Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಿಎಸ್‌ಐ ಅನ್ನಪೂರ್ಣ ಅತ್ಯುನ್ನತ ಪದಕಕ್ಕೆ ಶಿಫಾರಸ್ಸು _ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್‌ಕೌಂಟರ್ ಮಾಡಿದ ಪಿಎಸ್‌ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸ್ಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸೋಮವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಪಿಎಸ್‌ಐ ಅನ್ನಪೂರ್ಣ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತೇನೆ. ನಾನು ಓರ್ವ ಸಚಿವೆಯಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ನಾನು ಹಿಂದಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇನೆ. ಇಂಥ ಪ್ರಕರಣದ ಆರೋಪಿಗಳಿಗೆ ಗಲ್ಲುಶಿಕ್ಷೆ ಆಗಬೇಕು, ದೌರ್ಜನ್ಯಕ್ಕೆ ಒಳಗಾದವರಿಗೆ ತ್ವರಿತವಾಗಿ ನ್ಯಾಯಸಿಗಬೇಕು. ಅನ್ನಪೂರ್ಣ ಅವರ ಕಾರ್ಯ ಇತರ ಅಧಿಕಾರಿಗಳಿಗೆ ದಾರಿ ದೀಪವಾಗಬೇಕು ಎಂದು ಸಚಿವರು ಹೇಳಿದರು.

ಇಂತಹ ಪಿಡುಗು ನಮ್ಮ ಸಮಾಜದಿಂದ ನಿರ್ಮೂಲನೆ ಆಗಬೇಕು. ಸರ್ಕಾರಿ ನೌಕರರಿಗೆ ನಮ್ಮ ಇಲಾಖೆಯಿಂದ ಕೊಡ ಮಾಡುವ ರಾಣಿ ಚನ್ನಮ್ಮ ಪ್ರಶಸ್ತಿ ನೀಡವುದಿಲ್ಲ. ಒಂದು ವೇಳೆ ಸರ್ಕಾರಿ ನೌಕರರಿಗೆ ಕೊಡಬೇಕು ಅಂತ ಬಂದರೆ ಅನ್ನಪೂರ್ಣ ಅವರ ಹೆಸರು ಮೊದಲಿರುತ್ತದೆ ಎಂದು ಉತ್ತರಿಸಿದರು.

ಇಂಥ ಘಟನೆ ನಡೆದಾಗ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಕರ್ನಾಟಕವನ್ನು ಬೇರೆ ರಾಜ್ಯಗಳಿಗೆ ಹೋಲಿಸಲು ನಾನು ಇಷ್ಟಪಡುವುದಿಲ್ಲ. ನಮ್ಮಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ನಮ್ಮನ್ನು ಟೀಕಿಸುವ ಬದಲಿಗೆ ಬಿಜೆಪಿಗರು ಮಣಿಪುರಕ್ಕೆ ಒಮ್ಮೆ ಭೇಟಿ ನೀಡಲಿ, ಪ್ರಧಾನಿ ನರೇಂದ್ರ ಮೋದಿ ಒಮ್ಮೆಯೂ ಅಲ್ಲಿಗೆ ಭೇಟಿ ಕೊಟ್ಟಿಲ್ಲ ಎಂದು ಸಚಿವರು ತಿರುಗೇಟು ನೀಡಿದರು.

* *ನಿಪ್ಪಾಣಿಯಲ್ಲಿ ಸರ್ಕಾರದಿಂದ ಕಾರ್ಯಕ್ರಮ*
ನಿಪ್ಪಾಣಿಗೆ ಅಂಬೇಡ್ಕರ್ ಭೇಟಿ ನೀಡಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿಯವರು ಭೀಮ ಹೆಜ್ಜೆ ಹೆಸರಿನಲ್ಲಿ ಸಮಾವೇಶ ಮಾಡುತ್ತಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ಶ್ರದ್ಧಾ, ಭಕ್ತಿಯಿಂದ ನಂಬಿದೆ. ನಿಪ್ಪಾಣಿಯಲ್ಲಿ ಕಾರ್ಯಕ್ರಮ ಆಯೋಜನೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ಆಗಿದ್ದು, ಸರ್ಕಾರದಿಂದ ಕಾರ್ಯಕ್ರಮ ಮಾಡಲಾಗುವುದು ಎಂದರು.

* *ಜಾತಿ ಗಣತಿಗೆ ವಿರೋಧವಿಲ್ಲ*

ಜಾತಿ ಗಣತಿ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಾತಿ ಗಣತಿಗೆ ನಮ್ಮ ವಿರೋಧ ಯಾವತ್ತೂ ಇಲ್ಲ. ವೀರಶೈವ- ಲಿಂಗಾಯತರನ್ನು ಪ್ರತ್ಯೇಕ ಮಾಡಿ ಗಣತಿ ಮಾಡಲಾಗಿದೆ. ಅದನ್ನು ಸರಿಪಡಿಸಿ ಇನ್ನೊಮ್ಮೆ ಗಣತಿಯನ್ನು ಇನ್ನೊಮ್ಮೆ ಮಾಡಬೇಕು. ಎಲ್ಲಾ ಜಾತಿಯಲ್ಲಿ ಜನರು ಹೆಚ್ಚಾಗಿದ್ದಾರೆ. ಅದರಂತೆ ನಮ್ಮ ವೀರಶೈವ, ಲಿಂಗಾಯತರಲ್ಲಿಯೂ ಜನ ಹೆಚ್ಚಾಗಿದ್ದಾರೆ. ಹೀಗಾಗಿ ವೀರಶೈವ- ಲಿಂಗಾಯತರು ಒಡೆದು ಹೋಗಿದ್ದು ಅಂಕಿ ಅಂಶ ಕಡಿಮೆ ಕಾಣಿಸುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ