Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಂದೇ ಭಾರತ್ ಘಟಪ್ರಭಾದಲ್ಲಿ ಒಂದು ನಿಮಿಷ ನಿಲ್ಲಲಿ

ಬೆಳಗಾವಿ: ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು ಘಟಪ್ರಭಾ ರೈಲು ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆ ಕಲ್ಪಿಸುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿ ಸಲ್ಲಿಸಿದರು.

ಪ್ರಸ್ತುತ ವಂದೇ ಭಾರತ್ ಎಕ್ಸಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ ಮತ್ತು ಸಾಂಗ್ಲಿ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ ಘಟಪ್ರಭಾ ಹಲವಾರು ತಾಲೂಕುಗಳ ಕೇಂದ್ರ ಸ್ಥಾನವಾಗಿದ್ದು ಹಾಗೂ ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ರೈಲು ನಿಲ್ದಾಣಕ್ಕೆ ನಿಲುಗಡೆಗೆ ಅವಕಾಶ ನೀಡಿ ಪ್ರಯಾಣಿಕರಿಗೆ ಅತ್ಯುತ್ತಮ ಸೇವೆ ಮತ್ತು ರೈಲ್ವೆ ಆದಾಯವನ್ನು ಹೆಚ್ಚಿಸಿಕೊಳ್ಳಬಹುದಾದ ಅವಕಾಶವಿದೆ ಎಂದರು.

ಘಟಪ್ರಭಾ ಪಟ್ಟಣವು ಸ್ವಾತಂತ್ರ ಹೋರಾಟಗಾರ ಶ್ರೀ ಹರಡೇಕರ ಮಂಜಪ್ಪ ಅವರು ಬಡವರಿಗಾಗಿ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಒದಗಿಸುವ ಸಂಕಲ್ಪದಿಂದ ನಿರ್ಮಾಣಗೊಂಡ ಕರ್ನಾಟಕ ಆರೋಗ್ಯ ಧಾಮ ಆಸ್ಪತ್ರೆ ಮತ್ತು ಕರ್ನಾಟಕದ ಏಕೈಕ ಪ್ರತಿಷ್ಠಿತ ಸಹಕಾರಿ ಆಸ್ಪತ್ರೆಯಾದ ಶ್ರೀ ಜಗದ್ಗುರು ಗುರುಸಿದ್ದೇಶ್ವರ ಆಸ್ಪತ್ರೆ ಹಾಗೂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕೇಂದ್ರದಂತಹ ಹಲವಾರು ಆಸ್ಪತ್ರೆಗಳು, ಸರ್ಕಾರಿ ಕಚೇರಿಗಳು ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಹೊಂದಿದ ಪಟ್ಟಣವಾಗಿದೆ.

ಮೀರಜ ಮತ್ತು ಸಾಂಗ್ಲಿ ನಿಲ್ದಾಣಗಳ ನಡುವಿನ ಅಂತರವು ಕೇವಲ ೭ ಕಿಮೀ ಇದ್ದು ಸಾಂಗ್ಲಿ ನಿಲ್ದಾಣಕ್ಕೆ ಈಗಾಗಲೇ ನಿಲುಗಡೆ ಹೊಂದಿದೆ. ಅದರಂತೆ ಈ ಭಾಗದ ರೈಲು ಪ್ರಯಾಣಿಕರ ಹಾಗೂ ಉದ್ಯಮಿಗಳ ಅನುಕೂಲಕ್ಕಾಗಿ ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು ಘಟಪ್ರಭಾ ರೈಲು ನಿಲ್ದಾಣಕ್ಕೆ ಒಂದು ನಿಮಿಷದ ನಿಲುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ಉಪಸ್ಥಿತರಿದ್ದು ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡುವುದು ಅತ್ಯಂತ ಸೂಕ್ತ ಬೇಡಿಕೆಯಾಗಿದ್ದು, ಸದರಿ ಬೇಡಿಕೆಯನ್ನು ಇಡೇರಿಸಲು ಅಗತ್ಯ ಕ್ರಮ ವಹಿಸಿ ಶೀಘ್ರ ನಿಲುಗಡೆಗೆ ಆದೇಶ ನೀಡಬೇಕೆಂದು ಸಚಿವರಿಗೆ ಸಲಹೆ ನೀಡಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?