Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿ ಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಸಚಿವರು ಪ್ರಶ್ನಿಸಿದ್ದಾರೆ.

ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

* *ಕ್ಷಮೆಯಾಚನೆಗೆ ಪಟ್ಟು
ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿ ಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ. ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿ ಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ