Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತೆರಿಗೆ ಹಂಚಿಕೆ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪ ಟೀಕೆ-ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ? – ಸಿಎಂ ಪ್ರಶ್ನೆ

ದಾವಣಗೆರೆ(ಹರಿಹರ),  :

ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿರುವುದಕ್ಕೆ ಪ್ರತಿಕ್ರಯಿಸಿ, ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಅವರು ಇಂದು ಹರಿಹರದಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪನವರು ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ಕರ್ನಾಟಕದಿಂದ ನೀಡಲಾಗಿರುವ ತೆರಿಗೆಯನ್ನು ನಮಗೆ ನೀಡುತ್ತಿಲ್ಲ. 100 ರೂ.ಗೆ ಕೇವಲ 13 ರೂ. ರಾಜ್ಯಕ್ಕೆ ವಾಪಸ್ಸು ಬರುತ್ತಿದೆ. ರಾಜ್ಯದಿಂದ 4,30,000 ಕೋಟಿ ತೆರಿಗೆ ಬರುತ್ತಿದ್ದರೆ, ನಮಗೆ ಕೇವಲ 50,257 ಕೋಟಿ ರೂ.ಮಾತ್ರ ರಾಜ್ಯಕ್ಕೆ ಬರುತ್ತಿದೆ. ಕೇಂದ್ರದ ಈ ಧೋರಣೆಯನ್ನು ವಿರೋಧಿಸಲಾಗುತ್ತಿದೆ ಎಂದರು.

*ರಾಜ್ಯಸರ್ಕಾರದಿಂದ 34 ಲಕ್ಷ ರೈತರಿಗೆ 650 ಕೋಟಿ ರೂ. ತಾತ್ಕಾಲಿಕ ಬರ ಪರಿಹಾರ*

ಬರನಿರ್ವಹಣೆಗೆ ಸರ್ಕಾರದ ಕ್ರಮಗಳ ಬಗೆಗಿನ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬರನಿರ್ವಹಣೆಯ ಕ್ರಮವಾಗಿ, ಕುಡಿಯುವ ನೀರು, ಮೇವು , ಉದ್ಯೋಗ ನೀಡಲಾಗುತ್ತಿದ್ದು, ಒಟ್ಟು 860 ಕೋಟಿ ರೂ.ಗಳನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಜನರು ಗುಳೇ ಹೋಗದಂತೆ ತಪ್ಪಿಸಲು ಹಾಗೂ ಅವರ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಲು ಸ್ಪಷ್ಟ ನಿರ್ದೇಶನ ನೀಡಲಾಗಿದೆ. ತಾತ್ಕಾಲಿಕ ಪರಿಹಾರವಾಗಿ ಒಬ್ಬ ರೈತನಿಗೆ ತಲಾ 2000 ದಂತೆ ಸುಮಾರು 34 ಲಕ್ಷ ರೈತರಿಗೆ 650 ಕೋಟಿ ರೂ. ನೀಡಲಾಗಿದೆ. ಐದು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಬರಪರಿಹಾರ ನೀಡಿಲ್ಲ. ರಾಜ್ಯದ ಬಿಜೆಪಿ ನಾಯಕರು ಕೇವಲ ಭಾಷಣ ಮಾಡುತ್ತಾರೆಯೇ ಹೊರತು, ಕೇಂದ್ರದೊಂದಿಗೆ ಸಂವಹಿಸಿ ಪರಿಹಾರ ದೊರಕಿಸಿ ಕೊಡುತ್ತಿಲ್ಲ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ