Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಿಸಿಸಿ ಬ್ಯಾಂಕ್ ಚುನಾವಣೆಗೆ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಹೆಸರು ಅಂತಿಮ



ಖಾನಾಪುರ : ಡಿಸಿಸಿ ಬ್ಯಾಂಕ್ ಚುನಾವಣೆಗೆ ಖಾನಾಪುರ ತಾಲೂಕಿನಿಂದ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಅವರ ಹೆಸರು ಅಂತಿಮಗೊಂಡಿದೆ.

ಈ ಬಗ್ಗೆ ಗುರುವಾರ ಖಾನಾಪುರ ಶಾಂತಿನಿಕೇತನ ಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸರ್ವ ಪಕ್ಷಗಳ ಪ್ರತಿನಿಧಿಗಳಿಂದ 10 ಸದಸ್ಯರಿಂದ ರಚಿಸಲಾದ ಆಯ್ಕೆ ಸಮಿತಿಯ ಅಧ್ಯಕ್ಷ ಯಶವಂತ ಬಿರ್ಜೆ ಅವರು ಮಾಹಿತಿ ನೀಡಿದರು. ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಲುವಾಗಿ ಸಮಿತಿಯನ್ನು ರಚಿಸಲಾಗಿತ್ತು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ ವಿಠ್ಠಲ ಹಲಗೇಕರ ಮತ್ತು ಸಮಾಜಸೇವಕ ರಾಜು ಸಿದ್ದಾಣಿ ಅವರ ಹೆಸರು ಪ್ರಸ್ತಾಪವಾಗಿತ್ತು. ಆದರೆ ಆಗಸ್ಟ್ 27 ರಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಂದ ಮೂಲಕ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆಯಿಂದ ಹಿಂದೆ ಸರಿಯುವ ಮಾಹಿತಿ ಲಭಿಸಿದೆ. ಇದೀಗ ಉಳಿದವರರು ಶಾಸಕ ವಿಠ್ಠಲ ಹಲಗೇಕರ ಮತ್ತುರಾಜು ಸಿದ್ಧಾಣಿ ಅವರ ಬಗ್ಗೆ ಚರ್ಚೆ ನಡೆದ ನಂತರ ವಿಠ್ಠಲ ಹಲಗೇಕರ ಅವರ ಹೆಸರನ್ನು ಅಂತಿಮವಾಗಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಒಟ್ಟು 55 ಪಿಕೆಪಿಎಸ್ ಸಹಕಾರ ಸಂಘಗಳು ಮತದಾನಕ್ಕೆ ಅರ್ಹತೆ ಪಡೆದಿವೆ. ಆದರೆ, ಬಹುಮತಕ್ಕೆ ಕನಿಷ್ಠ 28 ಸಂಘಗಳ ಬೆಂಬಲ ಅವಶ್ಯ. ಪ್ರಸ್ತುತ ನಮ್ಮ ಬಳಿ 35 ಸಂಘಗಳ ಬೆಂಬಲ ಇರುವುದರಿಂದ ನಮ್ಮ ಜಯ ನಿಶ್ಚಿತ ಎಂದು ಅವರು ತಿಳಿಸಿದರು.

ಶಾಸಕ ವಿಠ್ಠಲ ಹಲಗೇಕರ, ಗರ್ಲಗುಂಜಿ ಪಿಕೆಪಿಎಸ್ ಅಧ್ಯಕ್ಷ ರಾಜು ಸಿದ್ದಾಣಿ, ಸಮಾಜ ಸೇವಕ ಇರ್ಫಾನ್ ತಾಳಿಕೋಟಿ, ಶಿವಸೇನೆ ನಾಯಕ ಪಿ.ಕೆ. ಪಾಟೀಲ, ಪಿಕೆಪಿಎಸ್ ಅಧ್ಯಕ್ಷ ಲಕ್ಷ್ಮಣ ಕಸಬೇಕರ, ಮಹಾದೇವ ಘಾಡಿ, ಭರಮಾಣಿ ಪಾಟೀಲ, ಲೈಲಾ ಶುಗರ್ ಎಂ.ಡಿ. ಸದಾನಂದ ಪಾಟೀಲ,ಇಟಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ತುರಮರಿ ಮತ್ತಿತರರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ