Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭೂಮಿಗೆ ಸುನಿತಾ ಕರೆತರಲು ನಾಸಾ, ಸ್ಪೇಸ್‌ಎಕ್ಸ್ ಕಾರ್ಯಾಚರಣೆಗೆ ಚಾಲನೆ

ವಾಷಿಂಗ್ಟನ್‌: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್) ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ನೋರ್ ಭೂಮಿಗೆ ವಾಪಸ್ ಕರೆತರಲು ಸ್ಪೇಸ್‌ಎಕ್ಸ್ ನೆರವಿನಿಂದ ನಾಸಾ ಕಾರ್ಯಾಚರಣೆಯನ್ನು ಆರಂಭಿಸಿದೆ.

ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಸಂಜೆ ಸ್ಥಳೀಯ ಕಾಲಮಾನ 7.03ಕ್ಕೆ ಸರಿಯಾಗಿ ಸ್ಪೇಸ್‌ಎಕ್ಸ್‌ನ ಫಾಲ್ಕನ್-9 ರಾಕೆಟ್ ಆಗಸದತ್ತ ಚಿಮ್ಮಿತು.

ಈ ಸಂಬಂಧ ನಾಸಾ ಹಾಗೂ ಸ್ಪೇಸ್‌ಎಕ್ಸ್ ಮಾಹಿತಿ ಹಾಗೂ ವಿಡಿಯೊವನ್ನು ಹಂಚಿಕೊಂಡಿದೆ. ನಾಸಾದ ಸ್ಪೇಕ್ಸ್‌ಎಕ್ಸ್ ಡ್ರಾಗನ್ ಸ್ಪೇಸ್‌ಕ್ರಾಫ್ಟ್ ಕ್ರೂ10 ಉಡ್ಡಯನ ಯಶಸ್ವಿಯಾಗಿದೆ ಎಂದು ನಾಸಾ ಘೋಷಿಸಿದೆ.

ಈ ಮಿಷನ್‌ನಲ್ಲಿ ನಾಲ್ವರು ಗಗನಯಾನಿಗಳನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಾಗಿದೆ. ಈ ಮೊದಲು ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಉಡ್ಡಯನ ವಿಳಂಬಗೊಂಡಿತ್ತು.

ಕಳೆದ ವರ್ಷ ಜೂನ್ 5ರಂದು, ಬೋಯಿಂಗ್ ಸಂಸ್ಥೆಯ ಸ್ಟಾರ್‌ಲೈನರ್‌ ಗಗನನೌಕೆಯಲ್ಲಿ ಸುನಿತಾ ಹಾಗೂ ವಿಲೋರ್ ಅವರು ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ಕಂಡುಬಂದ ತಾಂತ್ರಿಕ ದೋಷದಿಂದಾಗಿ ಸಾಧ್ಯವಾಗಿಲ್ಲ.

ಬಳಿಕ ಉದ್ಯಮಿ ಇಲಾನ್ ಮಸ್ಕ್ ಅವರ ಸ್ಪೇಸ್‌ಎಕ್ಸ್‌ನ ಗಗನನೌಕೆಯಲ್ಲಿ ಮರಳಿ ಭೂಮಿಗೆ ಕರೆತರಲು ನಾಸಾ ಸಿದ್ಧತೆ ನಡೆಸಿತ್ತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?