Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಯನಾಡು ತೊರೆಯಲು ಮುಂದಾದ ರಾಹುಲ್ ?

 

ಮಲಪ್ಪುರಂ: ಲೋಕಸಭಾ ಚುನಾವಣೆಯಲ್ಲಿ ವಯನಾಡು ಮತ್ತು ರಾಯ್‌ಬರೇಲಿಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಗೆದ್ದಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಕೇರಳದ ವಯನಾಡು ಕ್ಷೇತ್ರ ತೊರೆಯುವ ಸಾಧ್ಯತೆ ದಟ್ಟವಾಗಿದೆ.

ತಮ್ಮನ್ನು ಗೆಲ್ಲಿಸಿದ ವಯನಾಡು ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ರಾಹುಲ್‌ ಬುಧವಾರ ಇಲ್ಲಿ ರೋಡ್‌ಶೋ ನಡೆಸಿದರು. ಬಳಿಕ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ವಯನಾಡು ಜನತೆ ಮತ್ತೆ ನನ್ನ ಕೈ ಹಿಡಿದಿದ್ದು, ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿದ್ದೀರಿ. ಎಲ್ಲರಿಗೂ ಧನ್ಯವಾದಗಳು. ನಾನು ಈಗ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬುದು ತಿಳಿಯುತ್ತಿಲ್ಲ. ವಯನಾಡು, ರಾಯ್‌ಬರೇಲಿ ಯಾವುದಾದರೂ ಒಂದು ಕ್ಷೇತ್ರವನ್ನು ಉಳಿಸಿಕೊಳ್ಳಲು ನಾನು ನಿರ್ಧಾರ ತೆಗೆದುಕೊಂಡರೆ ಎರಡೂ ಕ್ಷೇತ್ರದ ಜನತೆ ನನ್ನ ನಿರ್ಧಾರವನ್ನು ಸಂತೋಷವಾಗಿ ಸ್ವೀಕರಿಸುತ್ತಾರೆ ಎಂದು ನಾನು ಭಾವುಸುತ್ತೇನೆ ಎಂದರು.

ಆದರೆ ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಕೇರಳ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಕೆ.ಸುಧಾಕರನ್‌, ದೇಶ ಮುನ್ನಡೆಸಬೇಕಾದ ರಾಹುಲ್‌ ಗಾಂಧಿ ವಯನಾಡಲ್ಲೇ ಇರಬೇಕೆಂದು ನಾವು ಬಯಸುವುದು ಸರಿಯಲ್ಲ. ಈ ವಿಷಯದಲ್ಲಿ ನಾವು ದುಃಖ ಪಡಬಾರದು ಎನ್ನುವ ಮೂಲಕ ರಾಹುಲ್‌ ವಯನಾಡು ತೊರೆದು ಉತ್ತರಪ್ರದೇಶ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಸುಳಿವು ನೀಡಿದ್ದಾರೆ.

ಗಾಂಧಿ ಕುಟುಂಬದ ಸಾಂಪ್ರದಾಯಿಕ ಕ್ಷೇತ್ರ, ತೊರೆದರೆ ಗಾಂಧಿ ಕುಟುಂಬ ನಂಟು ತಪ್ಪುತ್ತದೆ.
ಯುಪಿಯಲ್ಲಿ ಇಂಡಿ ಕೂಟ ಉತ್ತಮ ಸಾಧನೆ ಮಾಡಿದ್ದು, ಅದನ್ನು ಕಾಪಾಡಿಕೊಳ್ಳೂವ ಹೊಣೆ ಇದೆ.
ವಯನಾಡಿಗೆ ಹೋಲಿಸಿದರೆ ದೆಹಲಿಗೆ ಸಮೀಪದ ರಾಯ್‌ಬರೇಲಿಗೆ ಹೋಗಿಬರುವುದು ಸುಲಭವಾಗುತ್ತದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?