Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಣಿ ಚನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕಿಗೆ ರೂ.8.94 ಕೋಟಿ ಲಾಭ : 15% ಲಾಭಾಂಶ ಘೋಷಣೆ


ಬೆಳಗಾವಿ: ರಾಣಿ ಚನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ, ಬೆಳಗಾವಿ ಯ 29ನೇ ವಾರ್ಷಿಕ ಸಾಮಾನ್ಯ ಸಭೆ (AGM) ಇಂದು ನಗರದ ನೆಹರು ನಗರದ ಕನ್ನಡಭವನದಲ್ಲಿ ಜರುಗಿತು.

ಬ್ಯಾಂಕ್ ಅಧ್ಯಕ್ಷೆ ಡಾ.ಪ್ರೀತಿ ಕೆ. ದೋಡ್ಡವಾಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಷೇರುದಾರರು, ನಿರ್ದೇಶಕರು, ವೃತ್ತಿಪರ ನಿರ್ದೇಶಕರು, ಸ್ಥಳೀಯ ಆಡಳಿತ ಮಂಡಳಿ ಸದಸ್ಯರು ಹಾಗೂ ಬ್ಯಾಂಕ್ ಸಿಬ್ಬಂದಿ ಭಾಗವಹಿಸಿದ್ದರು.

ಸಭೆಯ ಆರಂಭದಲ್ಲಿ ಡಾ. ಪ್ರೀತಿ ದೊಡ್ಡವಾಡ, ಆಶಾ ಪಿ. ಕೋರೆ ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಸಾಂಸ್ಕೃತಿಕ ಸ್ವಾಗತ ಗೀತೆ ಜರುಗಿತು. ಬ್ಯಾಂಕಿನ ಸ್ಥಾಪಕ ನಿರ್ದೇಶಕಿ ಶಾಂತಕ್ಕಾ ಕೆ. ಬಿಲ್ಲೂರು ಅವರ ಸ್ಮರಣೆಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಉಪಾಧ್ಯಕ್ಷೆ ರೂಪಾ ಜೆ. ಮುನವಳ್ಳಿ ಹಾಗೂ ಆಶಾ ಪಿ. ಕೋರೆ, ಸ್ವರ್ಣಲತಾ ಎನ್. ಬಾನಸೋಡೆ, ರಾಜೇಶ್ವರಿ ಎಂ. ಕವಟಗಿಮಠ, ಔಂಧತಿ ಎ. ಪಟ್ಟೇದ, ದೀಪಾ ಎಸ್. ಮುನವಳ್ಳಿ, ಪೂಜಾ ಕೆ. ಸಾಧುನವರ, ಕೀರ್ತಿ ಜೆ. ಮೆಟಗುಡ್ಡ, ಸೀಮಾ ಪಿ. ಬಾಗೇವಾಡಿ, ಗಿರಿಜಾ ಎಂ. ಕೌಜಲಗಿ, ಡಾ. ಪುಷ್ಪಾ ವಿ. ಮಮದಾಪುರ, ಜ್ಯೋತಿ ಜಿ. ಮಾತದ ಮತ್ತು ಕು. ಬೀನಾ ಜಿ. ಆಚಾರ್ ನಿರ್ದೇಶಕರು ಉಪಸ್ಥಿತರಿದ್ದರು.

ವಾರ್ಷಿಕ ಪ್ರಗತಿ ವರದಿ ಮಂಡಿಸಿದ ಅಧ್ಯಕ್ಷೆ ಡಾ. ಪ್ರೀತಿ ದೊಡ್ಡವಾಡ ಅವರು 2024–25ನೇ ಸಾಲಿನಲ್ಲಿ ಬ್ಯಾಂಕ್ ಠೇವಣಿ ₹402.78 ಕೋಟಿ, ಸಾಲ ವಿತರಣೆ ₹252.79 ಕೋಟಿ ಮತ್ತು ಶುದ್ಧ ಲಾಭ ₹8.94 ಕೋಟಿ ಗಳಿಸಿದೆ ಎಂದು ಘೋಷಿಸಿದರು. ಇದಕ್ಕೆ ಪೂರಕವಾಗಿ 15% ಲಾಭಾಂಶವನ್ನು ಷೇರುದಾರರಿಗೆ ಘೋಷಿಸಲಾಯಿತು. ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ 15% ಲಾಭಾಂಶ ನೀಡುತ್ತಾ ಬ್ಯಾಂಕ್ ವಹಿವಾಟು ವರ್ಷದಿಂದ ವರ್ಷಕ್ಕೆ ವೃದ್ಧಿಯಾಗುತ್ತಿದೆ ಎಂದು ಅವರು ತಿಳಿಸಿದರು.

ಸಭೆಯ ಅಜೆಂಡಾ ವಿಷಯಗಳನ್ನು ನಿರ್ದೇಶಕರು ವಾಚಿಸಿದರು ಹಾಗೂ ಅವನ್ನು ಏಕಮತದಿಂದ ಅಂಗೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶ್ರೇಯಾಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಹಾಗೂ ಅತ್ಯುತ್ತಮ ಸಾಧನೆ ಮಾಡಿದ ಶಾಖೆಗಳಿಗೆ ಸನ್ಮಾನ ಮಾಡಲಾಯಿತು.

ಸಭೆಯ ಅಂತ್ಯದಲ್ಲಿ ಉಪಾಧ್ಯಕ್ಷೆ ರೂಪಾ ಜೆ. ಮುನವಳ್ಳಿ ಧನ್ಯವಾದ ಸಲ್ಲಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?