Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೇ 5 ರಿಂದ ಬೆಳಗಾವಿಯಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ

ಬೆಳಗಾವಿ: ಶ್ರೀ ವೇದವ್ಯಾಸ ಜಯಂತಿ, ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಸೇವಾ ಸಮಿತಿ, ಶ್ರೀ ಭಂಡಾರ ಕೇರಿ ಮಠ ಹಾಗೂ ಶ್ರೀ ಕೃಷ್ಣ ಮಠಗಳ ವತಿಯಿಂದ ಮೇ 5 ರಿಂದ 11 ರವರೆಗೆ ಶ್ರೀ ವಿದ್ಯಾಮಾನ್ಯ ತೀರ್ಥ ಶ್ರೀ ಪಾದಂಗಳವರ 25 ನೇ ಮಹಾಸಮಾರಾಧನೆ ಪ್ರಯುಕ್ತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಟಿಳಕವಾಡಿಯ ಶ್ರೀ ಕೃಷ್ಣ ಮಠ ಮತ್ತು ಕೆ ಎಲ್ ಎಸ್ ಗೋಗಟೆ ಕಾಲೇಜಿನ ಕೆ.ವೇಣುಗೋಪಾಲ ಅಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.

ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಶ್ರೀ ಪಾದಂಗಳವರ ಅಧ್ಯಕ್ಷತೆ ಮತ್ತು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದಂಗಳವರ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ಶ್ರೀ ವಿದ್ಯಾಮಾನ್ಯ ತೀರ್ಥ ಶ್ರೀಪಾದಂಗಳವರ 25 ನೇ ಮಹಾ ಸಮಾರಾಧನೆ, ಪೂಜ್ಯರ ಪೀಠಾರೋಹಣ ಶತಮಾನೋತ್ಸವ, ವೇದವ್ಯಾಸ ಜಯಂತಿ ಪ್ರಯುಕ್ತ ತತ್ಪ್ರ ಜ್ಞಾನ ಸತ್ರ, ಶಿಬಿರ, ವೇದವ್ಯಾಸ ನರಸಿಂಹ ಮಂತ್ರ ಹೋಮಗಳು, ನಾಡಿನ ಗಣ್ಯ ವಿದ್ವಾಂಸರಿಂದ ಆಧ್ಯಾತ್ಮಿಕ ಚಿಂತನೆ, ಉಪನ್ಯಾಸಗಳು, ನಗರದ ಭಜನಾ ಮಂಡಳಗಳಿಂದ ಭಜನೆ, ಶೋಭಾಯಾತ್ರೆ, ವಿದ್ವಾಂಸರಿಗೆ ಸನ್ಮಾನ, ಮಹಿಳಾ ಗೋಷ್ಠಿ, ಯುವ ಗೋಷ್ಠಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪ್ರತಿದಿನ ಶ್ರೀ ಮನ್ಮಧ್ಯಾಚಾರ್ಯ ಕರಾರ್ಚಿತ ಶ್ರೀ ಸೀತಾಲಕ್ಷ್ಮಣ ಸಹಿತ ಶ್ರೀರಾಮದೇವರ ಸಂಸ್ಥಾನ ಪೂಜೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕೃಷ್ಣ ಮಠದ ಪ್ರಕಟಣೆ ತಿಳಿಸಿದೆ.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಈ ಮೂಲಕ ಕೋರಲಾಗಿದೆ. ಮಾಹಿತಿಗೆ ಶ್ರೀನಿವಾಸ ಆಚಾರ್ಯ ಹೊನ್ನಿದಿಬ್ಬ 9886457735,
ಎಂ.ಜಿ. ಭಟ್ 9986779878 ಇವರನ್ನು ಸಂಪರ್ಕಿಸಬಹುದು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?