Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿವಾಹಿತೆ ಅನುಮಾನಾಸ್ಪದ ಸಾವು

ಬೆಳಗಾವಿ: ವಿವಾಹಿತೆಯ ಸಾವಿನ ನಂತರ ಪೋಷಕರು ಆಕೆಯ ಸಾವಿನ ಬಗ್ಗೆ ಅಳಲು ತೋಡಿಕೊಂಡಿದ್ದು, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.

ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮಕ್ಕೆ ವಿವಾಹವಾದ ಮಹಿಳೆಯ ಆತ್ಮಹತ್ಯೆ ಪ್ರಕರಣ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಸವಿತಾ ಮಾರುತಿ ಜೋಗನಿ (ವಯಸ್ಸು 32,ವ.ಸಾಂಬ್ರಾ) ಮೃತ ವಿವಾಹಿತೆ. ಸವಿತಾ ಅವರಿಗೆ ಆರೂವರೆ ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿದೆ. ನಾಲ್ಕು ವರ್ಷದ ಮಗನಿದ್ದಾನೆ. ಶನಿವಾರ ಮಧ್ಯಾಹ್ನ ತನ್ನ ನಿವಾಸದಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಬಂಧಿಕರು ತಕ್ಷಣ ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು.

ವಿವಾಹಿತ ಮಹಿಳೆಯ ತಾಯಿ ರಕ್ಕಸಕೊಪ್ಪ ಗ್ರಾಮದ ಭಾರತಿ ಗವಡು ಮೋರೆ ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ. ಆಕೆಯನ್ನು ಕೊಲ್ಲಲಾಗಿದೆ ಎಂದು ಶಂಕಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ ಇದು ಆತ್ಮಹತ್ಯೆ ಎಂದು ಹೇಳಲಾಗಿದೆ. ಆದರೆ, ಮೃತ ಮಹಿಳೆಯ ಕುಟುಂಬಸ್ಥರು ಕೊಂದಿರುವ ಬಗ್ಗೆ ಪತಿಯ ಮನೆಯವರ ಮೇಲೆ ಶಂಕೆ ವ್ಯಕ್ತಪಡಿಸಿದ್ದಾರೆ. 2018 ರಲ್ಲಿ ಸಾಂಬ್ರಾದ ಮಾರುತಿ ಜೋಗಾನಿಗೆ ತಮ್ಮ ಮಗಳನ್ನು ಮದುವೆ ಮಾಡಿ ಕೊಡಲಾಗಿದೆ. ನಮ್ಮ ಮಗಳನ್ನು ಸಾಂಬ್ರಾ ಗ್ರಾಮದ ತಮ್ಮ ಮನೆಯ ಮೇಲಿನ ಮಹಡಿಯ ಬೆಡ್ ರೂಮಿನ ಹುಕ್ಕಿಗೆ ವೇಲ್ ಮೂಲಕ ಕುತ್ತಿಗೆಗೆ ಕಟ್ಟಿ ಉರುಳು ಹಾಕಿಕೊಂಡು ಆತ್ಮಹತ್ಯೆ ಎಂದು ಬಿಂಬಿಸಲಾಗಿದೆ ಎಂದು ಮೃತ ಮಹಿಳೆಯ ತಾಯಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?