Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

KSRTC ಚಾಲಕರು ಇನ್ಮುಂದೆ ಡಬಲ್ ಡ್ಯೂಟಿ ಮಾಡುವಂತಿಲ್ಲ

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ ಚಾಲಕರು ಹೆಚ್ಚುವರಿ ಡ್ಯೂಟಿ ಮಾಡುತ್ತಿದ್ದ ಹಿನ್ನೆಲೆ ಅಪಘಾತ ಪ್ರಕರಣಗಳು ನಡೆಯುತ್ತಿದ್ದವು. ಇದಕ್ಕೆ ಕಾರಣ ಹೆಚ್ಚುವರಿ ಡ್ಯೂಟಿ ಮತ್ತು ವಿಶ್ರಾಂತಿ ಇಲ್ಲದೇ ಇರುವುದು. ಇದೇ ಕಾರಣಕ್ಕೆ ಮಹತ್ವದ ನಿರ್ಧಾರ ಕೈಗೊಂಡ ಕೆಎಸ್​ಆರ್​ಟಿಸಿ, ಬಸ್​ ಚಾಲಕರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ. ವಿಶ್ರಾಂತಿ ಪಡೆಯುವುದು ಕಡ್ಡಾಯ ಎಂದು ಆದೇಶಿಸಲಾಗಿದೆ.

ಇಂದಿನಿಂದ ರಾತ್ರಿ ಮತ್ತು ದೂರದ ಪ್ರಯಾಣದ ನಂತರ ಚಾಲಕರು ವಿಶ್ರಾಂತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಎಂಟು ಗಂಟೆಗಳಿಗಿಂತ ಹೆಚ್ಚು ಡ್ಯೂಟಿ ಮಾಡಿಸುವಂತಿಲ್ಲ. 8 ಗಂಟೆಗಿಂತ ಅಧಿಕ ಮತ್ತು ರಾತ್ರಿ ವೇಳೆ ಹೆಚ್ಚುವರಿ ಡ್ಯೂಟಿ ಮಾಡಿದರೆ ನಾಲ್ಕೈದು ಗಂಟೆಗಳ ಕಾಲ ವಿಶ್ರಾಂತಿಗೆ ಅವಕಾಶ ನೀಡಬೇಕು. ವಾರದಲ್ಲಿ ಕೆಲಸದ ಅವಧಿ 48 ಗಂಟೆ ದಾಟುವಂತಿಲ್ಲ ಎಂದು ಸೂಚಿಸಲಾಗಿದೆ.

ಕೆಎಸ್​ಆರ್​ಟಿಸಿ ಬಸ್​ಗಳಿಂದ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಏನೆಂಬುದನ್ನು ಪತ್ತೆಹಚ್ಚಲು ಸಮಿತಿ ರಚನೆ ಮಾಡಲಾಗಿತ್ತು. ಅದರಂತೆ ಡಬಲ್ ಡ್ಯೂಟಿ ಮತ್ತು ರಾತ್ರಿ ವಿಶ್ರಾಂತಿಯನ್ನು ನೀಡದಿರುವುದರಿಂದ ನಿದ್ದೆಗೆಟ್ಟು ಬಸ್ ಚಲಾಯಿಸಲು ಸಾಧ್ಯವಾಗದೆ ಅಪಘಾತಗಳು ಸಂಭವಿಸುತ್ತಿವೆ ಎಂದು ತಿಳಿದುಬಂದಿದೆ. ಈ ಸಂಬಂಧ ಸಮಿತಿಯು ಕೆಎಸ್​ಆರ್​ಟಿಸಿಗೆ ವರದಿ ಸಲ್ಲಿಸಿತ್ತು.

ಇದರ ಬೆನ್ನಲ್ಲೇ, ವರದಿ ಆಧರಿಸಿ ಕೆಎಸ್​ಆರ್​ಟಿಸಿ ಬಸ್ ಚಾಲಕರಿಗೆ ಡಬಲ್​ ಡ್ಯೂಟಿಗೆ ಬ್ರೇಕ್ ಹಾಕಿ ವಿಶ್ರಾಂತಿಗೆ ಅವಕಾಶ ನೀಡಲಾಗಿದೆ. ಇದರಿಂದ ಕೆಎಸ್ಆರ್​ಟಿಸಿ ಬಸ್​ಗಳ ಅಪಘಾತಗಳು ತಪ್ಪುತ್ತವೆ. ನೂರಾರು ಅಮಾಯಕರ ಪ್ರಾಣ ಉಳಿಸಲು ಸಹಾಯವಾಗಲಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?