Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊಲ್ಲಾಪುರದಲ್ಲಿ ಕರ್ನಾಟಕದ ಬಸ್ ಗಳಿಗೆ ಭಗವಾ ಧ್ವಜ ಕಟ್ಟಿ,‌ ಮಸಿ ಬಳಿದ ಶಿವಸೇನೆ

ಬೆಳಗಾವಿ : ಕರ್ನಾಟಕ ರಾಜ್ಯ ಸಾರಿಗೆ ಬಸ್ ಮೇಲೆ ಭಗವಾ ಧ್ವಜವನ್ನು ಕಟ್ಟಿ ಬಸ್ಸಿಗೆ ಕರಿ‌ ಮಸಿ ಬಳಿದ ಶಿವಸೇನೆ ಕಾರ್ಯಕರ್ತರು ಕರ್ನಾಟಕ ಸರಕಾರ ಮತ್ತು ಕರವೇ ವಿರುದ್ದ ಘೋಷಣೆ ಹಾಕಿರುವ ಘಟನೆ ಕೊಲ್ಲಾಪುರದಲ್ಲಿ ನಡೆದಿದೆ.


ಶುಕ್ರವಾರ ಬೆಳಗಾವಿಯಿಂದ ಸುಳೇಭಾವಿಗೆ ಹೊರಟಿದ್ದ ನಗರ ಸಂಚಾರಿ ಬಸ್ ನಲ್ಲಿ ಮರಾಠಿ ಮಾತನಾಡದ ಬಸ್ ಕಂಡಕ್ಟರ್ ಮೇಲೆ ಕೆಲ ಪುಂಡರು ಹಲ್ಲೆ ನಡೆಸಿದ್ದರು. ಇದರ ವಿರುದ್ದ ಕೊಲ್ಹಾಪುರದಲ್ಲಿ ಕರ್ನಾಟಕ ಬಸ್ ತಡೆದು ಪುಂಡಾಟ ನಡೆಸಲಾಗಿದೆ. ಕೊಲ್ಹಾಪುರ ಶಿವಸೇನೆ (ಠಾಕ್ರೆ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯ ಸರಕಾರ ಮತ್ತು ಕರವೇ ಕಾರ್ಯಕರ್ತ ವಿರೋಧ ಘೋಷಣೆ ಹಾಕಿ ಕೂಗಿ ಪ್ರತಿಭಟನೆ ನಡೆಸಿದ್ದಾರೆ.
ಕೊಲ್ಹಾಪುರದಿಂದ ಕರ್ನಾಟಕಕ್ಕೆ ಆಗಮಿಸುವ ಬಸ್ ಗಳ ಸಂಚಾರ ಸ್ಥಗಿತ ಮಾಡಲಾಗಿದೆ.

ಮಹಾರಾಷ್ಟ್ರ ಬಸ್ ತಡೆದು ಚಾಲಕನ ಮುಖಕ್ಕೆ ಮಸಿ: 10 ಮಂದಿ ಕಾರ್ಯಕರ್ತರ ಬಂಧನ

ಚಿತ್ರದುರ್ಗ: ಮರಾಠಿ ಮಾತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಬಸ್‌ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಘಟನೆ ಖಂಡಿಸಿ ನವ ನಿರ್ಮಾಣ ಸೇನೆ ಕಾರ್ಯಕರ್ತರು ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ- 48ರ ಗುಯಿಲಾಳ ಟೋಲ್‌ನಲ್ಲಿ ಮಹಾರಾಷ್ಟ್ರ ಬಸ್ ತಡೆದು ಚಾಲಕನಿಗೆ ಮಸಿ ಬಳಿದಿದ್ದಾರೆ. ಘಟನೆ ಸಂಬಂಧ ಐಮಂಗಲ ಠಾಣೆ ಪೊಲೀಸರು ಶನಿವಾರ 10 ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಮರಾಠಿಗರು ಪುಂಡಾಟ ನಡೆಸಿದ್ದಾರೆ ಎಂದು ಆರೋಪಿಸಿ ನವನಿರ್ಮಾಣ ಸೇನೆ ಸದಸ್ಯರು ಹಿರಿಯೂರು ತಾಲ್ಲೂಕು ಗುಯಿಲಾಳ ಟೋಲ್ ಬಳಿ ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ ತಡೆದ ಕಾರ್ಯಕರ್ತರು ಇಡಿ ಬಸ್‌ಗೆ ಕಪ್ಪು ಬಣ್ಣದ ಸ್ಪೇ ಸಿಂಪಡಿಸಿದರು. 'ಜೈ ಕರ್ನಾಟಕ, ಜೈ ಕನ್ನಡ, ಬೆಳಗಾವಿ ನಮ್ಮದು ಮರಾಠಿಗರು ಪುಂಡಾಟಿಕೆ ನಿಲ್ಲಿಸಬೇಕು' ಎಂದು ಬಸ್ ಮೇಲೆ ಬರೆದರು. ಬಸ್ ಚಾಲಕ ಹರಿ ಜಾದವ್ ಮುಖಕ್ಕೂ ಮಸಿ ಬಳಿದರು.

ಚಾಲಕ ಐಮಂಗಲ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿನವ ನಿರ್ಮಾಣ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ, ಮುಖಂಡ ಲಕ್ಷ್ಮಿಕಾಂತ್ ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?