Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾನು ಯಾರ ವಿರುದ್ದವೂ ದೂರು ನೀಡಿಲ್ಲ ಎಂದ ಸಾಹುಕಾರ್

ಬೆಂಗಳೂರು: ನಾನು ಫೋನ್ ಮಾಡಿದರೂ ಸಾಕು ಸಚಿವರು ಸ್ಪಂದಿಸುತ್ತಾರೆ. ನನಗೇನು ಅವರ ಬಗ್ಗೆ ದೂರಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆಗೆ ಒನ್ ಟು ಒನ್ ಮಾತುಕತೆ ಬಳಿಕ ಮಾತನಾಡಿದ ಅವರು, ಇವತ್ತು ನಮ್ಮ ಪಕ್ಷದ ವರಿಷ್ಠರು ಸಭೆಗೆ ಕರೆದಿದ್ರು. ಜಿಲ್ಲೆ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಆಯ್ತು ಎಂದರು.

ಮುಂದಿನ ದಿನಗಳಲ್ಲಿ ಹೇಗೆ ಸಂಘಟನೆ ಮಾಡಬೇಕು ಅದರ ಬಗ್ಗೆ ಸುರ್ಜೇವಾಲಾ ಅವರು ಹೇಳಿದ್ದಾರೆ. ಅದರ ಪ್ರಕಾರ ಪಕ್ಷ ಸಂಘಟನೆಯಾಗಬೇಕು. ಸ್ಥಳೀಯ ಚುನಾವಣೆ ಎಲ್ಲವೂ ಗೆಲ್ಲಬೇಕು. ಅಷ್ಟೇ ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆ ಗೆಲ್ಲಬೇಕು. ಅದಕ್ಕೆ ಏನೆಲ್ಲಾ ಕಾರ್ಯತಂತ್ರ ಮಾಡಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು ಎಂದು ತಿಳಿಸಿದರು.

ಕ್ಷೇತ್ರದ ಅನುದಾನ ವಿಚಾರವಾಗಿ ಇದೇ ಸಂದರ್ಭದಲ್ಲಿ ಮಾತನಾಡಿ, ಅನುದಾನ ಸಮಸ್ಯೆ ಬಗ್ಗೆ ಅಭಿಪ್ರಾಯ ಕೇಳಿದ್ರು. ಸಣ್ಣಪುಟ್ಟ ಲೋಪದೋಷದ ಬಗ್ಗೆ ಸಲಹೆ ನೀಡಿದ್ದೇವೆ. ಇದ್ದರಿಂದ ಪಕ್ಷಕ್ಕೂ ಒಳ್ಳೆದು ಆಗುತ್ತದೆ. ಯಾರು ಏನು ಹೇಳಿದ್ದಾರೆ ಅಂತ ಗೊತ್ತಿಲ್ಲ ಎಂದರು.

ಸಚಿವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನದ ವಿಚಾರವಾಗಿ ಮಾತನಾಡಿ, ನಾನು ಯಾರೇ ಸಚಿವರಿಗೆ ಪೋನ್ ಮಾಡಿದ್ರೆ . ನನ್ನ ಪೋನಿಗೆ ಸಚಿವರು ರೆಸ್ಪಾನ್ಸ್ ಮಾಡ್ತಾರೆ ಎಂದರು. ಇನ್ನು ಸಭೆಯಲ್ಲಿ ಸಚಿವ ಸ್ಥಾನದ ಬಗ್ಗೆ ಚರ್ಚೆ ಆಗಿದ್ಯ ಎಂಬ ವಿಚಾರವಾಗಿ, ಅಂತಹ ಸಂದರ್ಭ ಇನ್ನು ಬಂದಿಲ್ಲ. ಸಿಎಂ ಡಿಸಿಎಂ ಜೊತೆಗೆ ಒಳ್ಳೆ ಭಾಂದ್ಯವ್ಯವಿದೆ. ಅದರ ಬಗ್ಗೆ ಏನು ಚರ್ಚೆ ನಡೆದಿಲ್ಲ. ಒಂದು ವೇಳೆ ಅವರು ಕೇಳಿದ್ರೆ ನಾನು ಹೇಳ್ತೇನೆ ಎಂದರು.

ಸಿಎಂ ನೇತೃತ್ವದಲ್ಲಿ ಒಬಿಸಿ ಸಭೆ ವಿಚಾರವಾಗಿ ಇದೇ ವೇಳೆ ಪ್ರತಿಕ್ರಿಯೆ ನೀಡಿ, ಯಾವುದೇ ಕೆಲಸ ಕಾರ್ಯ ಮಾಡಬೇಕಾದರೆ ಕೆಲವೊಂದು ಸಂಘಟನೆಗೆ ಹೋಗಬೇಕಾಗುತ್ತೆ. ಅಂದ ಮಾತ್ರಕ್ಕೆ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರೆ ಅನ್ನೋದು ತಪ್ಪು ಗ್ರಹಿಕೆ. ಹಿಂದೆ ನಂಗೆ ಬಿಜೆಪಿಯಲ್ಲಿ ರಾಷ್ಟ್ರದ ಜವಾಬ್ದಾರಿ ನೀಡಲಾಗಿತ್ತು. ಅಂದ್ರೆ ರಾಜ್ಯ ರಾಜಕಾರಣ ಬಿಡ್ತಾರೆ ಅಂತಾಲ್ಲ. ರಾಷ್ಟ್ರೀಯ ಮಟ್ಟದಲ್ಲಿ ಕೆಲವು ಸಂಘಟನೆಗಳಿವೆ. ಸಿದ್ದರಾಮಯ್ಯ ಒಬ್ಬ ಅನುಭವಿ ಇರೋ ರಾಜಕಾರಣಿ . ಅವರ ಅನುಭವ ಕಾಂಗ್ರೆಸ್ ಬಳಸಿಕೊಳ್ಳುತ್ತೆ ಎಂದರು.

ಸಭೆಯಲ್ಲಿ ಸಚಿವ ಸಂಪುಟ ಬದಲಾವಣೆ ಆಗಲಿ. ಬೇರೆ ವಿಚಾರಗಳ ಬಗ್ಗೆ ಚರ್ಚೆ ಆಗಲಿ ಆಗಿಲ್ಲ. ನಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ಆಗಿದೆ. ನಾನು ಯಾರ ವಿರುದ್ದವೂ ದೂರು ನೀಡಿಲ್ಲ. ನನಗೆ ಎಲ್ಲ ಉಸ್ತುವಾರಿ ಸಚಿವರ ಸಹಕಾರವಿದೆ ಎಂದು ಹೇಳಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಪಹಾರಕೂಟದಲ್ಲೇ ರಾಜೀನಾಮೆ ಸುಳಿವು ನೀಡಿದ ಸಿಎಂ : ಸಹೋದ್ಯೋಗಿಗಳ ಸಮ್ಮುಖದಲ್ಲೇ ರಾಜೀನಾಮೆ  ಘೋಷಿಸಿದ ಸಿದ್ದರಾಮಯ್ಯ..!ಬೆಳಗಾವಿಯಲ್ಲಿ ಯುವಕನನ್ನು ಕೊಚ್ಚಿ ಕೊಲೆ ...ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆ