಬೇಕು ಎಂದು ಹೇಳಿದರು.

ಪ್ರೊ. ಚಂದ್ರಿಕಾ ಕೆ.ಬಿ. ಮಾತನಾಡಿ, ಶಿವಾಜಿ ಕಾಗಣೀಕರ ಅವರು ಪ್ರಸ್ತುತ ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಿದ್ದಾರೆ ಎಂದು ಹೇಳಿದರು.

ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸುಮಂತ್ ಎಸ್. ಹಿರೇಮಠ ಅವರು ಶಿವಾಜಿ ಕಾಗಣೀಕರ ಅವರು ಪರಿಸರಕ್ಕೆ ಅಪಾರವಾದ ಕೊಡುಗೆಗಳನ್ನು ನೀಡಿದ್ದಾರೆ. ಸಮಾಜಶಾಸ್ತ್ರ ವಿದ್ಯಾರ್ಥಿಗಳು ಇಂಥವರ ವಿಷಯಗಳನ್ನು ಅರಿತು ಅವರ ವಿಚಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ರವಿ ಎಸ್ ದಳವಾಯಿ ಮಾತನಾಡಿ, ಸಮಾಜಶಾಸ್ತ್ರದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯು ಇಂದಿನ ವಿದ್ಯಾರ್ಥಿಗಳಿಗೆ ಅತೀ ಅವಶ್ಯಕವಾಗಿದೆ. ಸಮಾಜಶಾಸ್ತ್ರ ಸಂಘದ ಮುಖ್ಯಸ್ಥೆ ಡಾ. ಮಂಜುಳಾ ಜಿ.ಕೆ. ಅವರು ಶಿವಾಜಿ ಕಾಗಣೀಕರ ಅವರು ಸರಳ ಮತ್ತು ಮಾದರಿ ಜೀವಿಯಾಗಿದ್ದಾರೆ. ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ ಎಂದು ಹೇಳಿದರು.

ಶ್ರವಣ ಸನದಿ ಮತ್ತು ಅಂಬಿಕಾ ಕುಂಬಾರ ಪ್ರಾರ್ಥಿಸಿದರು. ರಂಜಿತಾ ಪಾಟೀಲ ಮತ್ತು ಪೂಜಾ ಐಹೊಳೆ ನಿರೂಪಿಸಿದರು. ಶ್ರೀಶೈಲ್ ಉಳ್ಳಾಗಡ್ಡಿ ವಂದಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?