Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾಷಾ ಸಂಘರ್ಷದಿಂದ ಅಭಿವೃದ್ಧಿಗೆ ಪೆಟ್ಟು: ಸಚಿವ ಸತೀಶ ಜಾರಕಿಹೊಳಿ

 

ಬೆಳಗಾವಿ: ಭಾಷಾ ಸಂಘರ್ಷದಿಂದ ಶಾಂತಿ, ನೆಮ್ಮದಿ, ಉದ್ಯೋಗಕ್ಕೆ ಸಮಸ್ಯೆಯಾಗಲಿದೆ. ಕಾನೂನು ಸುವ್ಯವಸ್ಥೆಯ, ಶಾಂತಿ ಸೌಹಾರ್ದತೆಯನ್ನು ಕಾಪಾಡಬೇಕಿದೆ. ಗಡಿಭಾಷೆ ಸಂಘರ್ಷ ಮರುಕಳಿಸದಂತೆ ಸರ್ಕಾರ ಎಲ್ಲಾ ರೀತಿಯ ಕ್ರಮಕೈಗೊಳ್ಳಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು.

ಇಲ್ಲಿನ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮಾತನಾಡಿದ ಸಚಿವರು, "ಇದು ಇಬ್ಬರ ವೈಯಕ್ತಿಕ ಜಗಳವಾಗಿದ್ದು, ಇದಕ್ಕೆ ಕನ್ನಡ-ಮರಾಠಿ ಬಣ್ಣ ಬಳಿಯಬಾರದು. ಇದರಿಂದ ಬೆಳಗಾವಿಯ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ" ಎಂದು ಅವರು ಹೇಳಿದರು.

ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆಯಲಾಗಿದ್ದು, ಇದು ಇಬ್ಬರ ವೈಯಕ್ತಿಕ ಜಗಳ, ಭಾಷೆಗೆ ಇದು ವರ್ಗವಾಗಬಾರದು ಎಂಬುದು ನಮ್ಮ ಮನವಿ. ಕನ್ನಡ, ಮರಾಠಿ ಸಂಘಟನೆ ಎಂದು ಬಿಂಬಿಸಬಾರದು. ಅಂತಿಮವಾಗಿ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಪೆಟ್ಟು ಬಿಳಲಿದೆ. ಪೊಲೀಸ್ ಇಲಾಖೆ ತನಿಖೆ ಮಾಡುತ್ತಿದ್ದಾರೆ ಎಂದ ಅವರು, ಪೋಸ್ಕೋ ಕೇಸ್ ದಾಖಲು ಆಗಬಾರದು ಇತ್ತು. ಆದರೂ ಪೊಲೀಸ್ ರಿಂದ ತಪ್ಪಾಗಿದೆ, ಇದನ್ನು ಸರಿಪಡಿಸಲು ಅವಕಾಶವಿದೆ. ಮರು ಪರಿಶೀಲನೆ ಆಗಬೇಕಿದೆ ಎಂದರು.

ಎರಡು ರಾಜ್ಯಗಳ ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ತೀವ್ರ ನಷ್ಟ ಉಂಟಾಗಲಿದೆ. ಪೊಲೀಸರ ಕೆಲಸವನ್ನು ಅವರಿಗೆ ಬಿಡಬೇಕು ಎಂದರು. ಶಿವಸೇನೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂಬ ಬೇಡಿಕೆಯನ್ನು ಖಂಡಿಸಿದ ಅವರು, ಬೆಳಗಾವಿ ಮತ್ತು ಕೊಲ್ಹಾಪುರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದರು.

ನಾಳೆ ನಡೆಯಲಿರುವ ಕರವೇ ಬೆಳಗಾವಿ ಚಲೋ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ ಸಚಿವರು, ಯಾರೂ ಕೂಡ ಬೆಳಗಾವಿಗೆ ಬರಬಾರದು ಎಂದು ವಿನಂತಿಸಿದರು. ಪ್ರಕರಣದಲ್ಲಿ ಎರಡೂ ಕಡೆಯಿಂದ ದೂರು ದರಖಾಸ್ತಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಅವರಿಗೆ ಸಹಕಾರ ನೀಡಬೇಕು ಎಂದು ಸಚಿವ ಸತಿಶ್ ಜಾರಕಿಹೊಳಿ ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ರಾಜು(ಆಸೀಫ್‌), ಜಿಲ್ಲಾ ಕಾಂಗ್ರೆಸ್‌ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಸಿದ್ದಕಿ ಅಂಕಲಗಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಇತರರು ಇದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?