Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಏಜೆಂಟರ ಹಾವಳಿ ವಿರೋಧಿಸಿ ನಗರ ಸೇವಕರಿಂದ ಪ್ರತಿಭಟನೆ

 

ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಏಜೆಂಟರ ಹಾವಳಿ ತಪ್ಪಿಸುವಂತೆ ಆಗ್ರಹಿಸಿ ಇಂದು ನಗರ ಸೇವಕರಿಂದ ಪ್ರತಿಭಟನೆ ನಡೆಸಲಾಯಿತು.‌

ಇಂದು ಬೆಳಗಾವಿ ಮಹಾನಗರ ಪಾಲಿಕೆ ಕಾರ್ಯಾಲಯದ ಮೆಟ್ಟಿಲುಗಳ ಮೇಲೆ ವಿರೋಧ ಪಕ್ಷದ ನಗರ ಸೇವಕರು ಧರಣಿಯನ್ನು ಕೈಗೊಂಡರು. ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆ ವಸೂಲಾತಿಯಲ್ಲಿ ಕಂದಾಯ ವಿಭಾಗ ಭ್ರಷ್ಟಾಚಾರದಲ್ಲಿ ಮುಳುಗಿ ಮಹಾನಗರ ಪಾಲಿಕೆ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡುತ್ತಿದೆ. ಏಜೆಂಟರ ಮೂಲಕ ಕೆಲಸ ನಿರ್ವಹಿಸಿ ಜನರಿಗೆ ತೊಂದರೆ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಘೋಷಣೆಗಳನ್ನು ಕೂಗಿದರು.

ಆಸ್ತಿ ತೆರಿಗೆ ಪಾವತಿಸುವ ಪ್ರಕ್ರಿಯೆ ನಗರಸೇವಕರು ಅಥವಾ ಸಾರ್ವಜನಿಕರು ನೇರವಾಗಿ ಹೋದರೇ, 1-2 ತಿಂಗಳುಗಳ ಕಾಲ ಅಲೆದಾಡಿಸಲಾಗುತ್ತಿದೆ. ಹಣದ ಬೇಡಿಕೆಯನ್ನು ಇಡಲಾಗುತ್ತಿದೆ. ಅದೇ ಕೆಲಸ ಏಜೆಂಟ್’ಗಳ ಮೂಲಕ ಮಾಡಿಸಿದರೇ, ಕೇವಲ 1-2 ಗಂಟೆಗಳಲ್ಲಿ ಮಾಡಲಾಗುತ್ತಿದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದರೇ, ಸುಮಾರು ಒಂದೂವರೆ ಕೋಟಿ ತೆರಿಗೆಯನ್ನು ಮಹಾನಗರ ಪಾಲಿಕೆ ಸಂಗ್ರಹಿಸಬಹುದಾಗಿದೆ ಎಂದರು.

ಹಲವಾರು ವರ್ಷಗಳಿಂದ ಬಾಕಿ ತೆರಿಗೆಯನ್ನು ಜನರಿಂದ ಮತ್ತು ಕಾರ್ಖಾನೆಗಳಿಂದ ವಸೂಲಿ ಮಾಡದೆ ಹಣ ಪಡೆದು, ಸೆಟ್ಲಮೆಂಟ್ ಮಾಡಿ ಮಹಾನಗರ ಪಾಲಿಕೆ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಲಾಗುತ್ತಿದೆ. ಇದರಿಂದಾಗಿ ಮಹಾನಗರ ಪಾಲಿಕೆಯ ಬಳಿ ಅಭಿವೃದ್ಧಿ ಕಾರ್ಯಗಳಿಗಾಗಿ ಅನುದಾನವಿಲ್ಲದಂತಾಗಿದೆ ಎಂದು ಆರೋಪಿಸಿದರು.

ನಗರ ಸೇವಕರಾದ ವೈಶಾಲಿ ಭಾತಕಾಂಡೆ, ಜ್ಯೋತಿ ಕಡೋಲಕರ, ಆಪ್ರೋಜ್ ಮುಲ್ಲಾ, ಖುರ್ಷಿದ್ ಮುಲ್ಲಾ, ಶಿವಾಜೀರಾವ್ ಮಂಡೋಳಕರ, ರವಿ ಸಾಳುಂಕೆ, ರೇಷ್ಮಾ ಭೈರಕದಾರ, ಅಸ್ಮಿತಾ ಪಾಟೀಲ್ ಸೇರಿದಂತೆ ಅನೇಕರು ಇದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಪಹಾರಕೂಟದಲ್ಲೇ ರಾಜೀನಾಮೆ ಸುಳಿವು ನೀಡಿದ ಸಿಎಂ : ಸಹೋದ್ಯೋಗಿಗಳ ಸಮ್ಮುಖದಲ್ಲೇ ರಾಜೀನಾಮೆ  ಘೋಷಿಸಿದ ಸಿದ್ದರಾಮಯ್ಯ..!ಬೆಳಗಾವಿಯಲ್ಲಿ ಯುವಕನನ್ನು ಕೊಚ್ಚಿ ಕೊಲೆ ...ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆ