Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಾರಾಣಸಿಯಲ್ಲಿ ಮೋದಿ ವಿರುದ್ಧ ನಿತೀಶ್‌ ಅಥವಾ ಪ್ರಿಯಾಂಕಾ ಸ್ಪರ್ಧೆ?

 

ದೆಹಲಿ :
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಗೆ ತಿರುಗೇಟು ನೀಡಲು ಪ್ರತಿಪಕ್ಷಗಳು ಭಾರಿ ಪ್ರಯತ್ನ ನಡೆಸಿವೆ. ಈಗಿನಿಂದಲೇ ಈ ಬಗ್ಗೆ ಕಾರ್ಯತಂತ್ರ ಹೆಣೆಯುತ್ತಿವೆ. ಮೋದಿ ವಿರುದ್ಧ ರಾಷ್ಟ್ರಮಟ್ಟದಲ್ಲಿ ವರ್ಚಸ್ಸು ಹೊಂದಿರುವ ವ್ಯಕ್ತಿಯನ್ನು ಕಣಕ್ಕೆ ಇಳಿಸಲು ಇಂಡಿಯಾ ಮೈತ್ರಿಕೂಟ ಸಿದ್ಧತೆಯಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ
ಅವರನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಲ್ಲಿ ಸೋಲಿಸಲು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಭಾರಿ ಯೋಜನೆ ರೂಪಿಸುತ್ತಿದೆ. ಇದಕ್ಕಾಗಿ ಬಿಜೆಪಿಯ ಹಳೆಯ ಸ್ನೇಹಿತ ಅಥವಾ ಹೊಸ ಮುಖವನ್ನು ಕಣಕ್ಕಿಳಿಸಲು ಯೋಜಿಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಟಿವಿ ಚಾನೆಲ್ ಒಂದು ವರದಿ ಮಾಡಿದೆ.

ಮಂಗಳವಾರ ದೆಹಲಿಯಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ ಈ ಪ್ರಸ್ತಾವ ಇರಿಸಲಾಗಿದೆ ಎನ್ನಲಾಗಿದೆ.
ಈ ಬಾರಿ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಬಿಜೆಪಿಯ ಮಾಜಿ ಮಿತ್ರರಾದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅಥವಾ ಹೊಸ ಮುಖವಾದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸುವ ಪ್ರಸ್ತಾವ ಇರಿಸಲಾಗಿದೆ ಎಂದು ವರದಿ ಹೇಳಿದೆ.

2004 ನ್ನು ಹೊರತುಪಡಿಸಿದರೆ 1991 ರಿಂದಲೂ ಇಲ್ಲಿ ಬಿಜೆಪಿ ಜಯ ಗಳಿಸುತ್ತಿದೆ.

ನಿತೀಶ ಈ ಹಿಂದೆ ಬಿಜೆಪಿಯ ಮೈತ್ರಿಕೂಟದಲ್ಲಿದ್ದರು. ಆದರೆ ಇದೀಗ ಇಂಡಿಯಾ ಮೈತ್ರಿಕೂಟವನ್ನು ತೊರೆದಿದ್ದು, ಪ್ರಧಾನಿ ಹುದ್ದೆಗೇರಲು ಅರ್ಹ ಅಭ್ಯರ್ಥಿ ಎಂದು ಗುರುತಿಸಿಕೊಂಡಿದ್ದಾರೆ. ಪ್ರಿಯಾಂಕಾ ಗಾಂಧಿ ಇದುವರೆಗೂ ಒಂದೂ ಚುನಾವಣೆಯನ್ನೂ ಎದುರಿಸಿಲ್ಲ. 2019ರಲ್ಲೇ ಇವರು ವಾರಾಣಸಿಯಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಡಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಮೋದಿ ವಿರುದ್ಧ ಸ್ಪರ್ಧೆಯ ಪ್ರಶ್ನೆ ಬಂದಾಗೆಲ್ಲಾ ಪ್ರಿಯಾಂಕಾ ಸಕಾರಾತ್ಮಕವಾಗಿ ಉತ್ತರಿಸಿದ್ದಾರೆ. ಹೀಗಾಗಿ ಮೋದಿ ಅವರನ್ನು ಸೋಲಿಸಲು ಈ ಇಬ್ಬರು ನಾಯಕರಲ್ಲಿ ಒಬ್ಬರನ್ನು ಕಣಕ್ಕಿಳಿಸಲಾಗುತ್ತದೆ ಎನ್ನಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?