Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಂದಮ್ಮಳ ಚಿಕಿತ್ಸೆಗೆ ವಿಶಿಷ್ಟ ವೇಷ ಹಾಕಲಿರುವ ರವಿ ಕಟಪಾಡಿ

 

ಉಡುಪಿ :
ಕುಂದಾಪುರದ ಎರಡು ವರ್ಷದ ಕಂದಮ್ಮಳ ಚಿಕಿತ್ಸೆಗೆ ಈ ಬಾರಿ ಕೃಷ್ಣ ಜನ್ಮಾಷ್ಟಮಿ ಎಂದು ವೇಷ ಹಾಕುವುದಾಗಿ ಖ್ಯಾತ ಸಾಮಾಜಿಕ ಕಾರ್ಯಕರ್ತ ರವಿ ಕಟಪಾಡಿ ತಿಳಿಸಿದ್ದಾರೆ.

ಕಳೆದ ಎಂಟು ವರ್ಷಗಳಲ್ಲಿ ಕೃಷ್ಣ ಜನ್ಮಾಷ್ಟಮಿಯಂದು ವಿಶಿಷ್ಟ ವೇಷ ಹಾಕಿ 1.13 ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ 70 ಕ್ಕೂ ಹೆಚ್ಚು ಬಡ ಕುಟುಂಬಗಳ ಅನಾರೋಗ್ಯ ಪೀಡಿತ ಕಂದಮ್ಮಗಳ ಚಿಕಿತ್ಸೆಗೆ ಅವರು ದಾನ ಮಾಡಿದ್ದಾರೆ. ಆದರೆ, ಪಾರದರ್ಶಕವಾಗಿ ಹಣ ಸಂಗ್ರಹಿಸಿ ಅದನ್ನು ಸಂಬಂಧಪಟ್ಟ ಕುಟುಂಬದವರಿಗೆ ವಿತರಿಸುತ್ತಿದ್ದರು. ಆ ಬಗ್ಗೆ ಬಂದಿರುವ ಅಪವಾದದಿಂದ ಬೇಸರಿಸಿಕೊಂಡಿರುವ ರವಿ ಅವರು, ಈ ಬಾರಿ ವೇಷ ಹಾಕುತ್ತೇನೆ. ಆದರೆ, ಡಬ್ಬ ಹಿಡಿದು ಬೇಡುವುದಿಲ್ಲ. ಯಾರಾದರೂ ಕೊಟ್ಟರೆ ತೆಗೆದುಕೊಳ್ಳುತ್ತೇನೆ. ಅಷ್ಟು ಹಣವನ್ನು ಅನಾರೋಗ್ಯದಿಂದ ಬಳಲುತ್ತಿರುವ ಕುಂದಾಪುರದ ಎರಡು ವರ್ಷದ ಕಂದಮ್ಮಳ ಚಿಕಿತ್ಸೆಗೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಮಕ್ಕಳ ಚಿಕಿತ್ಸೆಗೆ ಹಣ ಸಂಗ್ರಹಿಸುವ ಕಾರ್ಯಕ್ಕೆ ಅಡ್ಡಿಯಾಗಬಾರದು ಎಂದು ಅವಿವಾಹಿತರಾಗಿಯೇ ಉಳಿದಿರುವ ರವಿ ಅವರು ಸರಕಾರ ನೀಡಿರುವ 2:45 ಸೆಂಟ್ಸ್ ಭೂಮಿಯಲ್ಲಿ ಮನೆ ಕಟ್ಟುತ್ತಿದ್ದಾರೆ. ಎರಡು ದಶಕಗಳಿಂದ ಕಟ್ಟಡ ಕಾರ್ಮಿಕರಾಗಿರುವ ಅವರು ಮನೆ ಕಟ್ಟುತ್ತಿದ್ದಾರೆ.

ಆದರೆ ಇದೀಗ ಕೆಲವರು ಮಕ್ಕಳ ಹೆಸರಿನಲ್ಲಿ ಸಂಪಾದಿಸಿದ ಹಣದಲ್ಲಿ ಮನೆ ಕಟ್ಟುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಮಕ್ಕಳಿಗಾಗಿ ಸಂಗ್ರಹಿಸಿದ ಹಣದಿಂದ ಮನೆ ಕಟ್ಟುವುದಕ್ಕೆ ಎಂಟು ವರ್ಷ ಕಾಯಬೇಕಿತ್ತೇ ? ಯಾವಾಗಲೇ ಕಟ್ಟುತ್ತಿದ್ದೆ ಎಂದು ಅಪವಾದ ಹೊರಿಸಿದವರ ಮೇಲೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಮುಂದೆ ವೇಷ ಹಾಕುವುದಿಲ್ಲ ಎಂದು ಹೇಳಿದ್ದೆ. ಆದರೆ ಇತ್ತೀಚಿಗೆ ತಮ್ಮ ಎರಡು ವರ್ಷದ ಮಗುವಿನ ಚಿಕಿತ್ಸೆಗೆ 15 ಲಕ್ಷ ರೂಪಾಯಿ ಬೇಕು ಎಂದು ವೈದ್ಯರು ಹೇಳಿರುವ ಕಾರಣ ಆ ಕುಟುಂಬದ ನೆರವಿಗೆ ಧಾವಿಸುತ್ತಿದ್ದೇನೆ ಎಂದು ಅವರು ತಿಳಿಸಿದರು.

ಪ್ರತಿ ಸಲ ಕೃಷ್ಣ ಜನ್ಮಾಷ್ಟಮಿಯಂದು ಹಾಲಿವುಡ್ ಸಿನಿಮಾಗಳ ವಿಶೇಷ ಪಾತ್ರ ವಹಿಸುತ್ತಿದ್ದ ರವಿ ಅವರು, ಈ ಬಾರಿ ಸೀ ಪೋಕ್ ಸಿನಿಮಾದ ಪಾತ್ರ ಹಾಕಲಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?