Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಕ್ಷಾಂತರ ರೂ. ಚಿನ್ನಾಭರಣ ಕಳ್ಳತನ : ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಳಗಾವಿ : ಮನೆಬಾಗಿಲು ಮುರಿದು ಚಿನ್ನಾಭರಣ ದೋಚುತ್ತಿದ್ದ ಆರೋಪದ ಮೇಲೆ ಕುಖ್ಯಾತ ಕಳ್ಳನನ್ನು ಬಂಧಿಸಿರುವ ಚನ್ನಮ್ಮನ ಕಿತ್ತೂರು ಪೊಲೀಸರು ಆತನಿಂದ ಐದು ಕಡೆಗಳಲ್ಲಿ ಕಳ್ಳತನ ಮಾಡಿದ್ದ ₹20.30 ಲಕ್ಷ ಕಿಮ್ಮತ್ತಿನ 203 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳಗಾವಿ ರುಕ್ಕಿಣಿ ನಗರದ ನಿತೇಶ ಉರ್ಫ್ ದೀಪು ಜಗನ್ನಾಥರಾವ್ ಢಾಪಳೆ (42) ಬಂಧಿತ ಆರೋಪಿ. ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

'ಕಳೆದ ವರ್ಷ ಜುಲೈ ತಿಂಗಳಲ್ಲಿ ಇಲ್ಲಿನ ವಿದ್ಯಾಗಿರಿಯಲ್ಲಿರುವ ಕೀಲಿ ಹಾಕಿದ್ದ ಪ್ರವೀಣ ಇಟಗಿ ಅವರ ಹಿತ್ತಲಿನ ಬಾಗಿಲು ಮುರಿದು ನಗದು ಸೇರಿ ₹11.60 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ದೋಚಿಕೊಂಡು ಪರಾರಿಯಾಗಿದ್ದನು. ಈ ಪ್ರಕರಣದ ಬೆನ್ನು ಹತ್ತಿದ ಕಿತ್ತೂರು ಪೊಲೀಸರು, ಇದನ್ನು ಸೇರಿ ಕಿತ್ತೂರು ಠಾಣಾ ವ್ಯಾಪ್ತಿಯಲ್ಲಿಯ ಮೂರು ಪ್ರತ್ಯೇಕ ಪ್ರಕರಣ, ಬೈಲಹೊಂಗಲ ಮತ್ತು ಹುಕ್ಕೇರಿ ಪೊಲೀಸ್‌ ಠಾಣಾ ವ್ಯಾಪ್ತಿಯ ತಲಾ ಒಂದು ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ' ಎಂದು ಡಿವೈಎಸ್ ಪಿ ವೀರಯ್ಯ ಹಿರೇಮಠ ಗುರುವಾರ ಪತ್ರಕರ್ತರಿಗೆ ತಿಳಿಸಿದರು.

ಬಂಧಿತನ ಮೇಲೆ ಬೆಳಗಾವಿ ನಗರ, ಗದಗ, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯದಲ್ಲಿಯೂ ಕಳ್ಳತನ ಆರೋಪದ ಪ್ರಕರಣಗಳಿವೆ ಎಂದು ಅವರು ಮಾಹಿತಿ ನೀಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ