Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ

ಬೆಂಗಳೂರು:ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು.

2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಕೊಳ್ಳಬೇಕೆಂದು ಅವರು ತಿಳಿಸಿದರು.

ನಮ್ಮ ಜನಗಣತಿ - ನಮ್ಮ ಅಭಿವೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರ ಜನಗಣತಿ 2027 ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸರ್ಕಾರ ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದೆ.ಈ ಪ್ರಕ್ರಿಯೆ ಸರಳ ಮತ್ತು ಸುರಕ್ಷಿತವಾಗಿದೆ ಎಂದರು.

ಮೊಬೈಲ್ ಸಂಖ್ಯೆ ಮತ್ತು OTP ಮೂಲಕ ಸುಲಭವಾಗಿ 5 ರಿಂದ 10 ನಿಮಿಷಗಳಲ್ಲಿ ಸ್ವಯಂ ಗಣತಿ ಪೂರ್ಣಗೊಳಿಸಬಹುದಾಗಿದೆ ಎಂದು ತಮ್ಮ ಅನುಭವ ಹಂಚಿಕೊಳ್ಳುತ್ತಾ, ಪ್ರಕ್ರಿಯೆ ಪೂರ್ಣಗೊಂಡ ನಂತರ ನಿಮ್ಮ ಅರ್ಜಿಯ ಸಂಖ್ಯೆ ದೊರೆಯುವುದು. ಈ ಸಂಖ್ಯೆಯನ್ನು ಏಪ್ರಿಲ್ 16 ರಿಂದ ಮೇ 15 ರವರೆಗೆ ಮನೆಮನೆಗೆ ಭೇಟಿ ನೀಡುವ ಗಣತಿದಾರರಿಗೆ ನೀಡಿದಲ್ಲಿ, ಗಣತಿದಾರರು ಸ್ವಲ್ಪ ಸಮಯದಲ್ಲಿ ಗಣತಿ ಪೂರ್ಣಗೊಳಿಸಲು ಹಾಗೂ ಯಾವುದಾದರೂ ತಿದ್ದುಪಡಿ ಇದ್ದಲ್ಲಿ ಮಾಡಿಕೊಳ್ಳಬಹುದಾಗಿದೆ ಎಂದ ಅವರು, ಒಂದು ವೇಳೆ ಮೊಬೈಲ್ ಅಥವಾ ಕಂಪ್ಯೂಟರ್ ಇಲ್ಲದಿದ್ದಲ್ಲಿ ಸಮೀಪದ ಕಂಪ್ಯೂಟರ್ ಕೇಂದ್ರಗಳಿಂದ ಅಥವಾ ಸ್ನೇಹಿತರ ಮೊಬೈಲಿನಿಂದ ಮಾಹಿತಿ ಸಲ್ಲಿಸಿ ನೋಂದಣಿ ಸಂಖ್ಯೆಯನ್ನು ಪಡೆಯಬೇಕು ಎಂದು ಹೇಳಿದರು.

ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯ. ಇದು ದತ್ತಾಂಶ ಆಧಾರಿತ ನಿರ್ಧಾರಗಳಿಗೆ ಸಹಾಯ ಮಾಡುತ್ತದೆ. ಆರೋಗ್ಯ, ಶಿಕ್ಷಣ, ವಸತಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಮರ್ಪಕ ಸಂಪನ್ಮೂಲ ಹಂಚಿಕೆಗೆ ದಾರಿ ತೋರುತ್ತದೆ. ನಿಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯ. ಇದು ಕೇವಲ ಕರ್ತವ್ಯವಲ್ಲ— ಕರ್ನಾಟಕದ ಅಭಿವೃದ್ಧಿಗೆ ನಿಮ್ಮ ಕೊಡುಗೆಯಾಗಿದೆ. ಇಂದು ನೀಡುವ ನಿಖರ ಮಾಹಿತಿ, ನಾಳೆಯ ಉತ್ತಮ ನೀತಿಗಳು ಮತ್ತು ಸೇವೆಗಳಿಗೆ ಆಧಾರ ವಾಗುತ್ತದೆ. ಜನಗಣತಿಯಿಂದ ಯಾರು ಬಿಟ್ಟು ಹೋಗದಂತೆ ಸರ್ಕಾರ ಮುತುವರ್ಜಿ ವಹಿಸಿದೆ. ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ, ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ನಾವು ಎಲ್ಲರೂ ಕೈಜೋಡಿಸೋಣ ಎಂದು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

ಇದೇ ವೇಳೆ, ಜನಗಣತಿ ನಿರ್ದೇಶಕ ರಾಮಚಂದ್ರನ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸ್ವಯಂ ಗಣತಿ ವ್ಯವಸ್ಥೆಯ ಬಗ್ಗೆ ವಿವರವಾದ ಮಾಹಿತಿ ನೀಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ