Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೇಂದ್ರ ಸರ್ಕಾರದ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಮೋದಿ ಕ್ಯಾಬಿನೆಟ್‌ ಒಪ್ಪಿಗೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ಡಿಯರ್ನೆಸ್ ರಿಲೀಫ್ ಶೇಕಡಾ 4%ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.ಈ ತಿಂಗಳ ಮಧ್ಯಭಾಗದಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದ್ದು, ಹೀಗಾಗಿ ಈಗಲೇ ಈ ನಿರ್ಧಾರ ಹೊರಬಿದ್ದಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಗುರುವಾರ ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ಡಿಯರ್ನೆಸ್ ರಿಲೀಫ್ (ಡಿಆರ್) ಬಿಡುಗಡೆಗೆ ಅನುಮೋದನೆ ನೀಡಿದ್ದು, ಹೊಸ ದರವು ಜನವರಿ 1, 2024 ರಿಂದಲೇ ಅನ್ವಯವಾಗಲಿದೆ ಮತ್ತು ಮೂಲ ವೇತನ/ಪಿಂಚಣಿಯ ಅಸ್ತಿತ್ವದಲ್ಲಿರುವ 46% ದರದ ಮೇಲೆ 4%ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ.

ತುಟ್ಟಿ ಭತ್ಯೆ (ಡಿಎ) ಎನ್ನುವುದು ಉದ್ಯೋಗಿಗಳಿಗೆ ಅವರ ಜೀವನ ವೆಚ್ಚದ ಮೇಲೆ ಹಣದುಬ್ಬರದ ಪರಿಣಾಮವನ್ನು ಸರಿದೂಗಿಸಲು ಅವರ ಮೂಲ ವೇತನದ ಶೇಕಡಾವಾರು ಮೊತ್ತದ ಹಣ ಪಾವತಿಸುವ ಭತ್ಯೆಯಾಗಿದೆ. ಜೀವನ ವೆಚ್ಚ ಸೂಚ್ಯಂಕದಲ್ಲಿನ ಬದಲಾವಣೆಗಳನ್ನು ಲೆಕ್ಕಹಾಕಲು ಇದನ್ನು ಸಾಮಾನ್ಯವಾಗಿ ಪ್ರತಿ ಆರು ತಿಂಗಳಿಗೊಮ್ಮೆ ನಿಯತಕಾಲಿಕವಾಗಿ ಸರಿಹೊಂದಿಸಲಾಗುತ್ತದೆ.
ಈ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ₹ 12,868.72 ಕೋಟಿ ವೆಚ್ಚವಾಗಲಿದೆ ಮತ್ತು ದೇಶದಾದ್ಯಂತ 49.18 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 67.95 ಲಕ್ಷ ಪಿಂಚಣಿದಾರರಿಗೆ ಈ ಹೆಚ್ಚಳದಿಂದ ಲಾಭವಾಗಲಿದೆ ಎಂದು ಸರ್ಕಾರ ಹೇಳಿದೆ.

ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ಡಿಯರ್ನೆಸ್ ರಿಲೀಫ್ ಎರಡರಿಂದಲೂ ಬೊಕ್ಕಸದ ಮೇಲಿನ ಸಂಯೋಜಿತ ಪರಿಣಾಮವು ವಾರ್ಷಿಕ ₹12,868.72 ಕೋಟಿಗಳಾಗಿರುತ್ತದೆ. ಇದರಿಂದ ಸುಮಾರು 49.18 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 67.95 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ. ಈ ಹೆಚ್ಚಳವು 7 ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಅಂಗೀಕೃತ ಸೂತ್ರಕ್ಕೆ ಅನುಗುಣವಾಗಿದೆ, ”ಎಂದು ಸಚಿವ ಸಂಪುಟದ ಪತ್ರಿಕಾ ಟಿಪ್ಪಣಿ ತಿಳಿಸಿದೆ.

ತುಟ್ಟಿಭತ್ಯೆ 50% ತಲುಪುತ್ತದೆ
ಪ್ರಸ್ತುತ ತುಟ್ಟಿ ಭತ್ಯೆಯು 50% ತಲುಪುವುದರೊಂದಿಗೆ, ಮನೆ ಬಾಡಿಗೆ ಭತ್ಯೆ (HRA) ಮತ್ತು ಗ್ರಾಚ್ಯುಟಿಯ ಮೇಲಿನ ಮಿತಿ ಎರಡೂ ಹೆಚ್ಚಳವಾಗಲಿದೆ. ಹೊಸ ಗ್ರಾಚ್ಯುಟಿ ಮಿತಿಯನ್ನು ₹25 ಲಕ್ಷಕ್ಕೆ ಏರಿಸಲಾಗಿದೆ, ಅದರ ಹಿಂದಿನ ಮೌಲ್ಯ ₹20 ಲಕ್ಷ ಆಗಿತ್ತು.
ಹಿಂದಿನ ತುಟ್ಟಿಭತ್ಯೆ ಹೆಚ್ಚಳವು ಅಕ್ಟೋಬರ್ 2023 ರಲ್ಲಿ ಬಂದಿತ್ತು, ಅದನ್ನು 4%ಅಂದರೆ 42% ರಿಂದ 46% ಕ್ಕೆ ಹೆಚ್ಚಿಸಲಾಯಿತು. 7ನೇ ಕೇಂದ್ರೀಯ ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ಹೆಚ್ಚಳ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. 2024 ರ ಲೋಕಸಭೆ ಚುನಾವಣೆಗೆ ಸ್ವಲ್ಪ ಮುಂಚಿತವಾಗಿಯೇ ತುಟ್ಟಿಭತ್ಯೆಯಲ್ಲಿನ ಹೊಸ ಹೆಚ್ಚಳವು ಮಹತ್ವದ್ದಾಗಿದೆ ಮತ್ತು ಮಾದರಿ ನೀತಿ ಸಂಹಿತೆ (MCC) ಈಗ ಯಾವಾಗ ಬೇಕಾದರೂ ಜಾರಿಗೆ ಬರಬಹುದು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?