Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಚಿಕ್ಕಮಗಳೂರು: ದಯೆಯೇ ಧರ್ಮದ ಮೂಲ ಎಂದು ಸಾರಿದವರು ವೀರಶೈವ- ಲಿಂಗಾಯತರು , ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಚಿಕ್ಕಮಗಳೂರಿನ ಶ್ರೀ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ಶನಿವಾರ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ವಿಶ್ವ ಗುರು ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸಮಾಜದ ಮಗಳಾಗಿ ಕಾರ್ಯಕ್ರಮಕ್ಕೆ ಬಂದಿರುವೆ. ಬೇರೆ ಸಮಾಜದವರ ಜೊತೆಗೆ ಹಂಚಿಕೊಂಡು ತಿನ್ನುವ ಸಮಾಜ, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದರು.

ಕರ್ನಾಟಕದ ಮೂಲೆ ಮೂಲೆಗಳಲ್ಲಿ ವೀರಶೈವ ಲಿಂಗಾಯತ ಸಮಾಜ ಬಾಂಧವರು ಇದ್ದಾರೆ. ಸಮಾಜದ ಸೇವೆಯನ್ನು ಮಗಳಾಗಿ ಮಾಡುವೆ. ಇಡೀ ಕರ್ನಾಟಕ ರಾಜ್ಯಾದ್ಯಂತ ಸಮಾಜಕ್ಕೆ ಸೇವೆ ಮಾಡುವೆ ಎಂದು ಸಚಿವರು ಹೇಳಿದರು.

ಎಂದೆಂದಿಗೂ ಶಾಶ್ವತವಾಗಿ ಉಳಿಯುವಂತಹ ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು 12ನೇ ಶತಮಾನದಲ್ಲೆ ಸಾರಿದ ಮಹಾನ್‌ ವ್ಯಕ್ತಿ ಬಸವೇಶ್ವರರು, ಇವರ ತತ್ವ ಆದರ್ಶಗಳು ನಮಗೆ ಮಾದರಿಯಾಗಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.

* *ವೈಯುಕ್ತಿಕವಾಗಿ 10 ಲಕ್ಷ ದೇಣಿಗೆ*
ಲಿಂಗಾಯತ ಭವನದ ನಿರ್ಮಾಣಕ್ಕಾಗಿ ಹತ್ತು ಲಕ್ಷ ರೂ ವೈಯಕ್ತಿಕ ದೇಣಿಗೆ ನೀಡುವುದಾಗಿ ಸಚಿವರು ಘೋಷಿಸಿದರು.
ಜೊತೆಗೆ ಸರ್ಕಾರದಿಂದ ಹೆಚ್ಚಿನ ದೇಣಿಗೆ ಕೊಡಿಸುವುದಾಗಿ ಸಚಿವರು ಭರವಸೆ ನೀಡಿದರು.

* *ಚಿಕ್ಕಮಗಳೂರು ನಿಸರ್ಗದತ್ತವಾದ ಜಿಲ್ಲೆ*
ಚಿಕ್ಕಮಗಳೂರು ರಾಜ್ಯದ ಅತ್ಯಂತ ಸುಂದರ ಜಿಲ್ಲೆ. ಪ್ರಕೃತಿ ಸೌಂದರ್ಯದ ಜೊತೆಗೆ ಹೃದಯ ಶ್ರೀಮಂತರನ್ನು ಹೊಂದಿರುವ ನಾಡು ಇದು. ನನಗೆ ಅದ್ದೂರಿ ಸ್ವಾಗತ ನೀಡಿ ಜನರು ಬರಮಾಡಿಕೊಂಡರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಬಿ.ಎ.ಶಿವಶಂಕರ, ಶಾಸಕರಾದ ಎಚ್.ಡಿ.ತಮ್ಮಯ್ಯ, ಎಚ್.ಎಂ.ಲೋಕೇಶ್, ಎ.ಬಿ.ಸುದರ್ಶನ್, ಬಿ.ಎಂ.ರವಿ ಲಶಂಕರ್, ಎಂ.ಎಸ್.ನಿರಂಜನ್, ಸಿ.ಬಿ.ನಂದೀಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

-------------
* *ನಗರದಲ್ಲಿ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡ ಸಚಿವೆ*
ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಅವರು ಕೆಎಂ ರಸ್ತೆಯಲ್ಲಿರುವ ಶ್ರೀ ಬೋಳರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು‌.
ಬಳಿಕ ತೆರೆದ ವಾಹನದಲ್ಲಿ ಹನುಮಂತಪ್ಪ ಸರ್ಕಲ್ ವರೆಗೂ ಮೆರವಣಿಗೆ ನಡೆಸಲಾಯಿತು. ಇದೇ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದರು.

ಈ ವೇಳೆ ಶಾಸಕ ಎಚ್.ಡಿ.ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಮುಖಂಡರಾದ ಶ್ರೀನಿವಾಸ್, ಪ್ರವೀಣ್, ಮೊಹಮದ್ ನಯಾಜ್ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಚಿವರಿಗೆ ಸಾಥ್‌ ನೀಡಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು