Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೇಯರ್, ನಗರಸೇವಕರ ಅನರ್ಹಗೊಳಿಸಿ ಆದೇಶ

ಬೆಳಗಾವಿ : ಬೆಳಗಾವಿ ಮೇಯರ್ ಮಂಗೇಶ್ ಪವಾರ್ ಮತ್ತು ಕಾರ್ಪೊರೇಟರ್ ಜಯಂತ್ ಜಾಧವ್ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಯುಡಿ ಕಾರ್ಯದರ್ಶಿ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಗೋವಾವೇಸ್
ತಿನಿಸುಕಟ್ಟೆಯಲ್ಲಿ ಇವರಿಬ್ಬರು ಕಾನೂನು ಬಾಹಿರವಾಗಿ ಮಳಿಗೆಗಳನ್ನು ಪಡೆದುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಇವರಿಬ್ಬರ ಸದಸ್ಯ ತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

 

ಬೆಳಗಾವಿಯ ಗೋವಾವೇಸ್ ತಿನಿಸು ಕಟ್ಟೆ ಮಳಿಗೆ ಪಡೆದ ವಿವಾದಕ್ಕೆ ಸಂಬಂಧಿಸಿ ಬೆಳಗಾವಿಯ ಹಾಲಿ ಮೇಯರ್ ಮಂಗೇಶ ಪವಾರ ಮತ್ತು ನಗರಸೇವಕ ಜಯಂತ ಜಾಧವ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಈ ಇಬ್ಬರೂ ತಮ್ಮ ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದಿದ್ದಾರೆ, ಪಾಲಿಕೆ ಸದಸ್ಯರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಸುಜಿತ್ ಮುಳಗುಂದ ಈ ಹಿಂದೆ ಪ್ರಾದೇಶಿಕ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ಪ್ರಾದೇಶಿಕ ಆಯುಕ್ತರು ಈ ಇಬ್ಬರು ಸದಸ್ಯತ್ವ ರದ್ದುಗೊಳಿಸಿ ಆದೇಶ ಹೊರಡಿಸಿದ್ದರು.

ಆದರೆ ಅವರು ಹೈಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದದ್ದರು. ಈ ನಡುವೆ ಮಂಗೇಶ ಪವಾರ್ ಬೆಳಗಾವಿ ಮೇಯರ್ ಆಗಿ ಆಯ್ಕೆಯಾದರು.

ಈ ಪ್ರಕರಣ ಕುರಿತು ವಿಚಾರಣೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಹೈಕೋರ್ಟ್ ಸರಕಾರಕ್ಕೆ ನರ್ದೇಶನ ನೀಡಿತ್ತು. ಅದರಂತೆ ನಗರಾಭಿವದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ವಿಚಾರಣೆ ನಡೆಸಿ ಈ ಇಬ್ಬರ ಸದಸ್ಯತ್ವವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ವಾರ್ಡ್ ನಂಬರ್ 23 ಮತ್ತು 41 ಸ್ಥಾನಗಳು ತೆರವಾಗಿವೆ ಎಂದು ಘೋಷಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?