Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾಗಿ ರಾಮನಗೌಡ ಕನ್ನೊಳ್ಳಿ ನೇಮಕ

ಬೆಳಗಾವಿ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾಗಿ ರಾಮನಗೌಡ ಕನ್ನೊಳ್ಳಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಜಂಟಿ ನಿರ್ದೇಶಕರಾಗಿದ್ದ ಪ್ರವೀಣ ಶಿಂತ್ರಿ ಅವರನ್ನು ರಾಜ್ಯ ಸರ್ಕಾರ ಇದೀಗ ಎತ್ತಂಗಡಿ ಮಾಡಿದೆ. ಅವರು ಬೆಳಗಾವಿಯಲ್ಲಿ ಜಂಟಿ ನಿರ್ದೇಶನರಾಗಿ ಕೇವಲ ಐದು ತಿಂಗಳು ಮಾತ್ರ ಕಾರ್ಯನಿರ್ವಹಿಸಿದ್ದರು. ಅವರು ಪ್ರಾಮಾಣಿಕ, ದಕ್ಷ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳ ಪಾಲಿನ ದೇವರು ಎನಿಸಿಕೊಂಡಿದ್ದರು. ಆದರೆ, ಬೆಳಗಾವಿ ಜಿಲ್ಲೆಯ ರಾಜಕೀಯ ಒತ್ತಡದ ಕಾರಣದಿಂದ ಅವರನ್ನು ಅಷ್ಟರಲ್ಲೇ ವರ್ಗಾವಣೆ ಮಾಡಲಾಗಿದೆ.



ಆದರೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಈ ಹಿಂದೆ ಮೂರು ವರ್ಷಗಳ ಅವಧಿಯಲ್ಲಿ ಬೆಳಗಾವಿಯಲ್ಲಿ ಕೆಲಸ ಮಾಡಿದ್ದ ರಾಮನಗೌಡ ಕನ್ನೊಳಿ ಅವರು ಸಹಾ ಅತ್ಯುತ್ತಮ ಹಾಗೂ ದಕ್ಷ ಅಧಿಕಾರಿಯಾಗಿ ಜನ ಮೆಚ್ಚುಗೆ ಗಳಿಸಿದ್ದರು. ಜೊತೆಗೆ ಹಾಸ್ಟೆಲ್ ವಿದ್ಯಾರ್ಥಿಗಳ ಅತ್ಯಂತ ಪ್ರೀತಿ ಪಾತ್ರ ಅಧಿಕಾರಿ ಎನಿಸಿಕೊಂಡಿದ್ದರು. ಜೊತೆಗೆ ತಮ್ಮ ಇಲಾಖೆಯಲ್ಲಿ ಇರುವ ಎಲ್ಲಾ ಸಿಬ್ಬಂದಿಗಳನ್ನು ತಮ್ಮ ಮನೆಯವರು ಎಂಬಂತೆ ನೋಡಿಕೊಂಡು ಪ್ರತಿಯೊಬ್ಬರ ಪ್ರೀತ್ಯಾಧಾರಗಳಿಗೆ ಕಾರಣವಾಗಿದ್ದರು. ಈ ಹಿಂದೆ ಅವರ ಬಿಳ್ಕೊಡುಗೆ ಸಮಾರಂಭದಲ್ಲಿ ಎಲ್ಲರೂ ಕಣ್ಣೀರು ಹಾಕಿದ್ದೆ ಅವರ ಸೇವಾಗುಣಕ್ಕೆ ಸಾಕ್ಷಿ. ಇದೀಗ ಅವರು ಮತ್ತೆ ಬೆಳಗಾವಿಗೆ ಆಗಮಿಸಿದ್ದು ಜಿಲ್ಲೆಯ ಜನತೆಗೆ ಅವರ ಸೇವೆ ಲಭ್ಯವಾಗುತ್ತಿದೆ. ಆದರೆ, ಅವರು ಜಿಲ್ಲೆಯ ಪ್ರಭಾವಿ ರಾಜಕಾರಣಿಗಳ ಒತ್ತಡಕ್ಕೆ ಮಣಿಯದಿರಲಿ, ತಮ್ಮ ಪ್ರಾಮಾಣಿಕ ಹಾಗೂ ದಕ್ಷಸೇವೆಯನ್ನು ಮತ್ತೆ ಮುಂದುವರಿಸುವಂತಾಗಲಿ ಎನ್ನುವುದು ಜನತೆಯ ಆಗ್ರಹವಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು