Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾರಾಷ್ಟ್ರ ರಾಜಕಾರಣದಲ್ಲಿ ಟ್ವಿಸ್ಟ್ ನೀಡಿದ ಪವಾರ್

ಪುಣೆ: ಎನ್‌ಸಿಪಿ ಶರದ್‌ಚಂದ್ರ ಪವಾರ್ ಪಕ್ಷದ ಮುಖ್ಯಸ್ಥ ಶರದ್‌ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರನ್ನು ಊಟಕ್ಕೆ ಆಹ್ವಾನಿಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮಾ.2 ರಂದು ನಡೆಯಲಿರುವ 'ನಮೋ ಮಹಾರೋಜ್ ಗಾರ್ ಮೇಳಾವ್'ನಲ್ಲಿ ಭಾಗಿಯಾಗಲು ಪುಣೆಯ ಬಾರಾಮತಿಗೆ ಭೇಟಿ ನೀಡುತ್ತಿರುವ ಈ ನಾಯಕರನ್ನು ಶರದ್ ಪವಾರ್ ಆಹ್ವಾನಿಸಿದ್ದಾರೆ.

ರಾಜಕೀಯ ವಿರೋಧಿಗಳಾದ ಇವರನ್ನು ಊಟಕ್ಕೆ ಆಹ್ವಾನಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಅಜಿತ್, ಶರದ್ ಸಂಬಂಧ ಈಗಾಗಲೇ ಹಳಸಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್‌ಚಂದ್ರ ಪವಾರ್) ಅಧ್ಯಕ್ಷ ಶರದ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಉಪಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಹಾಗೂ ಅಜಿತ್ ಪವಾರ್ ಅವರನ್ನು ಊಟಕ್ಕೆ ಆಹ್ವಾನಿಸಿದ್ದು, ಇದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಮಾರ್ಚ್ 2ರಂದು ಬಾರಾಮತಿಗೆ ಬರುತ್ತಿರುವ ಗಣ್ಯರಿಗೆ ತಮ್ಮ ಮನೆಯಲ್ಲಿ ಊಟ ಆಯೋಜಿಸಿರುವುದಾಗಿ ಶರದ್ ಹೇಳಿದ್ದಾರೆ. ಪಕ್ಷದ ವಿಭಜನೆ ಸೇರಿದಂತೆ ತಮ್ಮ ಹಲವು ಹಿನ್ನಡೆಗೆ ಕಾರಣರಾದವರನ್ನು ತಮ್ಮ ಮನೆಗೆ ಊಟಕ್ಕೆ ಆಹ್ವಾನಿಸಿದ್ದರ ಹಿಂದಿನ ಮರ್ಮವೇನು ಎಂಬುದರ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಕಾಲೇಜು ಆವರಣದಲ್ಲಿ ‘ನಮೋ ಮಹಾರೋಜ್‌ಗಾರ್‌ ಮೇಳಾವ್’ ಆಯೋಜನೆಗೊಂಡಿದೆ. ಇದರಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಪಾಲ್ಗೊಳ್ಳುತ್ತಿದ್ದಾರೆ. 1999ರಲ್ಲಿ ತಾವೇ ಸ್ಥಾಪಿಸಿದ ಎನ್‌ಸಿಪಿ ಇಬ್ಭಾಗವಾದ ನಂತರ ಅದಕ್ಕೆ ಕಾರಣರಾದ ಅಜಿತ್ ಪವಾರ್ ಸಹಿತ ಹಲವರು ಶರದ್ ವಿರೋಧಿಗಳಾದರು. ಎನ್‌ಸಿಪಿ ಇಬ್ಭಾಗವಾದ ನಂತರ ಪಕ್ಷದ ಚಿಹ್ನೆಯೂ ಶರದ್ ಅವರಿಗೆ ಒಲಿಯಲಿಲ್ಲ. ತಮ್ಮ ವಿರೋಧಿ ಶಿವಸೇನಾ–ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಅಜಿತ್ ಪವಾರ್ ವಿರುದ್ಧ ಶರದ್ ಗುಡುಗಿದ್ದರು. ಆದರೆ ಇದೀಗ ಆಯೋಜನೆಗೊಂಡಿರುವ ಈ ಮೇಳದಲ್ಲಿ ಪಾಲ್ಗೊಳ್ಳಲು ಬರುತ್ತಿರುವ ಈ ವಿರೋಧಿ ಬಣವನ್ನೇ ಊಟಕ್ಕೆ ಆಹ್ವಾನಿಸಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?