Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಂಗಳೂರು ಕಾಲ್ತುಳಿತ : ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ-ಸಿದ್ದರಾಮಯ್ಯ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಘಟನೆ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಾಂತ್ವನ ಹೇಳಿದ್ದಾರೆ. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯ ಮುಖ್ಯಾಂಶಗಳು:

• ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ.

• ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

• ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

• ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದಲೂ ಕಾರ್ಯಕ್ರಮ ಆಯೋಜಿಸಲಾಗಿತ್ತು.

• ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರ ಇದಕ್ಕಾಗಿ ಬಹಳ ದುಃಖ ವ್ಯಕ್ತಪಡಿಸುತ್ತದೆ.

• ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.

• ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು.

• ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ.

• ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ; ಅವರ ಕುಟುಂಬ ವರ್ಗ, ವಾರೀಸುದಾರರಿಗೆ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

• ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ