Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದಲ್ಲಿ ಡಬಲ್ ಇಂಜಿನ್ ಸರಕಾರ ಅಧಿಕಾರಕ್ಕೆ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ

ಮೂಡಲಗಿ: ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರಗತಿಯ ಬೆಳವಣಿಗೆಗಳು ನಡೆಯುತ್ತಿದ್ದು ಅಕ್ಟೋಂಬರ್-ನವ್ಹೆಂಬರ್ ತಿಂಗಳಿನಲ್ಲಿ ಬಾರಿ ಬದಲಾವಣೆ ಆಗಲಿದೆ ಎಂದು ರಾಜ್ಯ ಸರ್ಕಾರದ ಸಹಕಾರ ಸಚಿವ ಕೆ. ಎನ್. ರಾಜಣ್ಣ ಹೇಳಿಕೆ ಗಮನಿಸಿದರೆ ಮತ್ತು ಕಾಂಗ್ರೇಸ್‌ನಲ್ಲಿ ಆಗುತ್ತಿರುವ ವಿದ್ಯಮಾನಗಳನ್ನು ಅವಲೋಕಿಸಿದರೇ ಮುಂದಿನ ದಿನಗಳಲ್ಲಿ ಡಂಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಆಶ್ಚರ್ಯ ಪಡಬೇಕಾಗಿಲ್ಲ ಎಂದು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಹೇಳಿದರು.
ಶನಿವಾರ ಜೂ-28 ರಂದು ಹಳ್ಳೂರ ಗ್ರಾಮದ ಹಳ್ಳದರಂಗ ದೇವಸ್ಥಾನ ಹತ್ತಿರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ 50 ಲಕ್ಷ ರೂ,ಗಳ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಮುಂದುವರೆದ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಅವರು ಮಾತನಾಡಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೇಸ್ ದಿನನಿತ್ಯ ಹಗರಣಗಳು, ಮಂತ್ರಿಗಳ ಕಚ್ಚಾಟ, ರಾಜ್ಯದಲ್ಲಿ ಅರಾಜಕತೆ, ಆರ್ಥಿಕ ಸಂಕಷ್ಟಗಳು ಈ ರೀತಿ ಸಮಸ್ಯೆಗಳ ಸರಮಾಲೆಯಲ್ಲಿ ಸಿಕ್ಕಿ ಹಾಕಿಕೊಂಡಿದೆ. ರಾಜ್ಯದ ಜನರಿಗೆ ಅಭಿವೃದ್ದಿ ಎಂಬುವುದು ಮರಿಚಿಕೆಯಾಗಿದೆ. ಕಾಂಗ್ರೇಸ್ ಶಾಸಕರೆ ಸರ್ಕಾರದ ಕಾರ್ಯ ವೈಖರಿಗಳ ಬಗ್ಗೆ ಬೇಸರ ವ್ಯಕ್ತ ಪಡಿಸುತ್ತಿರುವುದು ಎದ್ದು ಕಾಣುತ್ತಿದೆ. ರಾಜ್ಯದ ಜನ ಅಭಿವೃದ್ದಿ ಪರವಾದ ಸರ್ಕಾರವನ್ನು ಬಯಸುತ್ತಿದ್ದಾರೆ ಎಂದರು.
ಈಗಾಗಲೇ ಹಳ್ಳೂರ ಗ್ರಾಮಕ್ಕೆ ರಾಜ್ಯಸಭಾ ಸಂಸದರ ನಿಧಿಯಿಂದ ಹಳ್ಳದರಂಗ ಸಮುದಾಯ ಭವನಕ್ಕೆ 50 ಲಕ್ಷ ರೂ.ಗಳು, ಚಂದ್ರವ್ವದೇವಿ ಸಮುದಾಯ ಭವನಕ್ಕೆ 5 ಲಕ್ಷ ರೂ.ಗಳು, ಮಲ್ಲಿಕಾರ್ಜುನ ಸಮುದಾಯ ಭವನಕ್ಕೆ 5 ಲಕ್ಷ ರೂ.ಗಳು, ಗಾಂಧಿ ನಗರದ ಬಸವೇಶ್ವರ ಸಮುದಾಯ ಭವನಕ್ಕೆ 5 ಲಕ್ಷ ರೂ.ಗಳು, ಆಧಿನಾಥ ಸಮುದಾಯ ಭವನಕ್ಕೆ 5 ಲಕ್ಷ ರೂ.ಗಳು, ಬಸ್ ಪ್ರಯಾಣಿಕರ ತಂಗುದಾನಕ್ಕೆ 5 ಲಕ್ಷ ರೂ.ಗಳು ಹೀಗೆ ಎಲ್ಲ ಸಮುದಾಯದವರಿಗೂ ಕೂಡಾ ದೊಡ್ಡ ಪ್ರಮಾಣದಲ್ಲಿ ಅನುದಾನವನ್ನು ವಿತರಿಸುವ ಮೂಲಕ ಹಳ್ಳೂರ ಗ್ರಾಮದ ಅಭಿವೃದ್ದಿಯಲ್ಲಿ ನಾನು ಕೂಡಾ ಅಳಿಲು ಸೇವೆ ಸಲ್ಲಿಸುತ್ತಿದ್ದೇನೆ. ಅದೇ ರೀತಿ ಬರುವಂತಹ ದಿನಗಳಲ್ಲಿ ಯುವಕರ ಅನುಕೂಲಕ್ಕಾಗಿ ಗ್ರಾಮದಲ್ಲಿ ಒಂದು ಓಪ್ ಜಿಮ್ ಸೌಲಭ್ಯ ಒದಗಿಸಿ ಕೊಡಲು ನಾನು ಪ್ರಯತ್ನಿಸುತ್ತಿದ್ದೇನೆ, ಇನ್ನೂ ಹೆಚ್ಚು ಸೇವೆಯನ್ನು ಮಾಡಲು ನಾನು ಸಿದ್ದನಿದ್ದೇನೆ, ತಾವು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಚನ್ನಮ್ಮ ವೃತ್ತದ ಹತ್ತಿರ ಬಸ್ ಪ್ರಯಾಣಿಕರ ತಂಗುದಾನಕ್ಕೆ ಪೂಜೆ ನೇರವೇರಿಸಿದರು. ತದನಂತರ ಚಂದ್ರವ್ವದೇವಿ ದೇವಸ್ಥಾನದ ಹತ್ತಿರ ನಿರ್ಮಾಣಗೊಂಡ ಸಮುದಾಯ ಭವನ ಕಟ್ಟಡವನ್ನು ಉದ್ಘಾಟಿಸಿದರು,
ಈ ಸಂದರ್ಭದಲ್ಲಿ, ಗ್ರಾ.ಪಂ ಅಧ್ಯಕ್ಷೆ ನೀಲವ್ವ ಹೊಸಟ್ಟಿ, ಸದಸ್ಯರಾದ ಸದಾಶಿವ ಮಾವರಕರ, ಪ್ರಮುಖರಾದ ಬಸವಣೆಪ್ಪ ಡಬ್ಬನ್ನವರ, ಶಂಕರ ಲೋಕನ್ನವರ, ಕುಮಾರ ಲೋಕನ್ನವರ, ಶಿವಪ್ಪ ಕೌಜಲಗಿ, ಶ್ರೀಕಾಂತ ಕೌಜಲಗಿ, ಸುರೇಶ ಮಗದುಮ್ಮ, ತುಕಾರಾಮ ಸನದಿ, ಮುತ್ತೆಪ್ಪ ಬೋಳನ್ನವರ, ಬಾಳಗೌಡ ಪಾಟೀಲ, ಗೂಳಪ್ಪ ನೇಸೂರ, ಯಲ್ಲಪ್ಪ ಕುಲಗೋಡ, ಆನಂದ ಸಂತಿ ಗಿರಿಮಲ್ಲಪ್ಪ ಕಲ್ಲೋಳಿ, ಗಿರಮಲ್ಲಪ್ಪ ಸಂತಿ, ಲಕ್ಷ್ಮಣ ಹೊಸಟ್ಟಿ, ಈರಪ್ಪ ಢವಳೇಶ್ವರ, ಶ್ರೀಶೈಲ ಪೂಜೇರಿ, ಬಸವರಾಜ ಗಾಡವಿ, ಚಂದ್ರಶೇಖರ ಸಪ್ತಸಾಗರ, ಪ್ರವೀಣ ಮಾವರಕರ ಸೇರಿದಂತೆ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?