Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೇಂದ್ರ ಗ್ರಂಥಾಲಯಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಭೇಟಿ

ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯಕ್ಕೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸೆ. 19 ರಂದು ಶೈಕ್ಷಣಿಕ ಭೇಟಿ ನೀಡಿ, ಇಲ್ಲಿನ ಕಾರ್ಯ ನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡರು. ಉಪನಿರ್ದೇಶಕ ರಾಮಯ್ಯ ಅವರ ಮಾರ್ಗದರ್ಶನದಲ್ಲಿ, ಗ್ರಂಥಪಾಲಕರಾದ ಎಸ್ .ಎಸ್. ಸೀಮಿಮಠ ಮತ್ತು ಪ್ರಕಾಶ ಇಚಲಕರಂಜಿ ಅವರು ಗ್ರಂಥಾಲಯದ ವಿವಿಧ ವಿಭಾಗಗಳಾದ, ತಾಂತ್ರಿಕ ವಿಭಾಗದಲ್ಲಿನ ಕಾರ್ಯಗಳು,ಪರಿಚಲನಾ ವಿಭಾಗ, ಸ್ಪರ್ಧಾತ್ಮಕ ಪರೀಕ್ಷೆ ವಿಭಾಗ ಮತ್ತು ಅಂತರ್ಜಾಲ ವಿಭಾಗದಲ್ಲಿನ ಕೆಲಸ ಮತ್ತು ಸೇವೆಗಳ ಬಗ್ಗೆ ಮಾಹಿತಿ ನೀಡಿದರು.


ಗ್ರಂಥಾಲಯದಲ್ಲಿನ ನೊಂದಣಿ ಪ್ರಕ್ರಿಯೆ,ಮಕ್ಕಳ ಗ್ರಂಥಾಲಯದಲ್ಲಿನ ಪುಸ್ತಕಗಳು ಮತ್ತು ಸೌಲಭ್ಯಗಳ ಬಗ್ಗೆ ಮತ್ತು ಆಡಳಿತಾತ್ಮಕ ವಿಷಯಗಳು,ಗ್ರಂಥಾಲಯ ತಂತ್ರಾಂಶದ ಬಗ್ಗೆ ವಿಧ್ಯಾರ್ಥಿಗಳು ತಿಳಿದುಕೊಂಡರು. ಜೊತೆಗೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಕಚೇರಿಗೂ ಭೇಟಿ ನೀಡಿ ಅಲ್ಲಿನ ಕಾರ್ಯ ನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡರು. ಇದಕ್ಕೂ ಮೊದಲು ಎಲ್ಲಾ ವಿದ್ಯಾರ್ಥಿಗಳು ಶಹಾಪುರ ಡಿಜಿಟಲ್ ಗ್ರಂಥಾಲಯಕ್ಕೂ ಭೇಟಿ ನೀಡಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಡಾ.ಕಿರಣ ಸವಣೂರ, ಸಹಾಯಕ ಪ್ರಾಧ್ಯಾಪಕ ಡಾ.ರಮೇಶ ಕುರಿ ಮತ್ತು ನಗರ ಕೇಂದ್ರ ಗ್ರಂಥಾಲಯದ ಸಿಬ್ಬಂದಿಗಳಾದ ಸುಮಿತ್ ಕಾವಳೆ, ಆನಂದ ಮುತ್ತಗಿ, ಸುನಿಲ್ ಡಿ, ಏಕನಾಥ ಅಂಬೇಕರ, ಸಂಗೀತಾ ನಾವಿ, ರಾಜು ಕಟ್ಟಿಮನಿ, ಸರಸ್ವತಿ ಪಿ, ಪೂರ್ಣಿಮಾ ಕೆ, ಲಕ್ಷ್ಮಿ ಪೀ, ವಿಜಯಲಕ್ಷ್ಮೀ ಪಾಟೀಲ್, ರಾಜಶ್ರೀ ಮತ್ತಿತರು ಹಾಜರಿದ್ದರು.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?