Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೋಡಲು ಓಡೋಡಿ ಬಂದ ಬಾಲಕಿ

ಬೆಳಗಾವಿ : ಕೆಲವು ತಿಂಗಳ ಹಿಂದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಹಾಯದೊಂದಿಗೆ ಸವದತ್ತಿಯ ಹಾಸ್ಟೆಲ್ ನಲ್ಲಿ ಆಶ್ರಯ ಪಡೆದಿದ್ದ ಬಾಲಕಿಯೊಬ್ಬಳು ಶುಕ್ರವಾರ ಬೆಳಗಾವಿಯ ಆಸ್ಪತ್ರೆಗೆ ಓಡೋಡಿ ಬಂದು, ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವರ ಆರೋಗ್ಯ ವಿಚಾರಿಸಿದಳು.

ಮಾನವೀಯ ಸಂಬಂಧ ಎಂದರೆ ಏನು ಎನ್ನುವುದಕ್ಕೆ ಉದಾಹರಣೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಯಿತು. ಕೆಲವು ತಿಂಗಳ ಹಿಂದೆ ಬೆಳಗಾವಿ ತಾಲೂಕಿನ ಬಾಲಕಿಯೊಬ್ಬಳು ಮನೆಯಲ್ಲಿನ ಸಮಸ್ಯೆಯಿಂದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಳಿ ಬಂದು ಸಹಾಯ ಕೇಳಿದ್ದಳು. ತಕ್ಷಣ ಸ್ಪಂದಿಸಿದ ಸಚಿವರು, ಬಾಲಕಿಗೆ ಸವದತ್ತಿಯ ವಸತಿಗೃಹದಲ್ಲಿ ಆಶ್ರಯ ಒದಗಿಸಿ, ಆಕೆಗೆ ವಿದ್ಯಾಭ್ಯಾಸ ಮುಂದುವರಿಸಲು ಸಹಾಯ ಮಾಡಿದ್ದರು.
ಇದೀಗ ಸಚಿವರು ಅಪಘಾತದಿಂದ ಗಾಯಗೊಂಡು ಆಸ್ಪತ್ರೆ ಸೇರಿರುವ ವಿಷಯ ತಿಳಿದ ಬಾಲಕಿ, ತಾನು ಸಚಿವರನ್ನು ನೋಡಲೇಬೇಕೆಂದು ಹಠ ಹಿಡಿದು, ತನ್ನ ಅಜ್ಜಿಯ ಜೊತೆಗೆ ಆಸ್ಪತ್ರೆಗೆ ಬಂದು ಸಚಿವರ ಆರೋಗ್ಯ ವಿಚಾರಿಸಿದಳು. ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದಳು.
ಬಾಲಕಿ ತಮ್ಮ ಆರೋಗ್ಯ ವಿಚಾರಿಸಲು ಇಲ್ಲಿಯವರೆಗೂ ಬಂದಿರುವುದನ್ನು ಕಂಡು ಭಾವುಕರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಆಕೆಯ ಕೈ ಹಿಡಿದುಕೊಂಡು, ವಿದ್ಯಾಭ್ಯಾಸ, ಊಟೋಪಚಾರ ಮತ್ತಿತರ ವಿಷಯಗಳ ಮಾಹಿತಿ ಪಡೆದರು. ಉತ್ತಮವಾಗಿ ಓದಿ ಸಮಾಜದಲ್ಲಿ ಒಳ್ಳೆಯ ಸ್ಥಾನ ಪಡೆಯುವಂತೆ ಅವರು ಬಾಲಕಿಗೆ ಸೂಚಿಸಿದರು.
ಜೊತೆಗೆ, ಹಾಸ್ಟೆಲ್ ನಲ್ಲಿರುವ ಇತರ ಮಕ್ಕಳೊಂದಿಗೂ ವಿಡಿಯೋ ಕಾಲ್ ಮೂಲಕ ಸಚಿವರ ಜೊತೆ ಬಾಲಕಿ ಮಾತನಾಡಿಸಿದಳು. ಹಾಸ್ಟೆಲ್ ವ್ಯವಸ್ಥೆ, ಶಿಕ್ಷಣಗಳ ಕುರಿತು ಆ ಮಕ್ಕಳಿಂದಲೂ ಸಚಿವರು ಮಾಹಿತಿ ಪಡೆದು, ಉತ್ತಮ ಭವಿಷ್ಯಕ್ಕೆ ಹಾರೈಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು