Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಲ್ಲರಿಗೂ ಸುತ್ತಿಕೊಂಡ ಸಂಕಷ್ಟ : ರೇಣುಕಾ ಹತ್ಯೆ ಪ್ರಕರಣ : ಇನ್ನೊಬ್ಬ ನಾಯಕನಿಗೂ ನೋಟಿಸ್‌?

ಬೆಂಗಳೂರು : ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಹಾಸ್ಯ ನಟ ಚಿಕ್ಕಣ್ಣ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಅವರ ಜೊತೆ ಇದೀಗ ಮತ್ತೊಬ್ಬ ನಟನಿಗೂ ಸಂಕಷ್ಟ ಎದುರಾಗಿದೆ.

ದರ್ಶನ್ ಆಪ್ತನಾಗಿರುವ ಗರಡಿ ಸಿನಿಮಾದ ನಾಯಕ ನಟ ಯಶಸ್ ಸೂರ್ಯ ರೆಸ್ಟೋರೆಂಟ್‌ನಲ್ಲಿ ನಡೆದ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂಬ ಮಾಹಿತಿ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದ ದೃಶ್ಯಾವಳಿಗೆ ಹುಡುಕಾಟ ನಡೆಸುತ್ತಿದ್ದೇವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಸೂಕ್ತ ಸಾಕ್ಷ್ಯ ಲಭಿಸಿದರೆ ನೋಟಿಸ್ ಕೊಟ್ಟು ವಿಚಾರಣೆಗೆ ಹಾಜರಾಗುವಂತೆ ಸೂಚಿಸುತ್ತೇವೆ ಎಂದು ಹೇಳಿದ್ದಾರೆ.

ಪಾರ್ಟಿ ಸ್ಥಳದಲ್ಲಿ ನಟ ದರ್ಶನ್, ಅವರ ಆಪ್ತ ಪವಿತ್ರಾಗೌಡ, ಆರೋಪಿಗಳಾದ ವಿನಯ್, ದೀಪಕ್ ಸಹ ಇದ್ದರು. ದರ್ಶನ್‌ಗೆ ಕರೆ ಬರುತ್ತಿದ್ದಂತೆ ಸಿಟ್ಟಿನಿಂದ ಕುರ್ಚಿಯನ್ನು ಒದ್ದು ತೆರಳಿದ್ದರು. ಅಲ್ಲಿಂದ ಕಾರಿನಲ್ಲಿ ಪಟ್ಟಣಗೆರೆ ಶೆಡ್‌ಗೆ ಹೋಗಿದ್ದರು. ಶೆಡ್ ಆವರಣದ ಒಳಕ್ಕೆ ಕಾರು ಹಾಗೂ ಜೀಪು ತೆರಳುತ್ತಿದ್ದ ದೃಶ್ಯ ಸಹ ಸಿಕ್ಕಿದೆ ಎಂದು ಮೂಲಗಳು ಹೇಳಿವೆ.

ಪವಿತ್ರಾಗೌಡರ ಸಹಾಯಕ ಪವನ್ ಎಂಬಾತ ರೇಣುಕಸ್ವಾಮಿಯನ್ನು ಅಪಹರಿಸಿ ಶೆಡ್‌ಗೆ ಕರೆ ತಂದಿದ್ದ ಮಾಹಿತಿಯನ್ನು ರೆಸ್ಟೋರೆಂಟ್‌ನಲ್ಲಿದ್ದಾಗ ದರ್ಶನ್‌ಗೆ ಕರೆ ಮಾಡಿ ತಿಳಿಸಿದ್ದರು ಎಂದು ಪೊಲೀಸರು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ