Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಾಳು ಗುಡಿಸಲಾದ ಸಂತಿಬಸ್ತವಾಡ ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡ

ಬೆಳಗಾವಿ : ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಪ್ರಾಥಮಿಕ ಆರೋಗ್ಯ ಉಪ ಕೇಂದ್ರದ ಕಟ್ಟಡ ಪೂರ್ತಿ ಬೀಳುವ ಸ್ಥಿತಿಯಲ್ಲಿ ಇದೆ. ಕಿಟಕಿ ಬಾಗಿಲುಗಳು ಗೆದ್ದಲು ಹುಳಗಳು ಹತ್ತಿ ಮುರಿದು ಹೋಗಿರುತ್ತವೆ. ಮೇಲ್ಚಾವಣಿ ಸೋರುತ್ತಿದೆ. ಶೌಚಾಲಯವು ಹಾಳಾಗಿ ಹೋಗಿದೆ. ಮಳೆಗಾಲದಲ್ಲಿ ಈ ಕಟ್ಟಡವು ಕುಸಿದು ಬಿಳಬಹುದು ಎಂದು ಈ ಕಟ್ಟಡವನ್ನು ಖಾಲಿ ಮಾಡಿ ಗ್ರಾಮದ ಹೊರಗಡೆ ಲಭ್ಯವಿರುವ ಒಂದು ಬಾಡಿಗೆ ಮನೆಯಲ್ಲಿ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಕಚೇರಿಯನ್ನು ಪ್ರಾರಂಭಿಸಿದ್ದಾರೆ. ಆರೋಗ್ಯ ಕಾರ್ಯಕರ್ತೆಯು ಬೆಳಿಗ್ಗೆ ಬಂದು ಸಾಯಂಕಾಲ ಹೋಗುತ್ತಿದ್ದಾರೆ. ಮೊದಲಿನ ಹಾಗೆ ಗ್ರಾಮದಲ್ಲಿಯೆ ವಾಸ್ತವ್ಯ ಇರುವುದಿಲ್ಲ.

ಗ್ರಾಮದಲ್ಲಿ ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿವೆ. ಆಶಾ ಕಾರ್ಯಕರ್ತೆಯರು, ಪುರುಷ ಆರೋಗ್ಯ ಕಾರ್ಯಕರ್ತರು ಸಭೆಗಳನ್ನು ಮಾಡಲು ಸ್ಥಳ ಇಲ್ಲದಾಗಿದೆ. ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಆರೋಗ್ಯ ತಪಾಸಣೆ ಮಾಡಿಸಲು ಬಹಳ ತೊಂದರೆ ಆಗುತ್ತಿದೆ. ಪೋಷಣ ಅಭಿಯಾನ ಕಾರ್ಯಕ್ರಮ ಮಾಡಲು ಆಗುತ್ತಿಲ್ಲ.



ಗರ್ಭಿಣಿಯರ ಹೆರಿಗೆಯನ್ನು ಈ ಕೇಂದ್ರದಲ್ಲಿಯೇ ಮಾಡುತ್ತಿದ್ದರು. ಆದರೆ, ಕಳೆದ ಒಂದು ವರ್ಷದಿಂದ ಇಲ್ಲಿ ಹೆರಿಗೆಗಳು ಆಗುತ್ತಿಲ್ಲ. ಕಾರಣ ಆರೋಗ್ಯ ಕಾರ್ಯಕರ್ತೆಯರು ಹೆರಿಗೆ ಮಾಡಿಸಲು ವ್ಯವಸ್ಥೆ ಇರುವುದಿಲ್ಲ. ರಾತ್ರಿ ಸಮಯದಲ್ಲಿ ಆರೋಗ್ಯ ಕಾರ್ಯ ಕರ್ತೆಯು ಇಲ್ಲಿ ಇರುವುದಿಲ್ಲ. ಮಕ್ಕಳಿಗೆ ಲಸಿಕೆಯನ್ನು ಹಾಕಿಸುವುದು ಮತ್ತು ತಪಾಸಣೆ ಮಾಡಲು ಆಗುತ್ತಿಲ್ಲ. ಈ ಕಟ್ಟಡದ ಕೊರತೆಯಿಂದ ಜನರಿಗೆ ಆರೋಗ್ಯ ಸೇವೆಯು ಸರಿಯಾಗಿ ಸಿಗುತ್ತಿಲ್ಲ.



ಸಂತಿಬಸ್ತವಾಡ ಗ್ರಾಮ ದತ್ತು ಪಡೆದಂತಹ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದವರು ಈ ಕಟ್ಟಡ ರಿಪೇರಿ ಮಾಡಿಕೊಡುವುದಾಗಿ ಹೇಳಿದ್ದರು‌. ಅದರ ಎಸ್ಟಿಮೇಟನ್ನು ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಒಂದು ವರ್ಷ ಕಳೆದರೂ ಇದರ ರಿಪೇರಿ ಮಾಡಿಸಿರುವುದಿಲ್ಲ. ಈ ಕಡೆಗೆ ಮುಖವನ್ನು ತೋರಿಸಿರುವುದಿಲ್ಲ. ಈ ಭಾಗದ ಶಾಸಕರು ಮತ್ತು ಸಚಿವರು ಲಕ್ಷ್ಮೀ ಹೆಬ್ಹಾಳ್ಕರರವರಿಗೆ ಮತ್ತು ಸಂಬಂಧಪಟ್ಟ ಸರಕಾರದ ಇಲಾಖೆಗಳಿಗೆ, ಸಚಿವರುಗಳಿಗೆ, ವಿಧಾನ ಪರಿಷತ್ತಿನ ಸದಸ್ಯರುಗಳಿಗೆ ಗ್ರಾಮ ಪಂಚಾಯತ ವತಿಯಿಂದ ಅರ್ಜಿಯ ಮೂಲಕ ವಿನಂತಿಸಿಕೊಂಡರು ಸಹಿತ ಇದುವರೆಗೆ ಈ ಕಟ್ಟಡವು ರಿಪೇರಿ ಆಗಿಲ್ಲ. ಹೊಸ ಕಟ್ಟಡದ ಮಂಜೂರು ಕೂಡ ಆಗಿಲ್ಲ.



ಮಹಿಳಾ ಮತ್ತು ಮಕ್ಕಳ ಸಚಿವರ ಕ್ಷೇತ್ರದಲ್ಲಿರುವ ಈ ಗ್ರಾಮದ ಮಹಿಳೆಯರು ಮತ್ತು ಮಕ್ಕಳ ಮರಣವು ಕೂಡ ಆಗಿರುತ್ತದೆ. ಗ್ರಾಮ ಪಂಚಾಯತ ವಾಟರ್ ಮ್ಯಾನ್ ನ ಪತ್ನಿ ಮತ್ತು ಮಗು ಇಬ್ಬರೂ ಹೆರಿಗೆ ಸಮಯದಲ್ಲಿ ಮರಣ ಹೊಂದಿದ್ದಾರೆ. ಈ ಕಟ್ಟಡ ಇದ್ದಿದ್ದರೆ ಈ ಎರಡು ಜೀವಗಳು ಉಳಿಯುತ್ತಿದ್ದವು. ಮಹಿಳಾ ಮತ್ತು ಮಕ್ಕಳ ಸಚಿವರು , ಲೋಕ ಸಭಾ ಸದಸ್ಯರು ಮತ್ತು ಸಂಬಂಧಪಟ್ಟ ಇಲಾಖೆಯವರು ಸಂತಿಬಸ್ತವಾಡ ಗ್ರಾಮದ ಆರೋಗ್ಯ ಕೇಂದ್ರದ ಹೊಸ ಕಟ್ಟಡ ಕಟ್ಟಿಸಿಕೊಡಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು