Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾಷಾ ಅಲ್ಪಸಂಖ್ಯಾತರ ಆಯೋಗದ ಆದೇಶ ಜಾರಿಗೊಳಿಸಲು ಎಂಇಎಸ್ ಮನವಿ

ಬೆಳಗಾವಿ: ಭಾಷಾ ಅಲ್ಪಸಂಖ್ಯಾತರ ಆಯೋಗದ ಆದೇಶವನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಮಹಾರಾಷ್ಟ್ರ ಏಕೀಕರಣ ಸಮೀತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.‌

ಜಿಲ್ಲಾಧಿಕಾರಿ ಮೋಹಮ್ಮದ ರೋಷನ್ ಅವರಿಗೆ ಮನವಿ ಸಲ್ಲಿಸಿದ ಅವರು, ಕನ್ನಡದೊಂದಿಗೆ ಮರಾಠಿ ಭಾಷೆಯಲ್ಲಿಯೂ ಪತ್ರಗಳು ನೀಡಬೇಕು.‌ ಜೊತೆಗೆ ಮರಾಠಿಯಲ್ಲಿ ಫಲಕಗಳನ್ನು 15 ದಿನದೊಳಗಾಗಿ ಅಳವಡಿಸಿಬೇಕು.‌ ಇಲ್ಲವಾದರೆ ಉಗ್ರ ಹೋರಾಟ ನಡೆಸುವದಾಗಿ ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿದ ಡಿಸಿ ಮೊಹ್ಮದ್ ರೋಷನ್ ಅವರು, ಯಾರಿಗೂ ಕಾನೂನು ಸುವ್ಯವಸ್ಥೆ ಕೈಗೆ ತೆಗೆದುಕೊಳ್ಳಲು ಅವಕಾಶವಿಲ್ಲ ಎಂದರು.

ಅಮರ್ ಯಳ್ಳೂರಕರ ಅವರು ಮಾತನಾಡಿ, ಕನ್ನಡ ಅನುಷ್ಠಾನ ಸಮಿತಿಯ ಸಭೆಯ ಬಳಿಕ ಸ್ಥಳೀಯ ಸಂಸ್ಥೆಗಳು ಅಲ್ಪ ಸಂಖ್ಯಾತರ ಆಯೋಗದ ಆದೇಶವನ್ನು ಮರೆತು ಕಾನೂನುಬಾಹಿರವಾಗಿ ಕನ್ನಡ ಕಡ್ಡಾಯವನ್ನು ಜಾರಿಗೊಳಿಸಿದೆ. ಕಾನೂನು ಬಾಹಿರ ಆದೇಶ ಜಾರಿಗೊಳಿಸಿರುವ ಬೆಳಗಾವಿ ಮಹಾಪಾಲಿಕೆ ಆಯುಕ್ತರ ವಿರುದ್ಧ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೇ, ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.

ಮಾಜಿ ಶಾಸಕ ಮನೋಹರ ಕಿಣೇಕರ ಮಾತನಾಡಿ, ಭಾಷಿಕ ಅಲ್ಪಸಂಖ್ಯಾತರ ಸಭೆಯಲ್ಲಿ ಬೆಳಗಾವಿ ಜಿಲ್ಲಾಡಳಿತವು ಅಲ್ಪಸಂಖ್ಯಾತರ ಕಾನೂನಿನ ಪ್ರಕಾರ ಬೆಳಗಾವಿಯಲ್ಲಿ ಎರಡು ಭಾಷೆಯಲ್ಲಿ ಕಾಗದಪತ್ರಗಳನ್ನು ನೀಡಲು ಮತ್ತು ಫಲಕಗಳನ್ನು ಅಳವಡಿಸಲು ಒಪ್ಪಿಕೊಂಡಿತ್ತು. ಆದರೇ, ಈಗ ತನ್ನ ನಿರ್ಣಯದಿಂದ ಹಿಂದೆ ಸರಿದು ಇಬ್ಬಗೆಯ ನೀತಿಯನ್ನು ತಳೆದಿದೆ. ಮುಂಬರುವ 10-15 ದಿನಗಳಲ್ಲಿ ಅಲ್ಪಸಂಖ್ಯಾತ ಆಯೋಗದ ಆದೇಶವನ್ನು ಜಾರಿಗೊಳಿಸಿದ್ದರೇ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದರು. ಅಲ್ಲದೇ, ಮರಾಠಿ ಭಾಷಿಕರಿಗೆ ವಿನಾ ಕಾರಣ ತೊಂದರೆ ನೀಡುವ ಪ್ರತಿಭಟನಾಕಾರರಿಗೆ ಪೊಲೀಸ್ ಇಲಾಖೆ ತಿಳುವಳಿಕೆ ನೀಡದಿದ್ದರೇ, ತಕ್ಕ ಉತ್ತರ ಕೊಡಬೇಕಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾಲೋಜಿರಾವ್ ಅಷ್ಟೇಕರ, ಪ್ರಕಾಶ್ ಮರಗಾಳೆ, ಆರ್.ಎಂ. ಚೌಗುಲೆ, ವಿಲಾಸ್ ಘಾಡಿ, ವಿಜಯ್ ಪಾಟೀಲ್, ಎಂ.ಆರ್. ಬಿರ್ಜೆ, ಆರ್.ಸಿ. ಮೋದಗೆಕರ, ಎಲ್.ಜಿ. ಪಾಟೀಲ್, ಆರ್.ಎಂ. ಪಾಟೀಲ್. ವಿಕಾಸ್ ಕಲಘಟಗಿ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು