Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ : ರೈಲ್ವೆ ಪ್ರಯಾಣಿಕರಿಗೆ ವಿಶೇಷ ಸೂಚನೆ

 

ಬೆಳಗಾವಿ: ಪ್ರಯಾಣಿಕರ ಅನುಕೂಲಕ್ಕಾಗಿ, ಬೆಳಗಾವಿ ಮತ್ತು ಮೀರಜ್ ನಿಲ್ದಾಣಗಳ ನಡುವಿನ ಕಾಯ್ದಿರಿಸದ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಗಿದೆ.

ರೈಲುಗಳ ಸಂಖ್ಯೆ 07301/07302 ಬೆಳಗಾವಿ-ಮೀರಜ್-ಬೆಳಗಾವಿ ಮತ್ತು 07303/07304 ಬೆಳಗಾವಿ-ಮಿರಜ್- ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರವನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಗಿದೆ. ಇದಕ್ಕೂ ಮೊದಲು ಈ ರೈಲುಗಳ ಸಂಚಾರವನ್ನು ಜನವರಿ 31, 2025 ರವರೆಗೆ ಓಡಿಸಲು ಸೂಚಿಸಲಾಗಿತ್ತು. ಈ ರೈಲುಗಳು ಅಸ್ತಿತ್ವದಲ್ಲಿರುವ ಸಮಯ ಮತ್ತು ನಿಲುಗಡೆಗಳೊಂದಿಗೆ ಚಲಿಸುತ್ತವೆ.

ರೈಲು ಸಂಚಾರ ಭಾಗಶಃ ರದ್ದು ಮುಂದುವರಿಕೆ

ಕ್ಯಾಸಲ್ ರಾಕ್-ಲೋಂಡಾ ನಿಲ್ದಾಣಗಳ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಮತ್ತು ಎಂಜಿನಿಯರಿಂಗ್ ಕಾಮಗಾರಿ ಸಲುವಾಗಿ ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ದಾಣಗಳ ನಡುವೆ ರೈಲು ಸಂಖ್ಯೆ 17333/17334 ರ ಭಾಗಶಃ ರದ್ದತಿಯನ್ನು ವಿಸ್ತರಿಸಲಾಗುತ್ತಿದೆ.

ಫೆಬ್ರವರಿ 28, 2025 ರವರೆಗೆ, ರೈಲು ಸಂಖ್ಯೆ 17333 ಮೀರಜ್-ಕ್ಯಾಸಲ್ ರಾಕ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಲೋಂಡಾವರೆಗೂ ಮಾತ್ರ ಸಂಚರಿಸಲಿದೆ. ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ದಾಣಗಳ ನಡುವಿನ ಪ್ರಯಾಣ ರದ್ದುಗೊಳಿಸಲಾಗಿದೆ.

ಫೆಬ್ರವರಿ 28, 2025 ರವರೆಗೆ, ರೈಲು ಸಂಖ್ಯೆ 17334 ಕ್ಯಾಸಲ್ ರಾಕ್-ಮೀರಜ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಕ್ಯಾಸಲ್ ರಾಕ್ ನಿಲ್ದಾಣದ ಬದಲು ಲೋಂಡಾ ನಿಲ್ದಾಣದಿಂದ ಹೊರಡಲಿದೆ. ಕ್ಯಾಸಲ್ ರಾಕ್ ಮತ್ತು ಲೋಂಡಾ ನಿಲ್ದಾಣಗಳ ನಡುವಿನ ಪ್ರಯಾಣ ರದ್ದುಗೊಂಡಿದೆ. ಈ ಮೊದಲು, ಈ ರೈಲುಗಳನ್ನು ಜನವರಿ 31, 2025 ರವರೆಗೆ ಭಾಗಶಃ ರದ್ದುಗೊಳಿಸಲು ಸೂಚಿಸಲಾಗಿತ್ತು, ಅದನ್ನು ಈಗ ವಿಸ್ತರಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ