Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹದಾಯಿ ಜಲವಿವಾದ: ನ್ಯಾಯಮಂಡಳಿ ಅವಧಿ ಪುನಃ ವಿಸ್ತರಣೆ

 

ನವದೆಹಲಿ: ಮಹದಾಯಿ ಜಲವಿವಾದಕ್ಕೆಸಂಬಂಧಿಸಿ ಹೆಚ್ಚಿನ ವರದಿ ಸಲ್ಲಿಸುವ ಸಂಬಂಧ ನ್ಯಾಯಮಂಡಳಿಯ ಅವಧಿಯನ್ನು ಪುನಃ ಆರು ತಿಂಗಳು ವಿಸ್ತರಿಸಲಾಗಿದೆ.

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ನಡುವಿನ ನೀರು ಹಂಚಿಕೆ ವಿವಾದಗಳನ್ನು ಪರಿಹರಿಸಲು ಈ ನ್ಯಾಯಮಂಡಳಿ ಸ್ಥಾಪಿಸಲಾಗಿದೆ. ನ್ಯಾಯಮಂಡಳಿಗೆ ಕರ್ನಾಟಕ ಹಾಗೂ ಗೋವಾ ಸರ್ಕಾರಗಳು ಸ್ಪಷ್ಟಿಕರಣ ಅರ್ಜಿ ಸಲ್ಲಿಸಿವೆ. ಹೀಗಾಗಿ, ಹೆಚ್ಚಿನ ವರದಿ ನೀಡಲು ಇನ್ನಷ್ಟು ಕಾಲಾವಕಾಶ ನೀಡಬೇಕು ಎಂದು ಜಲಶಕ್ತಿ ಸಚಿವಾಲಯವನ್ನು ನ್ಯಾಯಮಂಡಳಿ ಕೋರಿತ್ತು. ವರದಿ ನೀಡುವ ಅವಧಿಯನ್ನು ವಿಸ್ತರಿಸಿ ಸಚಿವಾಲಯ ಮಂಗಳವಾರ ಅಧಿಸೂಚನೆ ಹೊರಡಿಸಿದೆ.

ಮಹದಾಯಿ ವಿವಾದ ಬಗೆಹರಿಸಲು ಅಂತರ ರಾಜ್ಯ ನದಿ ನೀರು ವಿವಾದ ಕಾಯ್ದೆ 1956ರ ಸೆಕ್ಷನ್ 4ರ ಅನ್ವಯ ಮಹದಾಯಿ ನ್ಯಾಯಮಂಡಳಿ ಸ್ಥಾಪಿಸಲಾಗಿತ್ತು. ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನ್ಯಾಯಮಂಡಳಿಯು 2018ರ ಆಗಸ್ಟ್‌ನಲ್ಲಿ ವರದಿ ಸಲ್ಲಿಸಿದೆ. ಈ ವರದಿಯ ಬಗ್ಗೆ 2020ರ ಫೆ.20ರಂದು ಅಧಿಸೂಚನೆ ಹೊರಡಿಸಲಾಗಿದೆ. ಹೆಚ್ಚುವರಿ ವರದಿ ನೀಡಲು ನ್ಯಾಯಮಂಡಳಿಯ ಅವಧಿ ವಿಸ್ತರಿಸುತ್ತಿರುವುದು ಇದು ಐದನೇ ಬಾರಿ. ವರದಿ ನೀಡಲು ಇನ್ನೂ ಒಂದು ವರ್ಷ ಕಾಲಾವಕಾಶ ನೀಡಬೇಕು ಎಂದು ನ್ಯಾಯಮಂಡಳಿಯು ಜಲಶಕ್ತಿ ಸಚಿವಾಲಯಕ್ಕೆ ಪ್ರಸ್ತಾವ ಸಲ್ಲಿಸಿತ್ತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು