Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

1 ರೂ.ಗೆ ಶರ್ಟ್ : ಮುಗಿಬಿದ್ದ ಜನ !

ಮಂಗಳೂರು: ಅತ್ಯಂತ ಕಡಿಮೆ ದರದಲ್ಲಿ ಯಾವುದೇ ವಸ್ತು ಸಿಗುತ್ತದೆ ಎಂದರೆ ಯಾರು ಬಿಡುತ್ತಾರೆ. ಈಗಂತೂ ಪೈಪೋಟಿ ಯುಗ. ವ್ಯಾಪಾರಸ್ಥರು ಪೈಪೋಟಿಗೆ ಬಿದ್ದು ಮಾರುಕಟ್ಟೆಯಲ್ಲಿ ತಮ್ಮ ವಸ್ತುಗಳನ್ನು ಮಾರಾಟ ಮಾಡುವುದು ಎಲ್ಲ ಕಡೆ ಗಮನ ಸೆಳೆಯುತ್ತದೆ. ಯುಗಾದಿ, ಗಣೇಶ ಚತುರ್ಥಿ, ದೀಪಾವಳಿ ಸೇರಿದಂತೆ ಹಬ್ಬ-ಹರಿದಿನಗಳಲ್ಲಿ ವಿಶೇಷ ರಿಯಾಯಿತಿ ಹಾಗೂ ಕಡಿಮೆ ದರದಲ್ಲಿ ವಸ್ತುಗಳನ್ನು ಮಾರಾಟ ಮಾಡುವುದು ಎಲ್ಲೆಡೆ ಕಂಡು ಬರುತ್ತದೆ. ಅಂತಹ ಘಟನೆಗೆ ಉಪ್ಪಿನಂಗಡಿ ಸಾಕ್ಷಿಯಾಗಿದೆ.

ಒಂದು ರು.ತನ್ನಿ, ಒಂದು ಪ್ಯಾಂಟ್, ಶರ್ಟ್ ಕೊಂಡೊಯ್ಯಿರಿ ಎಂಬ ಬಟ್ಟೆ ಅಂಗಡಿಯವನ ಬಕ್ರೀದ್ ಕೊಡುಗೆಯನ್ನು ತಮ್ಮದಾಗಿಸಿಕೊಳ್ಳಲು ಜನ ನಸುಕಿನ ಜಾವ 4 ಗಂಟೆಯಿಂದಲೇ ಅಂಗಡಿ ಮುಂದೆ ಸರತಿ ಸಾಲಿನಲ್ಲಿ ನಿಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯಲ್ಲಿ ಭಾನುವಾರ ನಡೆದಿದೆ.

ಇಲ್ಲಿನ ಬಸ್ ನಿಲ್ದಾಣದ ಪಕ್ಕದ ಪಂಚಾಯಿತಿ ಸ್ವಾಮ್ಯದ ವಾಣಿಜ್ಯ ಮಳಿಗೆಯಲ್ಲಿರುವ ಒಂದು ಜವಳಿ ಅಂಗಡಿಯಲ್ಲಿ ಗ್ರಾಹಕರನ್ನು ಸೆಳೆಯುವ ಸಲುವಾಗಿ ಈ ಕೊಡುಗೆ ಘೋಷಿಸಲಾಗಿತ್ತು. ಈ ಕೊಡುಗೆ ಜೂನ್ 16ರಂದು ಒಂದು ರು.ನೋಟಿನೊಂದಿಗೆ ಆಗಮಿಸುವ ಮೊದಲ 20 ಗ್ರಾಹಕರಿಗೆ ಮಾತ್ರ ಎಂಬ ಷರತ್ತು ವಿಧಿಸಲಾಗಿತ್ತು.

ಮೊದಲ ಗ್ರಾಹಕರಾಗುವ ಆಸೆಯಿಂದ ನಸುಕಿನ ಜಾವ 4 ಗಂಟೆಗೆ ಎದ್ದು ಬಂದು ಅಂಗಡಿ ಮುಂದೆ ಜನ ನಿಲ್ಲಲಾರಂಭಿಸಿದ್ದಾರೆ. ಮುಂಜಾನೆ 7 ಗಂಟೆಗೆ 20ಕ್ಕೂ ಅಧಿಕ ಮಂದಿ ಸರತಿ ಸಾಲಿನಲ್ಲಿ ನಿಂತಿದ್ದು, ಹಲವು ಮಂದಿ ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿಗಳ ಸಂಖ್ಯೆಯನ್ನು ಲೆಕ್ಕ ಹಾಕಿ 20 ದಾಟಿರುವುದನ್ನು ದೃಢಪಡಿಸಿಕೊಂಡು ನಿರ್ಗಮಿಸಿದರು. ಇನ್ನು ಕೆಲವರು ತಮಗೂ ದೊರೆಯಬಹುದೆಂದು ಆಸೆಯಿಂದ ಸರತಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡು ಬಂತು. ಮುಂಜಾನೆ 9 ಗಂಟೆಯ ಸುಮಾರಿಗೆ ಆಗಮಿಸಿದ ಅಂಗಡಿ ಮಾಲಿಕ, ನುಡಿದಂತೆ ಸರತಿ ಸಾಲಿನಲ್ಲಿ ಮೊದಲಾಗಿ ಇದ್ದ 20 ಮಂದಿಗೆ 1 ರು. ಪಡೆದು ಪ್ಯಾಂಟ್, ಶರ್ಟ್ ವಿತರಿಸಿದರು. ಉಳಿದ ಮಂದಿಗೆ ಗ್ರಾಹಕರಾಗಿ ಪ್ಯಾಂಟ್‌, ಶರ್ಟ್ ಖರೀದಿಸಲು ಅವಕಾಶ ಕಲ್ಪಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?