Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿದ್ದೇಶ್ವರ ಸ್ವಾಮೀಜಿಯವರ ಮಾತುಗಳು ನಮ್ಮ ಜೀವನಕ್ಕೆ ಪ್ರೇರಣೆಯಾಗಬೇಕು ; ಈರಣ್ಣ ಕಡಾಡಿ

 

ಮೂಡಲಗಿ: ಬಯಲಲ್ಲಿ ಬಯಲಾಗಿ ಹೋಗುವುದೇ ಜೀವನ ಎಂದು ಹೇಳಿದ ಸಿದ್ದೇಶ್ವರ ಸ್ವಾಮೀಜಿಯವರ ಮಾತುಗಳು ನಮ್ಮ ಜೀವನಕ್ಕೆ ಪ್ರೇರಣೆಯಾಗಬೇಕು. ನಾವು ಎಷ್ಟೇ ಗಳಿಸಿದರೂ, ಕೋಟಿ, ಕೋಟಿ ಕೂಡಿಟ್ಟರು ಎಲ್ಲವನ್ನು ಇಲ್ಲೆ ಬಿಟ್ಟು ಸಿದ್ದೇಶ್ವರ ಸ್ವಾಮೀಜಿಯವರ ಮಾತಿನಂತೆ ಬಯಲಲ್ಲಿ ಬಯಲಾಗಿಯೇ ಹೋಗುವುದು ಶತಸಿದ್ಧ. ಹೀಗಿರುವಾಗ ಕೃಷಿಯಲ್ಲಿ ಲಾಭದಾಯಕದ ಆಸೆಗಾಗಿ ಎಲ್ಲ ಬೆಳೆಗಳಿಗೂ ವಿಷ ಸಿಂಪಡಿಸಿ ಎಲ್ಲರ ಜೀವಕ್ಕೂ ಕುತ್ತು ತರುವ ಪದ್ಧತಿ ನಿಲ್ಲಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಶನಿವಾರ ತಾಲೂಕಿನ ವಡೇರಹಟ್ಟಿ ಗ್ರಾಮದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಶಿವಯೋಗಿ ಗಳ ಆಶ್ರಮದಲ್ಲಿ ಆಯೋಜಿಸಿದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಶಿವಯೋಗಿಗಳ, ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಹಾಗೂ ಜ್ಞಾನಯೋಗಿ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಗುರು ನಮನ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ರೈತರು ರಾಸಾಯನಿಕ ಗೊಬ್ಬರವನ್ನು ನಮ್ಮ ಭೂಮಿಗೆ ಹಾಕುವುದರಿಂದ ಅದರಿಂದ ಆಗುವ ನಷ್ಟದ ಬಗ್ಗೆ ಅರಿಯಬೇಕಾಗಿದೆ. ಕೃಷಿ ಬರೀ ಲಾಭದಾಯಕ ಉದ್ಯೋಗವಾದ ಪರಿಣಾಮ ಇಂದಿನ ದಿನ ನಮಗೆ ಅನ್ನ ನೀಡುವ ಭೂಮಿಗೆ, ಹಾಲು ಕೊಡುವ ಗೋವಿಗೆ, ನಮ್ಮ ಮಕ್ಕಳಿಗೂ, ನಮ್ಮ ಕುಟುಂಬಗಳಿಗೂ ವಿಷಪೂರಿತ ಆಹಾರವನ್ನು ನೀಡುತ್ತಿರುವುದು ದುರಂತದ ವಿಷಯ. ನಾವೆಲ್ಲರೂ ಯಾವ ರೈತ ತನ್ನ ಬೆಳೆಗಳಿಗೆ ವಿಷ ಸಿಂಪಡಿಸದೆ ಸಾವಯವ ಪದ್ಧತಿಯಲ್ಲಿ ಕೃಷಿ ಮಾಡುತ್ತಾನೊ ಅಂತಹವನನ್ನು ಕೈ ಮುಗಿದು ಗೌರವಿಸೋಣ. ಅಂತಹ ರೈತರನ್ನು ನೋಡಿ ಹೆಮ್ಮೆ ಪಡುವ ಮೂಲಕ ಅವರನ್ನು ಪ್ರೋತ್ಸಾಹಿಸೋಣ. ಸಾವಯವ ಕೃಷಿ ಪದ್ಧತಿಗೆ ಬೆಂಬಲ ಸೂಚಿಸೋಣ ಎಂದರು.

ನಡೆದಾಡುವ ದೇವರೆಂದೇ ಪ್ರಸಿದ್ಧರಾದ ವಿಜಯಪುರ ಜ್ಞಾನಯೋಗಾಶ್ರಮದ ಪರಮಪೂಜ್ಯ ಸಿದ್ದೇಶ್ವರ ಶ್ರೀಗಳು ತಮ್ಮ ಜೀವನದುದ್ದಕ್ಕೂ ಸಮಾಜದ ಏಳಿಗೆಗಾಗಿ ಶ್ರಮಿಸಿ, ಸಮಾಜಕ್ಕೆ ಮಾದರಿಯಾಗಿ ಲಕ್ಷಾಂತರ ಜನರಿಗೆ ದಾರಿದೀಪವಾದ ದಿವ್ಯ ಚೇತನರಾಗಿದ್ದಾರೆ. ಜ್ಞಾನ ದಾಸೋಹದ ಮೂಲಕ ನಮ್ಮೆಲ್ಲರ ಬದುಕನ್ನು ಪರಿವರ್ತನೆ ಮಾಡಿ ಅವರ ಬೆಳಕನ್ನು ಚೆಲ್ಲಿದ್ದು, ಪ್ರತಿಯೊಂದು ಜೀವಿಗಳಲ್ಲಿ ಅವರ ಆರ್ದಶಗಳನ್ನು, ತತ್ವಗಳನ್ನು ಪಾಲಿಸಿ, ಅಪರೂಪದ ಸಂತರೆಂದು ಅವರ ಬದುಕಿನ ಗುಣದಾನ ಮಾಡಿ ಭಕ್ತಿಯಿಂದ ಸ್ಮರಿಸಿದರು.

ಮನುಷ್ಯನ ಸ್ವಭಾವವನ್ನು ಒಂದೇ ಸಲ ತಿದ್ದಲು ಸಾಧ್ಯವಿಲ್ಲ. ಪ್ರತಿನಿತ್ಯ ಪ್ರವಚನ, ಆಧ್ಯಾತ್ಮಿಕ ಚಟುವಟಿಕಗಳಿಗೆ ನಮ್ಮನ್ನು ನಾವೇ ತೋಡಗಿಸಿಕೊಳ್ಳುವುದರ ಮುಖಾಂತರ ಪೂಜ್ಯರು ಹೇಳಿದ ಮಾತನ್ನು ನಮ್ಮ ವೈಯಕ್ತಿಕ ಬದುಕಿಗೆ ಅಳವಡಿಸಿಕೊಳ್ಳುವ ಮೂಲಕ ಒಂದು ಸ್ವಲ್ಪ ಬದಲಾವಣೆಯಾಗಲಿಕ್ಕೆ ಸಾಧ್ಯವಿದೆ. ಗುರುವಿನ ಕೃಪೆಗೆ ಪಾತ್ರರಾಗಬೇಕಾದರೇ ಪೂಜ್ಯರುಗಳು ಮಾಡಿಹೊದ ಕೆಲಸಗಳನ್ನು ನಮ್ಮ ಜೊತೆಗೆ ಇವೆ. ಪರಂಪರೆಯನ್ನು ಮಂದುವರಿಸುವಂತಹ ಕಾರ್ಯವನ್ನು ನಾವೆಲ್ಲರೂ ಸೇರಿ ಮಾಡೋಣ ಪ್ರತಿ ವರ್ಷವು ಕೂಡಾ ಗುರು ನಮನ ಮಹೋತ್ಸವ ಕಾರ್ಯಕ್ರಮ ಯಶಸ್ವಿಯಾಗಲಿ ನಡೆಯಲಿ ನಮ್ಮ ಬದುಕಿನಲ್ಲಿ ಒಂದಿಷ್ಟು ಬದಲಾವಣೆ ತರಲಿ ಎಂದರು.

ನಾಡಿನ ಚಿಂತಕ,ಶಿಕ್ಷಕ ಅಶೋಕ ಹಂಚಲಿ ಅವರು ರೈತನ ಬದುಕು,ಹಳ್ಳಿಯ ಸೊಗಡು,ಜಾನಪದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕವಲಗುಡ್ಡ ಪೂಜ್ಯರಾದ ಅಮರೇಶ್ವರ ಮಹಾರಾಜರು, ಶ್ರೀ ಗುರುಪ್ರಸಾದ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಪ್ರಮುಖರಾದ ಮಾರುತಿ ತೋಳಮರಡಿ, ನಾರಾಯಣ ಸ್ವಾಮಿಗಳು, ಹಾಲಪ್ಪ ಮಳಿವಡೇರ, ಶ್ರೀಶೈಲ ತುಪ್ಪದ, ಮಾರುತಿ ಪೂಜೇರಿ, ಭಗವಂತ ಧರ್ಮಟ್ಟಿ, ಶಂಕರ ಧರ್ಮಟ್ಟಿ ಸೇರಿದಂತೆ ಸ್ಥಳೀಯ ಮುಖಂಡರು, ಆಶ್ರಮದ ಭಕ್ತಾಧಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ