Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

 

ಬೆಂಗಳೂರು :
ರಾಜ್ಯ ಸರಕಾರಿ ಶಾಲೆಗಳಿಗೆ ದಸರಾ ರಜೆಯನ್ನು ಬದಲಾವಣೆ ಮಾಡಲು ಈವರೆಗೂ ಅವಕಾಶ ಇರಲಿಲ್ಲ. ಇದೀಗ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಹೊರಡಿಸಿರುವ ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಮಾರ್ಗಸೂಚಿಯಲ್ಲಿ ಕ್ರಿಸ್ಮಸ್‌ ಅವಧಿಗೆ ಮಧ್ಯಾಂತರ ರಜೆ ನೀಡಲು ಮನವಿ ಸಲ್ಲಿಸುವ ಶಾಲೆಗಳಿಗೆ ರಜೆ ಮಂಜೂರಾತಿ ಸಿಗಲಿದೆ.

ಕ್ರೈಸ್ತ ಸಮುದಾಯದ ಆಡಳಿತ ಮಂಡಳಿಯ ಸಂಸ್ಥೆಗಳಿಗೆ ದಸರಾ ರಜೆಯ ಬದಲಿಗೆ ಕ್ರಿಸ್ಮಸ್‌ ಸಂದರ್ಭ ದಲ್ಲಿ ರಜೆ ನೀಡಲು ಅವಕಾಶ ಹಿಂದಿನಿಂದಲೂ ಇದೆ ಮತ್ತು ಈ ಸಂಬಂಧ ಸರಕಾರದ ಆದೇಶವೂ ಇದೆ. ಹೀಗಾಗಿಯೇ ಅನೇಕ ಕ್ರೈಸ್ತರ ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ತರಗತಿಗಳಿಗೆ ಸಮಸ್ಯೆಯಾಗದಂತೆ ದಸರಾ ಮಧ್ಯಾಂತರ ರಜೆಯನ್ನು ಕ್ರಿಸ್ಮಸ್‌ ಸಂದರ್ಭದಲ್ಲಿ ನೀಡಿ, ದಸರಾ ಅವಧಿ ಯಲ್ಲಿ ತರಗತಿಗಳನ್ನು ನಡೆಸುತ್ತಾರೆ. ಇನ್ನು ಕೆಲವು ಕ್ರೈಸ್ತ ಸಂಸ್ಥೆಗಳು ಮಧ್ಯಾಂತರ ರಜೆಯಲ್ಲಿ ಎರಡು ಭಾಗ ಮಾಡಿ ಸ್ವಲ್ಪದಿನ ದಸರಾ ಅವಧಿಯಲ್ಲಿ ಇನ್ನುಳಿದ ದಿನವನ್ನು ಕ್ರಿಸ್ಮಸ್‌ ಅವಧಿಯಲ್ಲಿ ನೀಡುತ್ತವೆ.

2024-25ನೇ ಸಾಲಿನ ದಸರಾ ರಜೆ (ಮಧ್ಯಾಂತರ ರಜೆ) ಅಕ್ಟೋಬರ್‌ 3ರಿಂದ ಆರಂಭಗೊಂಡು ಅಕ್ಟೋಬರ್‌ 20ರ ವರೆಗೆ (18) ದಿನ ಇರಲಿದೆ. ಈ ಅವಧಿಯಲ್ಲಿ ಕ್ರಿಸ್ಮಸ್‌ ರಜೆ ಬೇಡಿಕೆಯನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಜಿಲ್ಲಾ ಉಪನಿರ್ದೇಶಕರಿಗೆ ಸಲ್ಲಿಸಿದಲ್ಲಿ, ಈ ಬಗ್ಗೆ ಆಯಾ ಉಪನಿರ್ದೇಶಕರು ಪರಿಶೀಲಿಸಿ ನಿರ್ಧರಿಸಲಿದ್ದಾರೆ. ಒಂದೊಮ್ಮೆ ಕ್ರಿಸ್ಮಸ್‌ ಅವಧಿಯಲ್ಲಿ ಮಧ್ಯಾಂತರ ರಜೆ ನೀಡಲು ಅವಕಾಶ ಕಲ್ಪಿಸಿದರೆ, ಅಕ್ಟೋಬರ್‌ನ ಮಧ್ಯಾಂತರ ರಜೆಯಲ್ಲಿ ಕಡಿತಗೊಳಿಸಿ ತರಗತಿಗಳನ್ನು ಸರಿದೂಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂಬ ನಿರ್ದೇಶನವನ್ನು ಇಲಾಖೆಯಿಂದ ಉಪನಿರ್ದೇಶಕರಿಗೆ ನೀಡಲಾಗಿದೆ.
ಈವರೆಗೂ ರಾಜ್ಯ ಪಠ್ಯಕ್ರಮದ ಸರಕಾರಿ ಶಾಲೆಗಳಿಗೆ ದಸರಾ ಅವಧಿಯಲ್ಲಿಯೇ ಮಧ್ಯಾಂತರ ರಜೆ ನೀಡಲಾಗುತ್ತಿತ್ತು. ಆದರೆ ಕೆಲವು ಖಾಸಗಿ/ಅನುದಾನಿತ ಶಾಲಾಡಳಿತ ಮಂಡಳಿಗಳು ಅಗತ್ಯ ಬೇಡಿಕೆ ಸಲ್ಲಿಸಿ, ಮಧ್ಯಾಂತರ ರಜೆಯನ್ನು ಕ್ರಿಸ್ಮಸ್‌ ಅವಧಿಯಲ್ಲಿ ಪಡೆಯುತ್ತಿವೆ. ಸರಕಾರಿ ಶಾಲೆಯ ಮಕ್ಕಳಿಗೆ ಕ್ರಿಸ್ಮಸ್‌ ದಿನದಂದು ಮಾತ್ರ ರಜೆ ನೀಡಲಾಗುತ್ತದೆ. ಉಳಿದಂತೆ ಮಧ್ಯಾಂತರ ರಜೆ ದಸರಾ ಅವಧಿಯಲ್ಲಿ ಇರುತ್ತದೆ. ಈ ಬಾರಿ ಏನಾಗಲಿದೆ ಎಂಬ ಮಾಹಿತಿ ಇಲ್ಲ. ಸರಕಾರಿ ಶಾಲೆಗಳಿಗೆ ಕ್ರಿಸ್ಮಸ್‌ ಅವಧಿಯಲ್ಲಿ ಮಧ್ಯಾಂತರ ರಜೆಗೆ ಮನವಿ ಸಲ್ಲಿಸುವ ಸಾಧ್ಯತೆ ತೀರ ಕಡಿಮೆಯಿರುತ್ತದೆ. ಕಾರಣ ಎಸ್‌ಡಿಎಂಸಿಯಿಂದ ನಿರ್ಧರಿಸಿ, ಪಾಲಕ, ಪೋಷಕರ ಅನುಮತಿ ಪಡೆದು ಮನವಿ ಸಲ್ಲಿಸಬೇಕಾಗುತ್ತದೆ. ಹೀಗಾಗಿ ಬಹುತೇಕ ಶಾಲೆಗೆಳು ಈ ಹಿಂದಿನ ಪದ್ಧತಿಯನ್ನು ಬದಲಿಸುವುದು ಕಷ್ಟಸಾಧ್ಯ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?