Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಚಿವ ಸತೀಶ ಜಾರಕಿಹೊಳಿಗೆ ಬಹಿರಂಗ ಸವಾಲು ಹಾಕಿದ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ

ಬೆಳಗಾವಿ : ಬುದ್ದ, ಬಸವ, ಅಂಬೇಡ್ಕರ್ ತತ್ವಗಳನ್ನು ನಾನು ಪಾಲಿಸುತ್ತೇನೆ‌.ನಮಗೆ ಬೆಲೆ ಇಲ್ಲದ ಜಾಗದಲ್ಲಿ ಇರಲು ನಾನು ಇಷ್ಟಪಡಲ್ಲ ಎಂದು ಪರೋಕ್ಷವಾಗಿ ಸಚಿವ ಸತೀಶ ಜಾರಕಿಹೋಳಿ ವಿರುದ್ಧ ಕುಡಚಿ ಕಾಂಗ್ರೆಸ್ ಶಾಸಕ ಮಹೇಶ ತಮ್ಮಣ್ಣವರ ಹರಿಹಾಯ್ದರು.

ಚಿಕ್ಕೋಡಿ ಪಟ್ಟಣದ ಕಲ್ಲೋಳಕರ ಫಾರ್ಮಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸತೀಶ ಜಾರಕಿಹೋಳಿ ಆರೋಪಕ್ಕೆ ಪ್ರತ್ಯುತ್ತರ ನೀಡಿದ ಅವರು
ಸತೀಶ ಜಾರಕಿಹೊಳಿಗೆ ಮೊದಲಿನಿಂದಲೂ ಸಹಕಾರ ನೀಡಿದ್ದೇವೆ.ಕುಡಚಿ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ 22 ಸಾವಿರ ಮತಗಳ ಲೀಡ್ ನೀಡದೇವೆ.ನನಗೆ ವಿಧಾನಸಭೆ ಚುನಾವಣೆಯಲ್ಲಿ ಬಂದಷ್ಟು‌ ಲೀಡ್ ಎಂಪಿ ಚುನಾವಣೆಯಲ್ಲಿ ನೀಡಲಾಗಿದೆ.ಆದರೆ, ನಾನು ಪಕ್ಷೇತರ ಪರಾಜಿತ ಅಭ್ಯರ್ಥಿ ನಮ್ಮ ಮಾವನವರಾದ ಶಂಭು ಕಲ್ಲೋಳಿಕರ ಪರವಾಗಿ ಕೆಲಸ ಕೆಲಸ ಮಾಡಿದೇನೆ ಎಂದು ಸತೀಶ ಜಾರಕಿಹೋಳಿ ಆರೋಪವನ್ನು ಮಾಡಿದ್ದಾರೆ. ಇದು ಎಷ್ಟರ ಮಟ್ಟಕ್ಕೆ ಸರಿ ಎಂದು ಪ್ರೆಶ್ನಿಸಿದರು?
ನಮ್ಮ ಭಾಗದ ಬಹುಕೇತ ನಾಯಕರನ್ನು ಜಾರಕಿಹೊಳಿ ಫ್ಯಾಮಿಲಿ ರಾಜಕೀಯವಾಗಿ ನಿರ್ನಾಮ‌ ಮಾಡಿದ್ದಾರೆ.
ಕಲ್ಲೋಳಿಕರ ರಾಜಕೀಯವಾಗಿ‌ ಮುಗಿಸಲು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ.
ಪಕ್ಷಕ್ಕೆ ಮೋಸ ಮಾಡುವ ಕೆಲಸ ನಾನು ಮಾಡಲ್ಲ.ನನ್ನ ಕ್ಷೇತ್ರದಲ್ಲಿ ಶಂಭು ಕಲ್ಲೋಳಿಕರಗೆ ಕೇವಲ ಮೂರು ಸಾವಿತ ಮತಗಳು ಬಂದಿವೆ.ಸತೀಶ ಜಾರಕಿಹೊಳಿ ರಾಜ್ಯದಲ್ಲಿಯೇ ಪ್ರಭಾವಿ ನಾಯಕರಿದ್ದಾರೆ.
ನಮ್ಮನ್ನು ತುಳಿಯುವ ಕೆಲಸ ಜಾರಕಿಹೊಳಿ ಫ್ಯಾಮಿಲಿ ಮಾಡುತ್ತಿದೆ‌ ಎಂದು‌ ಆರೋಪದ ಸುರಿಮಳೆಗೈದರು.

ಸತೀಶ್ ಜಾರಕಿಹೊಳಿ ಅವರಿಗೆ ದಲಿತ ಸಮಾಜದ ಮೇಲೆ ಕಳಕಳಿ ಇದ್ದರೆ ದಲಿತ ನಾಯಕರನ್ನು ಬೆಳೆಸುವ ಕೆಲಸ ಮಾಡುತ್ತಿದ್ದರು. ಹೈಕಮಾಂಡ್ ಗೆ ದೂರು ನೀಡಿದರೆ ಅದಕ್ಕೆ ಉತ್ತರ ನೀಡಲು ನಾನು ಸಿದ್ದ. ಮುಂದಿನ ದಿನಗಳಲ್ಲಿ ಅವರು ಗೋಕಾಕ ಹಾಗೂ ಅರಭಾವಿಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲೀಡ್ ಬರುವಂತೆ ಕೆಲಸ ಮಾಡಿ ತೋರಿಸಲಿ ಎಂದು ಅವರು ಮರು ಸವಾಲು ಹಾಕಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ