Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪೊಲೀಸ್ ಕಾನ್‌ಸ್ಟೇಬಲ್‌ ಗಳಿಗೆ ನೇವಿ ಬ್ಲೂ ಪೀಕ್ ಕ್ಯಾಪ್‌

ಬೆಂಗಳೂರು : ಕರ್ನಾಟಕದಲ್ಲಿ ಪೊಲೀಸ್ ಕಾನ್‌ಸ್ಟೇಬಲ್‌ಗಳು ಮತ್ತು ಹೆಡ್ ಕಾನ್‌ಸ್ಟೇಬಲ್‌ಗಳು ಇನ್ನು ಮುಂದೆ ಸ್ಲೋಚ್ ಟೋಪಿಗಳ ಬದಲಿಗೆ ನೇವಿ ಬ್ಲೂ ಪೀಕ್ ಕ್ಯಾಪ್‌ಗಳನ್ನು ಧರಿಸಲಿದ್ದಾರೆ. ಈ ಮೂಲಕ ಈಗ ಧರಿಸುತ್ತಿದ್ದ ಸ್ಲೌಚ್ ಹ್ಯಾಟ್​ಗೆ ರಾಜ್ಯ ಸರ್ಕಾರ ಗುಡ್​ ಬೈ ಹೇಳಿದೆ.
ಈ ಹೊಸ ಮಾದರಿಯ ಕ್ಯಾಪ್​ಗಳು ತೆಲಂಗಾಣ ಪೊಲೀಸ್​ ಯೂನಿಫಾರಂನಿಂದ ಪ್ರೇರಿತವಾಗಿದ್ದು, ನಾಲ್ಕು ದಶಕಗಳಿಂದ ಕರ್ನಾಟಕದಲ್ಲಿ ಪೊಲೀಸ್​ ಕಾನ್ಸ್‌ಟೇಬಲ್‌ಗಳು ಧರಿಸುತ್ತಿದ್ದ ಸ್ಲೌಚ್ ಹ್ಯಾಟ್​ ಈಗ ಇತಿಹಾಸದ ಪುಟ ಸೇರಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ ಮಂಗಳವಾರ ಈ ಹೊಸ ಕ್ಯಾಪ್‌ಗಳನ್ನುಪೊಲೀಸ್ ಕಾನ್‌ಸ್ಟೇಬಲ್‌ಗಳಿಗೆ ವಿತರಣೆ ಮಾಡಿದ್ದಾರೆ.
ವಿವಿಧ ರಾಜ್ಯಗಳ ಪೋಲಿಸ್ ಕ್ಯಾಪ್ ಮಾದರಿಗಳನ್ನು ಪರಿಶೀಲಿಸಿ, ಅಂತಿಮವಾಗಿ ತೆಲಂಗಾಣ ಮಾದರಿಯ ಕ್ಯಾಪ್​ಗಳನ್ನು ಕರ್ನಾಟಕದ ಕಾನ್ಸ್‌ಟೇಬಲ್‌ಗಳಿಗೆ ಒದಗಿಸಲು ತೀರ್ಮಾನಿಸಿದ್ದರು. ತೆಲಂಗಾಣ ಮಾದರಿಯ ನೇವಿ ಬ್ಲೂ ಕ್ಯಾಪ್‌ಗಳು ಸೂಕ್ತ ವಿನ್ಯಾಸ, ಉತ್ತಮ ಫಿಟ್ ಮತ್ತು ವೃತ್ತಿಪರ ಆಕರ್ಷಣೆ ಹೊಂದಿರುವ ಕಾರಣ ಇದೇ ಮಾದರಿ ಬಗ್ಗೆ ಕರ್ನಾಟಕ ಸರ್ಕಾರ ಸಹಮತ ವ್ಯಕ್ತಪಡಿಸಿತ್ತು.

ಸ್ಲೌಚ್ ಹ್ಯಾಟ್​ಗಳ ಬಳಕೆ ಉಸಿರಾಟದ ತೊಂದರೆಗೆ ಕಾರಣವಾಗಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆಯ ವರದಿಗಳು ಹೇಳಿದ್ದವು. ಮೆರವಣಿಗೆಗಳು, ಸಾರ್ವಜನಿಕ ಬಂದೋಬಸ್ತ್​ನಂತಹ ಕೆಲಸಗಳಲ್ಲಿ ತೊಡಗಿಸಿಕೊಂಡಾಗ ಈ ಮಾದರಿಯ ಹ್ಯಾಟ್​ಗಳು ಅನುಕೂಲಕರವಾಗಿಲ್ಲ. ಅದರ ಗಾತ್ರ ಮತ್ತು ಆಕಾರದಿಂದ ಅದು ಬಿದ್ದುಹೋಗುವ ಅಥವಾ ಜಾರುವ ಸಾಧ್ಯತೆ ಹೆಚ್ಚಿದೆ ಎಂದು ದೂರು ಬಂದಿತ್ತು. ಹೀಗಾಗಿ ಹಳೆ ಮಾದರಿಯ ಸ್ಲೌಚ್ ಹ್ಯಾಟ್​ಗಳನ್ನ ರಾಜ್ಯ ಸರ್ಕಾರ ಬದಲಾಯಿಸಿದೆ.
ರಾಜ್ಯದ ಕಾನ್ಸ್ಟೇಬಲ್‌ಗಳು ಧರಿಸುತ್ತಿದ್ದ ಸ್ಲೌಚ್ ಕ್ಯಾಪ್‌ಗೆ ಸುಮಾರು ನಾಲ್ಕು ದಶಕಗಳ ಇತಿಹಾಸವಿದ್ದು, 1980–83ರ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಕಾಲದಲ್ಲಿ ಇವು ಪರಿಚಯಿಸಲ್ಪಟ್ಟವು. ಅಂದಿನ ನೀಲಿ ಮತ್ತು ಕೆಂಪು ಪಟ್ಟಿಯ ಪೇಟದ ಬದಲಿಗೆ ಈ ಕ್ಯಾಪ್‌ಗಳನ್ನು ದಿನನಿತ್ಯದ ಕರ್ತವ್ಯಕ್ಕಾಗಿ ಅಳವಡಿಸಿಕೊಳ್ಳಲಾಯಿತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?