Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾ ಕುಂಭಮೇಳ ಕಾಲ್ತುಳಿತ: ಕೊನೆಗೂ ಇಬ್ಬರ ಶವ ಬೆಳಗಾವಿಗೆ

ಬೆಳಗಾವಿ: ಮಹಾಕುಂಭ ಮೇಳದಲ್ಲಿ ಮಂಗಳವಾರ ಮೌನಿ ಅಮಾವಾಸ್ಯೆ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಪೈಕಿ ಇಬ್ಬರ ದೇಹಗಳನ್ನು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಗುರುವಾರ ಸಂಜೆ 6 ಕ್ಕೆ ತರಲಾಗಿದೆ.

ಶಿವಾಜಿ ನಗರದ ಮಹಾದೇವಿ ಬಾವನೂರ(48) ಹಾಗೂ ಶೆಟ್ಟಿ ಗಲ್ಲಿಯ ಅರುಣ ಕೋಪರ್ಡೆ(61) ಅವರ ಮೃತದೇಹಗಳನ್ನು ದೆಹಲಿಯಿಂದ ನೇರವಾಗಿ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಯಿತು. ಶವಗಳನ್ನು ಜಿಲ್ಲಾಡಳಿತದಿಂದ ಬರಮಾಡಿಕೊಳ್ಳಲಾಯಿತು.

ಮಹಾದೇವಿ ಅವರ ಶವವನ್ನು ಅವರ ತವರು ಹುಬ್ಬಳ್ಳಿ ಸಮೀಪದ ನೂಲ್ವಿ ಗ್ರಾಮಕ್ಕೆ ರವಾನಿಸಲಾಗಿದೆ.

ದೇಹಗಳನ್ನು ಎರಡು ಪ್ರತ್ಯೇಕ ಆ್ಯಂಬುಲೆನ್ಸ್‌ನಲ್ಲಿ ಹಾಕಿ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಯಿತು.

ಸಂಸದರಾದ ಜಗದೀಶ ಶೆಟ್ಟರ್, ಪ್ರಿಯಾಂಕಾ ಜಾರಕಿಹೊಳಿ, ಶಾಸಕರಾದ ಅಭಯ ಪಾಟೀಲ, ಆಸೀಫ್ ಸೇಠ್, ಮಾಜಿ ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರು ಪುಷ್ಪನಮನ ಸಲ್ಲಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ