Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

NEW CM : ಮಧ್ಯ ಪ್ರದೇಶಕ್ಕೂ ಈಗ ಹೊಸ ಮುಖ

 

ದೆಹಲಿ:
ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರು ಆಯ್ಕೆಯಾಗಿದ್ದಾರೆ.

ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಉಜ್ಜೈನಿ ಶಾಸಕ ಮೋಹನ್ ಯಾದವ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಯಾರಾಗುವರು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ.

ಶಿವರಾಜ್ ಸಿಂಗ್‌ ಚೌಹಾಣ್, ಪ್ರಹ್ಲಾದ್‌ ಪಟೇಲ್, ನರೇಂದ್ರ ಸಿಂಗ್ ತೋಮರ್‌, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ, ಮಧ್ಯಪ್ರದೇಶ ರಾಜ್ಯ ಘಟಕದ ಅಧ್ಯಕ್ಷ ವಿ.ಡಿ. ಶರ್ಮ ಅಲ್ಲದೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಿ.ಎಂ ಸ್ಥಾನದ ಆಕಾಂಕ್ಷಿಗಳಾಗಿದ್ದರು.

58 ರ ಹರೆಯದ ಡಾ. ಮೋಹನ್ ಯಾದವ್ ಅವರು ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆಯ ಸದಸ್ಯರಾಗಿದ್ದಾರೆ.

2013 ರಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.2020 ರಿಂದ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರಕಾರದಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ನವೆಂಬರ್ 17 ರಂದು ನಡೆದ ಚುನಾವಣೆಯಲ್ಲಿ 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡಿತ್ತು. ಕಾಂಗ್ರೆಸ್ 66 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಚುನಾವಣೆಗೂ ಮುನ್ನ ಬಿಜೆಪಿ ಯಾರನ್ನೂ ಮುಖ್ಯಮಂತ್ರಿಯ ಅಭ್ಯರ್ಥಿಯನ್ನಾಗಿ ಬಿಂಬಿಸಿರಲಿಲ್ಲ. ಶಿವರಾಜ್ ಸಿಂಗ್ ಚೌಹಾಣ್ ಅವರು ಮುಖ್ಯಮಂತ್ರಿಯಾಗಿದ್ದರೂ ಇಡೀ ಚುನಾವಣೆಯ ಪ್ರಚಾರವು ಪ್ರಧಾನಿ ಮೋದಿಯವರ ನಾಯಕತ್ವದ ಮೇಲೆ ಆಧಾರಿತವಾಗಿತ್ತು.

ನಿನ್ನೆಯಷ್ಟೇ ಛತ್ತೀಸ್ ಗಢಕ್ಕೆ ಬಿಜೆಪಿ ಮುಖ್ಯಮಂತ್ರಿ ನೇಮಕ ಮಾಡಿತ್ತು. ಇಂದು ಮಧ್ಯಪ್ರದೇಶಕ್ಕೆ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದ್ದು ನಾಳೆ ಅಥವಾ ನಾಡಿದ್ದು ರಾಜಸ್ಥಾನಕ್ಕೂ ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ ಇದೆ.

ಮಹತ್ವದ ಬದಲಾವಣೆ :
ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸಿದ ಮಾಜಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಅಸೆಂಬ್ಲಿ ಸ್ಪೀಕರ್ ಮಾಡಲಾಗಿದೆ.
ಅವರ ಹೆಸರೂ ಸಿಎಂ ಹುದ್ದೆಗೆ ಬಲವಾಗಿ ಕೇಳಿಬಂದಿತ್ತು. ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಸಚಿವಾಲಯವನ್ನು ಮುನ್ನಡೆಸಿದ್ದ ತೋಮರ್ ಚೌಹಾಣ್ ಅವರ ನಂತರ ಉನ್ನತ ಹುದ್ದೆಗೆ ಏರಬಹುದು ಎಂಬ ಬಗ್ಗೆ ಚರ್ಚೆಯಾಗಿತ್ತು.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಇನ್ನಷ್ಟು ಬಲಪಡಿಸಲು ಬಿಜೆಪಿಯು ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಹೆಸರಿಸಿದೆ. ಜಗದೀಶ್ ದಿಯೋರಾ ಮತ್ತು ರಾಜೇಶ್ ಶುಕ್ಲಾ ಅವರು ಮಧ್ಯಪ್ರದೇಶ ಉಪಮುಖ್ಯಮಂತ್ರಿಗಳಾಗಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ