Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗಾಣಿಗರು ಹೃದಯ ವೈಶಾಲ್ಯದವರಾಗಿದ್ದು ಯಾರಿಗೂ ಕೇಡು ಬಯಸುವವರಲ್ಲ

ಬಸವನಬಾಗೇವಾಡಿ: ಗಾಣಿಗ ಸಮಾಜದವರು ಹೃದಯ ವೈಶಾಲ್ಯದವರಾಗಿದ್ದು ಯಾರಿಗೂ ಕೆಡುಕನ್ನು ಬಯಸುವವರಲ್ಲ. ಗಾಣಿಗ ಸಮಾಜದವರು ಸಾಮಾಜಿಕ ಹಾಗೂ ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬೆಳವಣಿಗೆ ಹೊಂದಲು ಸಂಘಟಿಕರಾಗುವದು ಅವಶ್ಯಕ ಎಂದು ಮಾಜಿ ಸಚಿವ ಎಸ್‌. ಕೆ ಬೆಳ್ಳುಬ್ಬಿ ಹೇಳಿದರು.

ಪಟ್ಟಣದ ಯಲ್ಲಾಲಿಂಗೇಶ್ವರ ಮಠದಲ್ಲಿ ತಾಲೂಕು ಗಾಣಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ, ತಾಲೂಕು ಗಾಣಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ನಗರ ಘಟಕ ಮತ್ತು ಮಹಿಳಾ ಘಟಕ ಇವರ ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದವನ್ನ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸ ಓದಿದಾಗ ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ ಎನ್ನುವ ಹಾಗೆ ಸಮಾಜದ ಪ್ರತಿಯೊಬ್ಬರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು, ಪ್ರತಿ ಆರು ತಿಂಗಳಿಗೊಮ್ಮ ಇಂತಹ ಸಭೆ ಸಮಾರಂಭಗಳು ಜರುಗಬೇಕು. ಸಮಾಜ ಬಾಂಧವರು ಎಲ್ಲರು ಒಟ್ಟಾಗಿ ಸಮಾಜದ ಅಭಿವೃದ್ದಿಗೆ ಶ್ರಮಿಸುವಂತಾಗಬೇಕು. ಸಂಕ್ರಮಣದ ನಂತರ ಎಲ್ಲರು ಒಟ್ಟಾಗಿ ಬೃಹತ್ ಪ್ರಮಾಣದಲ್ಲಿ ಸಮಾವೇಶ ಹಮ್ಮಿಕೊಳ್ಳೋಣ ಎಂದರು.

ಕೊಲ್ದಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಗಾಣಿಗ ಸಮಾಜ ದೇಶಕ್ಕೆ ಮೋದಿಯಂತಹ ಶ್ರೇಷ್ಠ ರಾಜಕಾರಣಿಯನ್ನು ನೀಡುವ ಮೂಲಕ ನಮ್ಮ ಸಮಾಜ ದೇಶಕ್ಕೆ ಅಪಾರ ಕೊಡುಗೆಯನ್ನು ನೀಡಿದೆ. ಪ್ರತಿಯೊಬ್ಬ ಗಾಣಿಗ ಸಮಾಜದವರು ಹೆಮ್ಮೆಯಿಂದ ಹೇಳಬೇಕು. ನಾನು ಗಾಣಿಗ ಸಮಾಜದವನು ಎಂದು, ದುಡಿಯುವ ಗುಣವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು, ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಬೇಕು. ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿಸುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎ೦ದರು.

ಅರಕೇರಿ ಸರಕಾರಿ ಪ್ರೌಡಶಾಲೆಯ ಶಿಕ್ಷಕ ಕಲ್ಲಪ್ಪ ಗಾಣಿಗೇರ ಉಪನ್ಯಾಸ ನೀಡಿದರು. ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿದ್ದನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ಮುಖಂಡರಾದ ಎಸ್.ಎಂ.ಸಜ್ಜನ, ಕಲ್ಲು ಸೊನ್ನದ, ಸಿದ್ಧಲಿಂಗ ಚೌಧರಿ, ಚಂದ್ರಕಾಂತ ಡೊಣಗಿ, ಅರವಿಂದ ಸಜ್ಜನ, ಡಾ: ಆರ್.ಜಿ.ಡಫಳೆ, ಪರಶುರಾಮ ತುಪ್ಪದ, ಶ್ರೀಶೈಲ ಪರಮಗೊಂಡ, ಸುರೇಶ ಗೋಲಗೊಂಡ, ಡಾ.ಎಸ್.ಐ.ಹತ್ತರಕಿ, ಎಸ್.ಎಂ. ಬಿಸ್ಟಗೊಂಡ, ಪುಷ್ಪಾ ತುಪ್ಪದ ಸೇರಿದಂತೆ ಇತರರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ