Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜ್ಞಾನವೇ ಭವಿಷ್ಯದ ದೀಪಸ್ತಂಭ : ಡಾ. ಅನಂತ ನಾಯಕ

ಬೆಳಗಾವಿ : ಪ್ರಸ್ತುತ ಸಂದರ್ಭದಲ್ಲಿ ಜ್ಞಾನ ಎಲ್ಲದಕ್ಕಿಂತಲೂ ಮಿಗಿಲಾದುದು, ಜ್ಞಾನವೇ ಭವಿಷ್ಯದ ದೀಪಸ್ತಂಭ ಎಂದು ರಾಜಸ್ಥಾನದ ಅಜ್ಮೇರ್ ನ ಎನ್. ಸಿ. ಇ. ಆರ್. ಟಿ. ಯ ಸಹಾಯಕ ಪ್ರಾಧ್ಯಾಪಕ ಡಾ. ಅನಂತ ಎಸ್ ನಾಯಕ ಅಭಿಪ್ರಾಯಪಟ್ಟರು.

ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದಿಂದ ಮಹಾವಿದ್ಯಾಲಯದ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಕ್ವಾಂಟಮ್ ವಿಜ್ಞಾನ ಮತ್ತು ತಂತ್ರಜ್ಞಾನ ವರ್ಷಾಚರಣೆಯ ನಿಮಿತ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಸಮಕಾಲೀನ ಸಂದರ್ಭದಲ್ಲಿ ಕ್ವಾಂಟಮ್ ವಿಜ್ಞಾನ ಹೆಚ್ಚು ಬೇಡಿಕೆಯನ್ನು ಪಡೆದುಕೊಂಡಿದೆ. ಕ್ವಾಂಟಮ್ ಸಿದ್ಧಾಂತದ ಹುಟ್ಟು ಹಾಗೂ ಶಾಸ್ತ್ರೀಯ ಭೌತಶಾಸ್ತ್ರದಿಂದ ಕ್ವಾಂಟಮ್ ಭೌತಶಾಸ್ತ್ರವಾಗಿ ಪರಿವರ್ತನೆಯಾದ ಬಗೆಯನ್ನು ವಿವರಿಸಿದರು. ಇದು ಅತ್ಯಂತ ಸಂಕೀರ್ಣ ಸಮಸ್ಯೆಗಳನ್ನು ಸಾಂಪ್ರದಾಯಿಕ ಕಂಪ್ಯೂಟರ್‌ಗಳಿಗಿಂತ ಹೆಚ್ಚು ವೇಗವಾಗಿ ಪರಿಹರಿಸಬಲ್ಲ ಸಾಮರ್ಥ್ಯ ಹೊಂದಿದೆ. ಈ ತಂತ್ರಜ್ಞಾನವು ಭವಿಷ್ಯವನ್ನು ಹೇಗೆ ಬದಲಾಯಿಸುತ್ತದೆ ಎಂಬುದನ್ನು ಹಲವು ನಿದರ್ಶನಗಳ ಮೂಲಕ ತೋರಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಎಂ. ಜಿ. ಹೆಗ್ಡೆ ಅವರು, ಜಗತ್ತಿನ ಆವಿಷ್ಕಾರಗಳು ವಿಜ್ಞಾನದ ಕೊಡುಗೆ. ವಿಜ್ಞಾನದಲ್ಲಿ ವಿದ್ಯಾರ್ಥಿಗಳಿಗೆ ಬಹು ದೊಡ್ಡ ಅವಕಾಶಗಳಿವೆ. ವಿದ್ಯಾರ್ಥಿಗಳು ತಮ್ಮ ಗುರಿಗಳನ್ನು ಸಾಧಿಸಲು ಅಧ್ಯಯನ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಲಾವಣ್ಯ ಬಿ. ಗುಂಜಾಳ ಪ್ರಾಸ್ತಾವಿಕವಾಗಿ ಮಾಡಿದರು. ಜ್ಯೋತಿ ಭೋವಿ ಸ್ವಾಗತಿಸಿದರು. ಗೀತಾ ಪಿ. ಜೆ. ಪರಿಚಯಿಸಿದರು. ರೂಪಾ ಮಲಗೌಡರ್ ನಿರೂಪಿಸಿದರು. ಡಾ. ಬಸವರಾಜ ಗುರವ ವಂದಿಸಿದರು. ವಿದ್ಯಾರ್ಥಿನಿ ಪಾರ್ವತಿ ಮೇತ್ರಿ ಪ್ರಾರ್ಥಿಸಿದರು. ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು